ಕಿಡ್ನಿ ವೈಫ‌ಲ್ಯ: ಚಿಕಿತ್ಸೆಗೆ ನೆರವು ಯಾಚನೆ


Team Udayavani, Apr 7, 2018, 12:17 PM IST

7-April-10.jpg

ಬೆಳ್ತಂಗಡಿ: ಮನೆ ಯಜಮಾನ ಕಿಡ್ನಿ ವೈಫ‌ಲ್ಯಕ್ಕೊಳಗಾಗಿದ್ದು, ಚಿಕಿತ್ಸೆ ವೆಚ್ಚ ಭರಿಸಲಾಗದೆ ಅವರ ಕುಟುಂಬ ದಾನಿಗಳಿಂದ ನೆರವು ಯಾಚಿಸಿದೆ.

ಡಯಾಬಿಟಿಸ್‌ ಕಾಯಿಲೆ ಯಿಂದಾಗಿ ಗುರುವಾಯನ ಕೆರೆ ನಿವಾಸಿ ಜಯರಾಮ ಶೆಟ್ಟಿ (42) ಅವರ ಎರಡೂ ಕಿಡ್ನಿ ವೈಫ‌ಲ್ಯಗೊಂಡಿದ್ದು, ಆರ್ಥಿಕ ಸಮಸ್ಯೆಯಿಂದಾಗಿ ಡಯಾಲಿಸಿಸ್‌ ಮಾಡಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಬಿ.ಪಿ., ಶುಗರ್‌, ಹೃದಯ ಸಂಬಂಧಿ ಕಾಯಿಲೆ ಇರುವ ಅವರಿಗೆ ಕಣ್ಣುಗಳೂ ಕಾಣಿಸುತ್ತಿಲ್ಲ.

ಡಯಾಲಿಸ್‌ಗಾಗಿ ತಿಂಗಳಿಗೆ 8 ಬಾರಿ ಚಿಕಿತ್ಸೆಗಾಗಿ ಮಂಗಳೂರಿಗೆ ಹೋಗಬೇಕಾಗಿದ್ದು, ಇದಕ್ಕಾಗಿ ಸುಮಾರು 30 ಸಾವಿರ ರೂ. ಖರ್ಚಾಗುತ್ತದೆ. ಬಾಡಿಗೆ ಮನೆಯಲ್ಲಿರುವುದರಿಂದ ತಿಂಗಳ ಬಾಡಿಗೆ, ಮಕ್ಕಳ, ಅತ್ತೆಯ ಪೋಷಣೆಗಾಗಿ ಸಾವಿರಾರು ರೂ. ಖರ್ಚನ್ನು ನಿಭಾಯಿಸುವುದು ಕಷ್ಟವಾಗಿದೆ. ಬಾಡಿಗೆಯನ್ನು ಕಟ್ಟದೆ ಸುಮಾರು ತಿಂಗಳುಗಳು ಕಳೆದಿವೆ. ಚಿಕಿತ್ಸೆ ವೆಚ್ಚ ನಿಭಾಯಿಸುವುದು ಹೇಗೆ ಎಂಬ ಚಿಂತೆ ಉಂಟಾಗಿದೆ ಎನ್ನುತ್ತಾರೆ ಜಯರಾಮ ಅವರ ಪತ್ನಿ ಪೂರ್ಣಿಮಾ. ಮನೆಯಲ್ಲಿ 4 ವರ್ಷದ ಪುತ್ರ, ಒಂದೂವರೆ ವರ್ಷದ ಪುತ್ರಿ, ಜಯರಾಮ ಅವರ ತಾಯಿ ಜತೆಗಿದ್ದಾರೆ.

ಸಾಲ ಮಾಡಿ ಚಿಕಿತ್ಸೆ
ಕಿಡ್ನಿ ಕಸಿ ಮಾಡಲು ಸುಮಾರು 7 ಲಕ್ಷ ರೂ. ಖರ್ಚಾಗುತ್ತದೆ. ಜಯರಾಮ ಅವರ ಚಿಕಿತ್ಸೆಗಾಗಿ ಸಾಲ ಮಾಡಲಾಗಿದ್ದು, ಕಳೆದ 8 ತಿಂಗಳಲ್ಲಿ ಸುಮಾರು 3 ಲಕ್ಷ ರೂ. ನಷ್ಟು ವ್ಯಯಿಸಲಾಗಿದೆ. ಹಲವಾರು ಸಂಘಟನೆಗಳು ಇವರಿಗೆ ಸಹಾಯ ಮಾಡಿದ್ದರೂ ದಿನನಿತ್ಯದ ಸಂಸಾರದ ಖರ್ಚು ಹಾಗೂ ವೈದ್ಯಕೀಯ ಖರ್ಚುಗಳನ್ನು ತೂಗಿಸಿಕೊಂಡು ಹೋಗುವುದೇ ಸವಾಲಾಗಿದೆ.

ಜೀವನ ಪೂರ್ತಿ ಡಯಾಲಿಸಿಸ್‌ ಮಾಡಬೇಕು. ಇಲ್ಲವಾದಲ್ಲಿ ಕಿಡ್ನಿ ಕಸಿ ಮಾಡಬೇಕು. ಡಯಾಲಿಸಿಸ್‌ಗೆ ತಿಂಗಳಿಗೆ ಸುಮಾರು 30 ಸಾವಿರ ರೂ. ಖರ್ಚಾಗುತ್ತದೆ. ಔಷಧಕ್ಕೆ ವರ್ಷಕ್ಕೆ ಸುಮಾರು 2.5 ಲಕ್ಷ ರೂ. ಬೇಕು. ಆಸ್ಪತ್ರೆಯಿಂದ ಸಾಧ್ಯವಾದಷ್ಟು ಸಹಕಾರ ನೀಡಲಾಗಿದೆ ಎನ್ನುತ್ತಾರೆ ವೈದ್ಯ ಡಾ| ಪ್ರದೀಪ್‌.

ಧರ್ಮಸ್ಥಳದ ಮುಳಿಕ್ಕಾರಿನ ಜಯರಾಮ ನಾಸಿಕ್‌, ಮುಂಬಯಿನಲ್ಲಿ ಹೊಟೇಲ್‌ ಕೆಲಸ ಮಾಡುತ್ತಿದ್ದರು. 5 ವರ್ಷಗಳ ಹಿಂದೆ ಮದುವೆಯಾಗಿ, ಮಂಗಳೂರಿನ ಹೊಟೇಲೊಂದರಲ್ಲಿ ಕೆಲಸಕ್ಕೆ ಸೇರಿದ್ದರು.

ನೆರವು ಯಾಚನೆ
ನೆರವು ನೀಡುವ ದಾನಿಗಳು 9632791934 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ಕೆನರಾ ಬ್ಯಾಂಕ್‌ ಗುರುವಾಯನಕೆರೆ ಶಾಖೆಯ ಪೂರ್ಣಿಮಾ ಅವರ ಬ್ಯಾಂಕ್‌ ಖಾತೆ ಸಂಖ್ಯೆ 6423101000179/ಐಎಫ್‌ ಎಸ್‌ಸಿ ಕೋಡ್‌  .ಎನ್‌.ಆರ್‌.ಬಿ. 0006423.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.