ಹೆದರಬೇಡಿ ಧರ್ಮ ಒಡೆಯಲ್ಲ: ಶಾ


Team Udayavani, Apr 4, 2018, 6:00 AM IST

31.jpg

ಶಿವಯೋಗ ಮಂದಿರ (ಬಾಗಲಕೋಟೆ): “”ವೀರಶೈವ ಲಿಂಗಾಯತ ಸಮುದಾಯವನ್ನು ಹಿಂದೂ ಧರ್ಮದಿಂದ ಒಡೆಯಲು ಬಿಡುವುದಿಲ್ಲ. ಹೆದರಬೇಡಿ, ಬಿಜೆಪಿ ಧರ್ಮ ಒಡೆಯಲು ಅವಕಾಶ ಕೊಡುವುದಿಲ್ಲ” ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ನಡೆದ ವೀರಶೈವ ಲಿಂಗಾಯತ ಮಠಾಧಿಪತಿಗಳ ಸಭೆಯಲ್ಲಿ ಮಾತನಾಡಿದ ಅಮಿತ್‌ ಶಾ, “ಹಿಂದಿನ ಪ್ರಧಾನಿಗಳು ದೇಗುಲಕ್ಕೆ ಬರಲು ಹಿಂದೇಟು ಹಾಕುತ್ತಿದ್ದರು. ಮೋದಿ ಸರಕಾರ ದೃಷ್ಟಿಕೋನ ಬದಲಿಸುವ ಕೆಲಸ ಮಾಡಿದೆ. ಹೀಗಾಗಿ ಯಾರೂ ಅಂಜಬೇಕಿಲ್ಲ. ವೀರಶೈವ ಲಿಂಗಾಯತ ಒಡೆಯಲು ಬಿಡುವುದಿಲ್ಲ. ನಮ್ಮ ಮೇಲೂ ಜವಾ ಬ್ದಾರಿ ಇದೆ. ನಾನು ರಾಜಕೀಯ ಮಾಡಲು ಇಲ್ಲಿಗೆ ಬಂದಿಲ್ಲ. ಸಂತರ ಆಶೀರ್ವಾದ ಪಡೆಯಲು ಬಂದಿದ್ದೇನೆ’ ಎಂದು ಹೇಳಿದರು.

ಸಭೆಗೂ ಮುನ್ನ, ಪ್ರತ್ಯೇಕ ಧರ್ಮ ಮಾನ್ಯತೆಗೆ ವಿರೋಧ ವ್ಯಕ್ತಪಡಿಸುತ್ತಲೇ ಬಂದಿರುವ ವೀರಶೈವ ಲಿಂಗಾಯತ ಮಠಾಧಿಪತಿಗಳು, ಅಮಿತ್‌ ಶಾ ಅವರಿಗೆ ರಾಜ್ಯ ಸರಕಾರದ ಶಿಫಾರಸು ತಿರಸ್ಕರಿಸುವಂತೆ ಹಕ್ಕೊತ್ತಾಯ ಮಂಡಿಸಿದರು. ಜತೆಗೆ ವೀರಶೈವ ಲಿಂಗಾಯತರನ್ನು ಒಬಿಸಿಗೆ ಸೇರಿಸಲು ಮನವಿ ಮಾಡಿಕೊಂಡರು.

ಬಾದಾಮಿ ತಾಲೂಕು ಶಿವಯೋಗ ಮಂದಿರದಲ್ಲಿ ಮಂಗಳವಾರ ರಾಷ್ಟ್ರೀಯ ವೀರಶೈವ ಮಠಾಧೀಶರ ಪರಿಷತ್‌ ನೇತೃತ್ವದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರೊಂದಿಗೆ ವಿವಿಧ ಜಗದ್ಗುರುಗಳು ಹಾಗೂ ಸ್ವಾಮೀಜಿಗಳ ಸಭೆಯಲ್ಲಿ ಪಂಚಪೀಠಗಳ ಪೈಕಿ ಭಾಗಿಯಾಗಿದ್ದ ಕಾಶೀ ಪೀಠದ ಡಾ|ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಶ್ರೀಶೈಲದ ಶ್ರೀ ಚೆನ್ನಸಿದ್ಧರಾಮ ಪಂಡಿತಾರಾಧ್ಯ ಸ್ವಾಮೀಜಿ, ಉಜ್ಜಯಿನಿ ಪೀಠದ ಸಿದ್ಧಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯ ಶ್ರೀ ಹಾಗೂ ಶಿವಯೋಗ ಮಂದಿರದ ಅಧ್ಯಕ್ಷ ಡಾ| ಸಂಗನಬಸವ ಶ್ರೀಗಳು ಅಮಿತ್‌ ಶಾ ಅವರಿಗೆ ಯಾವುದೇ ಕಾರಣಕ್ಕೂ ಧರ್ಮ ವಿಭಜನೆಗೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದರು.

ಸಿದ್ದರಾಮಯ್ಯ ತಮ್ಮನ್ನು ತಾವು “ಅಹಿಂದ’ ನಾಯಕ ಎಂದು ಹೇಳಿ ಕೊಳ್ಳುತ್ತಾರೆ. ಆದರೆ, ಅವರಿಗೆ ಕಾಳಜಿ ಇರುವುದು ಅಲ್ಪಸಂಖ್ಯಾಕರ ಬಗ್ಗೆ ಮಾತ್ರ. ಹಿಂದುಳಿದ ವರ್ಗದವರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದಿದ್ದಾರೆ ಅಮಿತ್‌ ಶಾ. ಹಾವೇರಿಯ ಕಾಗಿನೆಲೆಯಲ್ಲಿ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು. “”ಯಡಿಯೂರಪ್ಪ ಸರಕಾರ ಅಧಿಕಾರಕ್ಕೆ ಬಂದರೆ ಹಿಂದುಳಿದ ವರ್ಗದವರಿಗೆ ನ್ಯಾಯ, ಗೌರವ ಕೊಡುವ ಕೆಲಸ ಮಾಡುತ್ತದೆ. ಹಿಂದುಳಿದ ವರ್ಗದವರಿಗೆ ಸಂವಿಧಾನಬದ್ಧ ಹಕ್ಕು ತಂದು ಕೊಡುವ ಮಸೂದೆಯನ್ನು ಬಿಜೆಪಿ ಮಂಡಿಸಿದೆ. ಕಾಂಗ್ರೆಸ್‌ ಎಷ್ಟೇ ವಿರೋಧ ಮಾಡಿದರೂ ಹಿಂದುಳಿದ ವರ್ಗದವರಿಗೆ ಅನುಕೂಲವಾಗುವ ಆ ಮಸೂದೆಯನ್ನು ಸಂಸತ್‌ನ ಎರಡೂ ಸದನಗಳಲ್ಲಿ ಪಾಸ್‌ ಮಾಡಿ ಕಾನೂನು ಮಾಡುತ್ತೇವೆ ಎಂದು ಶಾ ಹೇಳಿದರು.

ಟಾಪ್ ನ್ಯೂಸ್

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

congress-workers

ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್‌ ಆದೇಶದಲ್ಲೇನಿದೆ?

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು

4-uv-fusion

Movie Review: ಜೀವನ ಒಂದು ಹೋರಾಟ, ಆ ಹೋರಾಟ ನಿರಂತರ

3-uv-fusion

Life Lesson: ಜಾತ್ರೆಯಲ್ಲಿ ಸಿಕ್ಕಾಕೆ ಕಲಿಸಿದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.