ಲಾಂಗ್‌ ಬದಿಗಿಟ್ಟ ಸಂತೋಷ್‌ … 


Team Udayavani, Apr 6, 2018, 4:10 PM IST

long-badi.jpg

ಸತತವಾಗಿ ಆ್ಯಕ್ಷನ್‌ ಸಿನಿಮಾಗಳನ್ನು ಮಾಡಿಕೊಂಡು ಬರುತ್ತಿದ್ದ ಸಂತೋಷ್‌ಗೆ ಬೇರೇನೋ ಪ್ರಯತ್ನಿಸಬೇಕೆಂಬ ಮನಸ್ಸಾಗಿತ್ತಂತೆ. ಆ ನಿಟ್ಟಿನಲ್ಲಿ ಅವರು ಎದುರು ನೋಡುತ್ತಿದ್ದಾಗ ಸಿಕ್ಕಿದ್ದೇ “ಕಾಜಲ್‌’. ಇದು ಒಂದು ಮ್ಯೂಸಿಕಲ್‌ ಲವ್‌ಸ್ಟೋರಿ. ಕಾಮಿಡಿ ಹಿನ್ನೆಲೆಯಲ್ಲಿ ಸಾಗುವ ಈ ಕಥೆ ಸಂತೋಷ್‌ಗೆ ತುಂಬಾ ಇಷ್ಟವಾಗಿದೆ. ಆ ಕಾರಣದಿಂದ ಸಂತೋಷ್‌ ಒಪ್ಪುವ ಜೊತೆಗೆ ಅವರ ತಂದೆ ಆನೇಕಲ್‌ ಬಾಲರಾಜ್‌ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಚಿತ್ರವನ್ನು ಸುಮಂತ್‌ ಕ್ರಾಂತಿ ನಿರ್ದೇಶನ ಮಾಡುತ್ತಿದ್ದಾರೆ.

ಈ ಹಿಂದೆ “ನಾನಿ’ ಎಂಬ ಹಾರರ್‌ ಸಿನಿಮಾ ಮಾಡಿದ್ದ ಸುಮಂತ್‌ ಈಗ ಔಟ್‌ ಅಂಡ್‌ ಔಟ್‌ ಕಾಮಿಡಿ ಸಿನಿಮಾ ಮಾಡಲು ಹೊರಟಿದ್ದಾರೆ. ಚಿತ್ರಕ್ಕೆ “ರೊಮ್ಯಾನ್ಸ್‌ ಬಿಟ್ವೀನ್‌ ಇಂಡಿಯಾ ಅಂಡ್‌ ಅಮೆರಿಕಾ’ ಎಂಬ ಟ್ಯಾಗ್‌ಲೈನ್‌ ಬೇರೆ ಇದೆ. ಇಷ್ಟು ಹೇಳಿದ ಮೇಲೆ ಇದೊಂದು ಲವ್‌ಸ್ಟೋರಿ ಎಂದು ಪ್ರತ್ಯೇಕವಾಗಿ ಹೇಳುವ ಅಗತ್ಯವಿಲ್ಲ. ವಿದೇಶದಿಂದ ತನ್ನ ಸಂಬಂಧಿಕರನ್ನು ನೋಡಲು ಹಳ್ಳಿಗೆ ಬರುವ ಹುಡುಗಿ ಅಲ್ಲಿ ಎದುರಿಸುವ ಪರಿಸ್ಥಿತಿಗಳನ್ನು ಮಜಾವಾಗಿ ಹೇಳಲಿದ್ದಾರಂತೆ ನಿರ್ದೇಶಕ ಸುಮಂತ್‌.

“ಇದು ಫ‌ನ್ನಿ ಎಂಟರ್‌ಟೈನ್‌ಮೆಂಟ್‌ ಕಥೆ. ತುಂಬಾ ಹಿಂದೆ ಮಾಡಿಟ್ಟುಕೊಂಡ ಸ್ಕ್ರಿಪ್ಟ್ ಇದಾಗಿದ್ದು, ನಿರ್ಮಾಪಕರಿಗೆ ಹೇಳಿದಾಗ ಖುಷಿಯಿಂದ ಒಪ್ಪಿಕೊಂಡರು. ಮುಖ್ಯವಾಗಿ ಈ ಕಥೆ ಹದಿಹರೆಯದವರಿಗೆ ಹೆಚ್ಚು ಇಷ್ಟವಾಗಲಿದೆ. ಚಿತ್ರದಲ್ಲಿ ಸಂಗೀತಕ್ಕೂ ಹೆಚ್ಚಿನ ಪ್ರಾಮುಖ್ಯತೆ ಇದೆ’ ಎಂದು ಚಿತ್ರದ ಬಗ್ಗೆ ಹೇಳಿಕೊಂಡರು. ಇಲ್ಲಿ ಕಾಜಲ್‌ ಎನ್ನುವುದು ನಾಯಕಿಯ ಹೆಸರು. ಸಿಮ್ರಾನ್‌ ನಾಟೇಕರ್‌ ಈ ಚಿತ್ರದ ನಾಯಕಿ.

“ಧೂಮಪಾನ ಮಾಡದಿರಿ’ ಎಂಬ ಜಾಹೀರಾತಿನಲ್ಲಿ ಪುಟ್ಟ ಬಾಲಕಿಯಾಗಿದ್ದಾಗಲೇ ಕಾಣಿಸಿಕೊಂಡ ಸಿಮ್ರಾನ್‌ ಈಗ “ಕಾಜಲ್‌’ ಮೂಲಕ ನಾಯಕಿಯಾಗಿದ್ದಾರೆ. ನಿರ್ದೇಶಕ ಸುಮಂತ್‌ ಈ ಹುಡುಗಿಯೇ ನಾಯಕಿಯಾಗಬೇಕೆಂಬ ಆಸೆ ಇತ್ತಂತೆ. ಇನ್ನು, ಒಂದು ವರ್ಷ ಬೇರೆ ಸಿನಿಮಾ ಮಾಡದಂತೆ ಒಪ್ಪಂದ ಪತ್ರಕ್ಕೂ ಸಹಿ ಹಾಕಿಸಿದ್ದಾರಂತೆ.

ಅಂದಹಾಗೆ, ಚಿತ್ರದಲ್ಲಿ ಧೂಮಪಾನ ವಿರೋಧಿ ಜಾಹೀರಾತಿನಲ್ಲಿ ಕಾಣಿಸಿಕೊಂಡ ಹುಡುಗಿ ನಾಯಕಿಯಾಗಿರುವುದರಿಂದ ಸೆಟ್‌ನಲ್ಲಿ ಯಾರೊಬ್ಬರು ಸಿಗರೇಟು ಸೇದುವುದಿಲ್ಲವಂತೆ.  ನಾಯಕ ಸಂತೋಷ್‌ ಹೆಚ್ಚೇನು ಮಾತನಾಡಲಿಲ್ಲ. ಮೊದಲ ಬಾರಿಗೆ ಹೊಸ ಜಾನರ್‌ ಪ್ರಯತ್ನಿಸುತ್ತಿರುವುದರಿಂದ ಪಾತ್ರಕ್ಕಾಗಿ ಪೂರ್ವತಯಾರಿ ಮಾಡುತ್ತಿರುವುದಾಗಿ ಹೇಳಿದರು. ನಾಯಕಿ ಸಿಮ್ರಾನ್‌ ಈ ಸಿನಿಮಾಕ್ಕಾಗಿ ಮೂರು ಹಿಂದಿ ಸಿನಿಮಾಗಳನ್ನು ಬಿಟ್ಟರಂತೆ.

“ಬಾಹುಬಲಿ’ ಸಿನಿಮಾ ನೋಡಿ ಫಿದಾ ಆದ ಸಿಮ್ರಾನ್‌, ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಬೇಕೆಂಬ ಕನಸು ಕಾಣುತ್ತಿದ್ದರಂತೆ. ಆಗ ಸಿಕ್ಕಿದ್ದು “ಕಾಜಲ್‌’. ಹಾಗಾಗಿ, ಒಪ್ಪಿಕೊಂಡಿದ್ದಾರೆ. ಚಿತ್ರದಲ್ಲಿ ಫಾರಿನ್‌ ರಿಟರ್ನ್ ಹುಡುಗಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದ ನಿರ್ಮಾಪಕ ಆನೇಕಲ್‌ ಬಾಲರಾಜ್‌ ಎಂದಿನಂತೆ ಈ ಬಾರಿಯಯೂ ಮಾತನಾಡಲಿಲ್ಲ. ಚಿತ್ರಕ್ಕೆ ಗುರುಕಿರಣ್‌ ಸಂಗೀತ, ಗುಂಡ್ಲುಪೇಟೆ ಸುರೇಶ್‌ ಛಾಯಾಗ್ರಹಣವಿದೆ. ಊಟಿ, ಹೊನ್ನಾವರ, ಕುಲುಮನಾಲಿಯಲ್ಲಿ ಚಿತ್ರೀಕರಣ ನಡೆಯಲಿದೆ. 

ಟಾಪ್ ನ್ಯೂಸ್

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.