ಸಲ್ಮಾನ್ಗೆ ಜೈಲು:ಕೋರ್ಟ್ ಹೊರಗೆ ಪಟಾಕಿ ಸಿಡಿಸಿ ಸಂಭ್ರಮ
Team Udayavani, Apr 5, 2018, 3:31 PM IST
ಜೋಧ್ಪುರ: ಕೃಷ್ಣಮೃಗ ಬೇಟೆಯಾಡಿದ ಪ್ರಕರಣದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ 5 ವರ್ಷಗಳ ಜೈಲು ಶಿಕ್ಷೆ ವಿಧಿಸಿರುವ ಕೋರ್ಟ್ ತೀರ್ಪನ್ನು ಸ್ವಾಗತಿಸಿ ಬಿಷ್ಣೋಯಿ ಸಮುದಾಯದ ಜನರು ಜೋಧ್ಪುರ್ ಸಿಜೆ ನ್ಯಾಯಾಲಯದ ಎದುರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ.
ಕೋರ್ಟ್ ತೀರ್ಪು ಹೊರ ಬರುತ್ತಿದ್ದಂತೆ ಜಮಾವಣೆಗೊಂಡ ನೂರಾರು ಯುವಕರು ಪಟಾಕಿ ಸಿಡಿಸಿ ಕೇಕೆ ಹಾಕಿ ಸಂಭ್ರಮಿಸಿದರು. ನ್ಯಾಯಕ್ಕೆ , ಹೋರಾಟಕ್ಕೆ ಜಯ ಸಿಕ್ಕಿದೆ, ಅನ್ಯಾಯಕ್ಕೆ ಜೈಲಾಗಿದೆ ಎನ್ನುವ ಘೋಷಣೆಗಳನ್ನು ಕೂಗಿದರು.
ಕೃಷ್ಣ ಮೃಗಗಳ ಹತ್ಯೆ ಪ್ರಕರಣದ ದೂರು ದಾಖಲಿಸುವುದರಿಂದ ಹಿಡಿದು ನ್ಯಾಯಾಲಯದ ಮೆಟ್ಟಿಲೇರಿ ಸಾಕ್ಷಿ ಹೇಳುವ ಮೂಲಕ ಸಲ್ಮಾನ್ ಖಾನ್ಗೆ ಜೈಲು ಶಿಕ್ಷೆ ಯಾಗುವ ವರೆಗೆ ಬಿಷ್ಣೋಯಿ ಜನರು ಹೋರಾಟ ನಡೆಸಿದ್ದರು.
ಪ್ರಕರಣದ ಇತರ ಆರೋಪಿಗಳಾದ ಸೈಫ್ ಅಲಿ ಖಾನ್, ಟಬು, ಸೋನಾಲಿ ಬೆಂದ್ರೆ ಮತ್ತು ನೀಲಂ ಕೋಠಾರಿ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
1998 ರ ಆಕ್ಟೋಬರ್ 2 ರಂದು ಜೋಧ್ಪುರ್ ಹೊರವಲಯದಲ್ಲಿ ಕಂಕಣಿ ಎಂಬಲ್ಲಿ 2 ಕೃಷ್ಣ ಮೃಗಗಳನ್ನು ಗುಂಡಿಕ್ಕಿ ಹತ್ಯೆಗೈದಿದ್ದರು. ‘ಹಮ್ ಸಾಥ್ ಸಾಥ್ ಹೇ’ ಚಿತ್ರದ ಚಿತ್ರೀಕರಣಕ್ಕೆ ತೆರಳಿದ್ದ ವೇಳೆ ಈ ಕೃತ್ಯ ಎಸಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ