ಜೋಧ್‌ಪುರ ಸೆಂಟ್ರಲ್‌ ಜೈಲಿನಲ್ಲಿ ಸಲ್ಮಾನ್‌; ಕೈದಿ ಆಸಾ ರಾಮ್‌ ಸಹವಾಸ


Team Udayavani, Apr 5, 2018, 7:17 PM IST

Salman-in-Jail-700.jpg

ಹೊಸದಿಲ್ಲಿ : ಹದಿನೆಂಟು ವರ್ಷಗಳ ಹಿಂದೆ ಎರಡು ಕೃಷ್ಣ ಮೃಗಗಳನ್ನು ಹತ್ಯೆ ಗೈದ ಅಪರಾಧಕ್ಕಾಗಿ ಐದು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿ ಇಂದು ಜೋಧ್‌ಪುರ ಸೆಂಟ್ರಲ್‌ ಜೈಲನ್ನು ಸೇರಿಕೊಂಡಿರುವ ಬಾಲಿವುಡ್‌ ಸೂಪರ್‌ ಹಿಟ್‌ ನಟ ಸಲ್ಮಾನ್‌ ಖಾನ್‌, ಇಂದು ರಾತ್ರಿಯ ತಮ್ಮ ಜೈಲು ವಾಸವನ್ನು 13ರ ಹರೆಯದ ಬಾಲಕಿಯ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಘೋಷಿತ ದೇವಮಾನವ ಆಸಾರಾಂ ಬಾಪು ಅವರನ್ನು ಇರಿಸಲಾಗಿರುವ  2ನೇ ನಂಬರ್‌ ಜೈಲು  ಕೋಣೆಯಲ್ಲಿ ಕಳೆಯಲಿದ್ದಾರೆ.

ಸಲ್ಮಾನ್‌ ಖಾನ್‌ ಬಂಧಿಯಾಗಿರುವ ಜೋಧ್‌ಪುರ ಜೈಲಿಗೆ ಬಿಗಿ ಭದ್ರತೆಯನ್ನು ಕಲ್ಪಿಸಲಾಗಿದೆ. ನಾಳೆ ಶುಕ್ರವಾರ ಸಲ್ಮಾನ್‌ ಬೇಲ್‌ ಅರ್ಜಿಯನ್ನು ನ್ಯಾಯಾಲಯ ವಿಚಾರಣೆಗೆ ಎತ್ತಿಕೊಳ್ಳಲಿದೆ. 

ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣದಲ್ಲಿ ಸಲ್ಮಾನ್‌ ಖಾನ್‌ ಇದೇ ಜೋಧ್‌ಪುರ ಸೆಂಟ್ರಲ್‌ ಜೈಲಿನಲ್ಲಿ ಈ ಹಿಂದೆ 1998, 2006 ಮತ್ತು 2007ರಲ್ಲಿ ಒಟು 18 ದಿನಗಳ ಕಾರಾಗೃಹ ವಾಸವನ್ನು ಅನುಭವಿಸಿದ್ದಾರೆ. ಆದುದರಿಂದ ಜೋಧ್‌ಪುರ ಜೈಲಿನಲ್ಲಿ ಸಲ್ಮಾನ್‌ ಇದೀಗ ನಾಲ್ಕನೇ ಬಾರಿಗೆ ಅತಿಥಿಯಾಗಿದ್ದಾರೆ. 

ಐದು ವರ್ಷಗಳ ಜೈಲು ಶಿಕ್ಷೆಯ ಕೋರ್ಟ್‌ ತೀರ್ಪು ಪ್ರಕಟವಾದೊಡನೆಯೇ 52ರ ಹರೆಯದ ನಟ ಸಲ್ಮಾನ್‌ ಖಾನ್‌ ಅವರನ್ನು ಪೊಲೀಸ್‌ ವಾಹನದಲ್ಲಿ ಜೋಧ್‌ಪುರ ಸೆಂಟ್ರಲ್‌ ಜೈಲಿಗೆ ಒಯ್ಯಲಾಯಿತು. ಮೊದಲು ಆಸ್ಪತ್ರೆಯೊಂದಕ್ಕೆ ಒಯ್ದು ಅಲ್ಲಿ ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಿ ಅನಂತರ ಅವರನ್ನು ಜೈಲಿಗೆ ಒಯ್ಯಲಾಯಿತು. 

ಕೃಷ್ಣ ಮೃಗ ಬೇಟೆಯ ವೇಳೆ ಸಫಾರಿ ಜೀಪ್‌ನಲ್ಲಿ  ಸಲ್ಮಾನ್‌ ಖಾನ್‌ ಜತೆಗಿದ್ದ ಬಾಲಿವುಡ್‌ನ‌ ಇತರ ನಟರಾದ ಸೈಫ್ ಅಲಿ ಖಾನ್‌, ತಬು,  ಸೋನಾಲಿ ಬೇಂದ್ರೆ ಮತ್ತು ನೀಲಂ ಕೊಠಾರಿ ಇವರ ಖುಲಾಸೆಯನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು ಎಂದು ಜೀವ ರಕ್ಷಾ ಬಿಷ್ಣೋಯಿ ಸಭಾ ಅಧ್ಯಕ್ಷ ಶಿವರಾಜ್‌ ಬಿಷ್ಣೋಯಿ ಹೇಳಿದ್ದಾರೆ.

ಟಾಪ್ ನ್ಯೂಸ್

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

7-uv-fusion

Cleanliness: ಪ್ರವಾಸಿ ತಾಣ ನಮ್ಮ ಆಸ್ತಿ: ಸ್ವಚ್ಛವಾಗಿರಿಸೋಣ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

4-cet

CET Results: ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ ಸಿಇಟಿ ಫಲಿತಾಂಶ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

A person who voted for a BJP candidate eight times; The video went viral

Farrukhabad; ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತದಾನ ಮಾಡಿದ ವ್ಯಕ್ತಿ; ವಿಡಿಯೋ ವೈರಲ್

To India’s youth get jobs, Modi should retire: Rahul Gandhi

Unemployment; ಭಾರತದ ಯುವಕರಿಗೆ ಕೆಲಸ ಸಿಗಬೇಕಾದರೆ ಮೋದಿ ನಿವೃತ್ತಿಯಾಗಬೇಕು: ರಾಹುಲ್ ಗಾಂಧಿ

IMD

47.8 degrees; ಉತ್ತರ ಭಾರತದ ಹಲವೆಡೆ ಶಾಖದ ಅಲೆ ಅಲರ್ಟ್‌!

trai

TRAI ವ್ಯಾಪ್ತಿಗೆ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌, ಎಕ್ಸ್‌?

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

one year for siddaramaiah govt

ಗ್ಯಾರಂಟಿ ಸರಕಾರಕ್ಕೆ ವರ್ಷದ ಗೋರಂಟಿ!; ಹಲವು ಸವಾಲುಗಳ ನಡುವೆಯೂ ಭರವಸೆ ಈಡೇರಿಸಿದ ಸರಕಾರ

ರಾಮಲಿಂಗಾರೆಡ್ಡಿ

Chitradurga; ಸರ್ಕಾರಕ್ಕೆ, ಪಕ್ಷಕ್ಕೆ, ಪೆನ್ ಡ್ರೈವ್ ಗೆ ಯಾವ ಸಂಬಂಧವಿಲ್ಲ:ರಾಮಲಿಂಗಾರೆಡ್ಡಿ

7-uv-fusion

Cleanliness: ಪ್ರವಾಸಿ ತಾಣ ನಮ್ಮ ಆಸ್ತಿ: ಸ್ವಚ್ಛವಾಗಿರಿಸೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.