ಅಣ್ಣಾ ವಿವಿಗೆ ನೂತನ ಕುಲಪತಿ : ಕನ್ನಡಿಗ ಸೂರಪ್ಪ ವಿರುದ್ಧ ಬಿರುಗಾಳಿ


Team Udayavani, Apr 7, 2018, 5:35 AM IST

Surappa-1.jpg

ಚೆನ್ನೈ: ತಮಿಳುನಾಡಿನ ಪ್ರತಿಷ್ಠಿತ ಅಣ್ಣಾ ವಿಶ್ವವಿದ್ಯಾಲಯಕ್ಕೆ ಕನ್ನಡಿಗರಾದ ಎಂ.ಕೆ. ಸೂರಪ್ಪ ಅವರು ಉಪಕುಲಪತಿಯಾಗಿ ನೇಮಕವಾಗಿರುವುದಕ್ಕೆ ಇತ್ತ ಕನ್ನಡ ನಾಡು ಹೆಮ್ಮೆಪಡುತ್ತಿದ್ದರೆ, ತಮಿಳುನಾಡಿನಲ್ಲಿ ಅಸಮಾಧಾನ ಭುಗಿಲೆದ್ದಿದೆ. ತಮಿಳುನಾಡಿನ ರಾಜಕೀಯ ಪಕ್ಷಗಳು ಸೂರಪ್ಪ ಹೆಸರಿಗೂ ಕಾವೇರಿಗೂ ನಂಟು ಹಾಕಿ ವಿರೋಧಿಸುತ್ತಿವೆ.

ತಮಿಳುನಾಡಿನ ಪಕ್ಷಗಳು ಹಾಗೂ ಸಂಘಟನೆಗಳು, ಕಾವೇರಿ ಜಲ ನಿರ್ವಹಣ ಮಂಡಳಿ ರಚಿಸುವಂತೆ ಆಗ್ರಹಿಸಿ ಸತ್ಯಾಗ್ರಹ ನಡೆಸುತ್ತಿರುವ ಈ ಸಂದರ್ಭದಲ್ಲೇ ಸೂರಪ್ಪ ಅವರ ನೇಮಕಾತಿ ಆದೇಶ ಹೊರಬಿದ್ದಿರುವುದು ಅಲ್ಲಿನ ರಾಜಕೀಯ ನಾಯಕರ ಕಣ್ಣು ಕೆಂಪಾಗಿಸಿದೆ. ಉಪ ಕುಲಪತಿ ಸ್ಥಾನಕ್ಕೆ ತಮಿಳುನಾಡಿನಲ್ಲಿ ಸೂಕ್ತ ವ್ಯಕ್ತಿ ಸಿಗಲಿಲ್ಲವೇ? ಎಂಬರ್ಥದಲ್ಲಿ ರಾಜಕೀಯ ಪಕ್ಷಗಳು ಆದೇಶದ ವಿರುದ್ಧ ಕಿಡಿಕಾರುತ್ತಿವೆ. ಆದರೆ, ಸರಕಾರ ಮಾತ್ರ ಆದೇಶದಲ್ಲಿ ತನ್ನ ಪಾತ್ರವಿಲ್ಲ ಎಂದಿದೆ. ತಮಿಳುನಾಡು ಬಿಜೆಪಿ ಘಟಕ ರಾಜ್ಯಪಾಲರ ನಡೆಯನ್ನು ಸ್ವಾಗತಿಸಿದೆ. ಹಾಗಾಗಿ ಸೂರಪ್ಪ ನೇಮಕಾತಿ ಅಲ್ಲಿ ರಾಜಕೀಯ ಪಕ್ಷಗಳನ್ನು ಇಬ್ಭಾಗವಾಗಿಸಿದೆ.


ಸೂರಪ್ಪ ಹಿನ್ನೆಲೆ:
ಬೋಧನಾ ಕ್ಷೇತ್ರದಲ್ಲಿ ಸುಮಾರು 30 ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಸೂರಪ್ಪ, ಐಐಟಿ ರೋಪರ್‌ ಸಂಸ್ಥೆಯ ಮಾಜಿ ನಿರ್ದೇಶಕರೂ ಹೌದು. ದೇಶದ ಅತೀ ಶ್ರೇಷ್ಠ ವಿಶ್ವವಿದ್ಯಾಲಯವೆಂಬ ಖ್ಯಾತಿ ಗಳಿಸಿರುವ ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 24 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಣ್ಣಾ ವಿವಿಯ ಉಪ ಕುಲಪತಿ ಹುದ್ದೆಗೆ ಅವರನ್ನು ನೇಮಿಸಿ ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್‌ ಪುರೋಹಿತ್‌ ಆದೇಶ ಹೊರಡಿಸಿದ್ದಾರೆ. ಆ ಮೂಲಕ ಎರಡು ವರ್ಷಗಳಿಂದ ಖಾಲಿಯಿದ್ದ ಅಣ್ಣಾ ವಿವಿಯ ಉಪ ಕುಲಪತಿ ಸ್ಥಾನವನ್ನು ಈಗ ತುಂಬಲಾಗಿದೆ.

ಕಮಲ್‌ ಟ್ವೀಟ್‌: ಸೂರಪ್ಪ ನೇಮಕಾತಿ ವಿರೋಧಿ ಕೂಗಿಗೆ ತಮ್ಮ ದನಿಯನ್ನೂ ಸೇರಿಸಿರುವ ‘ಮಕ್ಕಳ್‌ ನೀಧಿ ಮಯ್ಯಂ’ ಪಕ್ಷದ ಸಂಸ್ಥಾಪಕ ಹಾಗೂ ನಟ ಕಮಲ ಹಾಸನ್‌, ಕರ್ನಾಟಕದಿಂದ ನೀರು ಕೊಡಿ ಎಂದು ನಾವು ಕೇಳಿದರೆ ಅಲ್ಲಿಂದ ಉಪ ಕುಲಪತಿಯನ್ನು ನೀಡಲಾಗಿದೆ ಎಂದು ಟ್ವಿಟರ್‌ನಲ್ಲಿ ವ್ಯಂಗ್ಯವಾಡಿದ್ದಾರೆ. ಆದರೆ, ಬಳಿಕ ಎಚ್ಚೆತ್ತುಕೊಂಡಿರುವ ಅವರು, ತಾವು ಉಪ ಕುಲಪತಿಯ ವಿರುದ್ಧ ವೈಯಕ್ತಿಕ ವಾಗ್ಧಾಳಿ ನಡೆಸಿಲ್ಲ. ನನ್ನ ಟ್ವೀಟ್‌ ಹಿಂದಿನ ಕಾಳಜಿ ಕಾವೇರಿ ನೀರಿನ ಬಗ್ಗೆಯಷ್ಟೇ ಎಂದಿರುವ ಅವರು, ಕರ್ನಾಟಕ ಮೂಲದ ನಾಗೇಶ್‌ ನನ್ನ ಗುರುಗಳಲ್ಲೊಬ್ಬರು. ನನ್ನ ಸ್ನೇಹಿತರಾದ ರಾಜ್‌ಕುಮಾರ್‌ ಅಣ್ಣ, ಬಿ. ಸರೋಜಾದೇವಿ, ರಜನೀಕಾಂತ್‌, ಅಂಬರೀಶ್‌ ಅವರೆಲ್ಲರೂ ಸ್ನೇಹಿತರೇ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜಕೀಯ ನಾಯಕರ ಕಿಡಿನುಡಿ: ತಮಿಳುನಾಡಿನ ಪ್ರಮುಖ ವಿರೋಧ ಪಕ್ಷವಾದ ಡಿಎಂಕೆ, ಪಿಎಂಕೆ ಪಕ್ಷಗಳು ಸೂರಪ್ಪ ನೇಮಕಾತಿ ವಿರುದ್ಧ ದನಿಯೆತ್ತಿವೆ. ಫೇಸ್‌ ಬುಕ್‌ ನಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ಡಿಎಂಕೆ ಕಾರ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕ ಎಂ.ಕೆ. ಸ್ಟಾಲಿನ್‌, ‘ಕಾವೇರಿ ಗಲಾಟೆಯ ಸಂದರ್ಭದಲ್ಲೇ ಕರ್ನಾಟಕ ಮೂಲದ ವ್ಯಕ್ತಿಯೊಬ್ಬರನ್ನು ನಮ್ಮ ವಿವಿಯೊಂದಕ್ಕೆ ಉಪಕುಲಪತಿಯನ್ನಾಗಿ ನೇಮಿಸಿರುವುದನ್ನು ಸ್ವೀಕರಿಸಲಾಗದು’ ಎಂದಿದ್ದಾರೆ. ಪಿಎಂಕೆಯ ನಾಯಕ ರಾಮದಾಸ್‌ ಮಾತನಾಡಿ, ‘ಸೂರಪ್ಪ ಅವರ ನೇಮಕಾತಿಯಿಂದ ತಮಿಳುನಾಡು ಜನತೆಯ ಭಾವನೆಗಳಿಗೆ ಧಕ್ಕೆ ಉಂಟಾಗಿದೆ. ಈ ನಿರ್ಧಾರ ಖಂಡನಾರ್ಹ. ರಾಜ್ಯಪಾಲರು ಕೂಡಲೇ ಈ ನಿರ್ಧಾರವನ್ನು ಹಿಂಪಡೆಯಬೇಕು’ ಎಂದಿದ್ದಾರೆ. ಎಂಡಿಎಂಕೆ ಸಂಸ್ಥಾಪಕ ವೈಕೋ ಮಾತನಾಡಿ, ತಮಿಳುನಾಡಿನ ವಿವಿಗೆ ತಮಿಳರನ್ನೇ ಉಪಕುಲಪತಿಯನ್ನಾಗಿ ನೇಮಿಸಬೇಕು ಎಂದು ಆಗ್ರಹಿಸಿದ್ದಾರೆ. ಆದರೆ ರಾಜ್ಯಪಾಲರ ನಡೆಯನ್ನು ಸ್ವಾಗತಿಸಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ ತಮಿಳ್‌ಸಾಯಿ ಸೌಂದರರಾಜನ್‌, ‘ಭ್ರಷ್ಟಾಚಾರದ ಕೂಪವಾಗಿದ್ದ ಅಣ್ಣಾ ವಿವಿಯನ್ನು ಸರಿದಾರಿಗೆ ತರಲು ರಾಜ್ಯಪಾಲರು ಉತ್ತಮ ನಿರ್ಧಾರ ಕೈಗೊಂಡಿದ್ದಾರೆ’ ಎಂದಿದ್ದಾರೆ.

ರಾಜ್ಯ ಸರಕಾರದ ಸ್ಪಷ್ಟನೆ
ಸೂರಪ್ಪ ನೇಮಕಾತಿ ವಿವಾದ ತಾರಕಕ್ಕೇರಿದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಪರ ಸ್ಪಷ್ಟನೆ ನೀಡಿರುವ ಮೀನುಗಾರಿಕ ಸಚಿವ ಡಿ. ಜಯಕುಮಾರ್‌, ‘ಸೂರಪ್ಪ ನೇಮಕಾತಿ ತಮಿಳುನಾಡಿನ ವಿಶ್ವವಿದ್ಯಾಲಯಗಳ ಕುಲಪತಿಯಾಗಿರುವ ರಾಜ್ಯಪಾಲರ ನಿರ್ಧಾರ. ಇದರಲ್ಲಿ ರಾಜ್ಯಸರಕಾರದ ಪಾತ್ರವೇನೂ ಇಲ್ಲ’ ಎಂದಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.