ಹಣ ಸಾಗಣೆ, ಹಂಚಿಕೆ ಮೇಲೆ ಐಟಿ ಕಣ್ಣು
Team Udayavani, Apr 4, 2018, 6:00 AM IST
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಣ ವರ್ಗಾವಣೆ, ಸಾಗಣೆ, ದಾಸ್ತಾನು ಬಗ್ಗೆ ಆದಾಯ ತೆರಿಗೆ
ಇಲಾಖೆ ಹದ್ದಿನ ಕಣ್ಣಿಟ್ಟಿದೆ.
ಚುನಾವಣಾ ಆಯೋಗದ ಸೂಚನೆ ಮೇರೆಗೆ ಹಣಕಾಸು ವಹಿವಾಟು ಮೇಲೆ ನಿಗಾವಹಿಸಲು ಹಣ ಹಂಚಿಕೆ ಬಗ್ಗೆ ಸಾರ್ವಜನಿಕರಿಂದ ದೂರು ಸ್ವೀಕರಿಸಲು ಹಾಗೂ ತುರ್ತು ಕಾರ್ಯಾಚರಣೆಗಾಗಿ ಕ್ವೀನ್ಸ್ ರಸ್ತೆಯಲ್ಲಿರುವ ಐಟಿ ಕಚೇರಿಯಲ್ಲಿ 24 ಗಂಟೆಗಳ ನಿಯಂತ್ರಣ ಕೊಠಡಿ ತೆರೆಯಲಾಗಿದೆ. ಒಂದು ವೇಳೆ ಅಭ್ಯರ್ಥಿಗಳು/ ಪಕ್ಷದ ಕಾರ್ಯಕರ್ತರು ಅಕ್ರಮವಾಗಿ ಹಣ, ಇತರೆ ಮೌಲ್ಯಯುತ ವಸ್ತುಗಳನ್ನು ನೀಡಿ ಆಮಿಷವೊಡ್ಡಿದ್ದರೆ ಕೂಡಲೇ ಈ ನಿಯಂತ್ರಣ ಕೊಠಡಿಗೆ ಸಾರ್ವಜನಿಕರು ದೂರು ನೀಡಬಹುದು.
ಸ್ಪಷ್ಟ ಹಾಗೂ ನಿಖರ ಮಾಹಿತಿ ಮೇರೆಗೆ ನಿಗದಿತ ಸ್ಥಳಕ್ಕೆ ಧಾವಿಸಿ ಅಕ್ರಮವೆಸಗಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಆದಾಯ ತೆರಿಗೆ ಇಲಾಖೆ ನಿಯಂತ್ರಣ ಕೊಠಡಿ ನಂಬರ್
080-22861126, ಮೊಬೈಲ್ ನಂ.8277413614, 8277422825 ಮತ್ತು ಟೋಲ್ ಫ್ರಿ ನಂ. 18004252115,
ಫ್ಯಾಕ್ಸ್ ನಂ. 080-22866916 ಹಾಗೂ ಈ-ಮೇಲ್ ವಿಳಾಸ [email protected].
in ಈ ಮೂಲಕ ಸಾರ್ವಜನಿಕರು ಪಾರದರ್ಶಕ ಚುನಾವಣೆಗೆ ಸಹಕರಿಸುವಂತೆ ಆದಾಯ ತೆರಿಗೆ ಇಲಾಖೆ ಮನವಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ