9ರಂದು ಕಾವೇರಿ ಕುರಿತ ಕೇಂದ್ರದ ಅರ್ಜಿ ವಿಚಾರಣೆ
Team Udayavani, Apr 4, 2018, 9:50 AM IST
ಹೊಸದಿಲ್ಲಿ: ಕಾವೇರಿ ತೀರ್ಪಿನಲ್ಲಿ ತಿಳಿಸಿರುವ ಕೆಲವು ಅಂಶಗಳಲ್ಲಿ ಸ್ಪಷ್ಟತೆ ಹಾಗೂ ಸಮಿತಿ ರಚನೆಗೆ ಕಾಲಾವಕಾಶ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ಪುರಸ್ಕರಿಸಿರುವ ಸುಪ್ರೀಂ ಕೋರ್ಟ್, ಏ.9ರಂದು ವಿಚಾರಣೆ ನಿಗದಿಪಡಿಸಿದೆ.
ಅರ್ಜಿಯನ್ನು ತ್ವರಿತ ವಿಚಾರಣೆಗೆ ಒಳಪಡಿಸಬೇಕು ಎಂದು ಕೇಂದ್ರ ಸರ್ಕಾರದ ಪರ ವಕೀಲ ವಾಸಿಂ ಖಾದ್ರಿ ಕೇಳಿಕೊಂಡಿದ್ದು, ಅದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ, ತಮಿಳುನಾಡು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯ ದಿನವೇ(ಏ.9) ಈ ಅರ್ಜಿಯನ್ನೂ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ತಿಳಿಸಿದರು. ಕಾವೇರಿ ತೀರ್ಪಿನಲ್ಲಿ ಪ್ರಸ್ತಾಪಿಸಲಾಗಿರುವ ಸ್ಕೀಮ್ ಎಂಬ ಪದದ ಬಗ್ಗೆ ಕೇಂದ್ರ ಸರ್ಕಾರ ಅರ್ಜಿಯಲ್ಲಿ ಸ್ಪಷ್ಟನೆ ಕೇಳಿತ್ತು. ಜತೆಗೆ, ಕರ್ನಾಟಕದಲ್ಲಿ ಚುನಾವಣೆಯಿರುವ ಹಿನ್ನೆಲೆಯಲ್ಲಿ ಸುಪ್ರೀಂ ಆದೇಶ ಪಾಲನೆಗೆ 3 ತಿಂಗಳ ಕಾಲಾವಕಾಶವನ್ನೂ ಕೋರಿತ್ತು.
ಮುಂದುವರಿದ ಪ್ರತಿಭಟನೆ: ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಕೋರಿ ತಮಿಳುನಾಡಿನಾದ್ಯಂತ ನಡೆಯುತ್ತಿರುವ ಪ್ರತಿಭಟನೆ 3 ದಿನ ಪೂರೈಸಿದೆ. ಎಐಎಡಿಎಂಕೆ, ಡಿಎಂಕೆ ನಿರಶನ, ಪ್ರತಿಭಟನೆ ನಡೆಸಿವೆ.
ಉಪವಾಸದ ಮಧ್ಯೆ ಬಿರಿಯಾನಿ
ಉಪವಾಸ ಸತ್ಯಾಗ್ರಹ ನಡೆಯುತ್ತಿರುವಾಗ ಅಲ್ಲಿ ಬಿರಿಯಾನಿ, ಟೊಮ್ಯಾಟೋ ರೈಸ್ಗೇನು ಕೆಲಸ? ಖಂಡಿತಾ ಕೆಲಸ ಇದೆ. ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ವೆಲ್ಲೂರ್ನಲ್ಲಿ ತಮಿಳುನಾಡಿನ ಆಡಳಿತಾರೂಢ ಎಐಎಡಿಎಂಕೆ ಪಕ್ಷದ ಸಿಎಂ ಪಳನಿಸ್ವಾಮಿ ನೇತೃತ್ವದಲ್ಲಿ ಒಂದು ದಿನದ ನಿರಶನ ಕೈಗೊಂಡಿದ್ದಾಗ, ಎಲ್ಲರಿಗೂ ಮಧ್ಯಾಹ್ನದ ‘ಭೋಜನ ವಿರಾಮ’ ನೀಡಲಾಗಿದೆ. ಸತ್ಯಾಗ್ರಹಿಗಳು ಬಿಸಿಬಿಸಿ ಬಿರಿಯಾನಿ, ಟೊಮ್ಯಾಟೋ ಬಾತ್ ಸವಿದಿದ್ದಾರೆ. ಹೆಸರು ಉಪವಾಸ ಸತ್ಯಾಗ್ರಹ. ತೆರೆ ಮರೆಯಲ್ಲಿ ಭರ್ಜರಿ ಭೋಜನ. ಹೀಗೆ, ಉಪವಾಸ ಕೂತವರು ಲೆಕ್ಕಹಾಕಿ ತಿಂದಿದ್ದನ್ನು ಯಾರೋ ವಿಡಿಯೋ ಮಾಡಿದ್ದು, ಅದೀಗ ವೈರಲ್ ಆಗಿದೆ. ಜನರ ಕಣ್ಣಿಗೆ ಮಣ್ಣೆರೆಚುವ ನಿಜಬಣ್ಣವೂ ಬಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Covishield ಲಸಿಕೆಯಿಂದ ಮತ್ತೊಂದು ಸೈಡ್ಎಫೆಕ್ಟ್!
3rd Term; ನೂರಲ್ಲ, 125 ದಿನಗಳ ಯೋಜನೆ ಸಿದ್ಧ: ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Tollywood: ಪ್ರಶಾಂತ್ ನೀಲ್ – Jr. NTR ಸಿನಿಮಾಕ್ಕೆ ಈ ಟೈಟಲ್ ಫಿಕ್ಸ್?
Kannada Cinema; ‘ಸ್ವಪ್ನ ಮಂಟಪ’ದಲ್ಲಿ ವಿಜಯ ರಾಘವೇಂದ್ರ-ರಂಜನಿ; ಬರಗೂರು ನಿರ್ದೇಶನ
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
ಕಾರ್ತಿಕ್ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?
Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ