ಸೆಲ್ಫಿ ಅಪಾಯ ವಲಯ ಗುರುತಿಸಲು ಸೂಚನೆ
Team Udayavani, Apr 4, 2018, 10:10 AM IST
ಹೊಸದಿಲ್ಲಿ: ಪ್ರವಾಸಿ ತಾಣಗಳಲ್ಲಿ ಸೆಲ್ಫಿ ತೆಗೆಯಲು ಹೋಗಿ ಸಾವು ಸಂಭವಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅಂಥ ಪ್ರವಾಸಿ ತಾಣಗಳನ್ನು ಗುರುತಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ ಎಂದು ಕೇಂದ್ರ ಗೃಹ ಖಾತೆ ಸಹಾಯಕ ಸಚಿವ ಹಂಸರಾಜ್ ಅಹಿರ್ ಲೋಕಸಭೆಗೆ ನೀಡಿದ ಲಿಖೀತ ಉತ್ತರದಲ್ಲಿ ತಿಳಿಸಿದ್ದಾರೆ. ಪ್ರವಾಸಿ ಸ್ಥಳಗಳಿಗೆ ತೆರಳುವವರಿಗೆ ಸೆಲ್ಫಿ ತೆಗೆಯುವಾಗ ಕೈಗೊಳ್ಳಬೇಕಾದ ಮುಂಜಾಗರೂಕತೆ, ದುರಂತ ಉಂಟಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಸೂಚಿಸಲಾಗಿದೆ. ಕೆಲವೆಡೆ ‘ಸೆಲ್ಫಿ ನಿಷೇಧ ವಲಯ’ ಎಂಬ ಫಲಕಗಳನ್ನು ಹಾಕುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ ಅಹಿರ್. ಈ ಬಗ್ಗೆ ಪ್ರವಾಸೋದ್ಯಮ ಸಚಿವಾಲಯ ರಾಜ್ಯಗಳಿಗೆ ಸೂಚನೆ ಕಳುಹಿಸಿದೆ ಎಂದು ಹೇಳಿದ್ದಾರೆ ಕೆಲವೊಂದು ಸ್ಥಳಗಳಲ್ಲಿ ಸೆಲ್ಫಿ ತೆಗೆಯಬಾರದು ಎಂದು ಘೋಷಿಸುವಂತೆಯೂ ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ