ಕಲಾ ಪ್ರಕಾರಗಳ ಅಧ್ಯಯನಕ್ಕೆ ಆಸ್ಥೆ ವಹಿಸಲಿ: ಅನಸೂಯ ಪಾವಂಜೆ


Team Udayavani, Apr 7, 2018, 4:46 PM IST

7-April-20.jpg

ಮಹಾನಗರ: ಯುವ ಸಮುದಾಯವು ಕಲಾ ಪ್ರಕಾರಗಳ ಅಧ್ಯಯನದ ಬಗ್ಗೆ ವಿಶೇಷ ಆಸ್ಥೆ ವಹಿಸುವುದು ಇಂದಿನ ಅಗತ್ಯ ಎಂದು ಕರ್ನಾಟಕ ಕ್ರಾಫ್ಟ್ಸ್ ಕೌನ್ಸಿಲ್‌ ನ ಮಾಜಿ ಕಾರ್ಯದರ್ಶಿ ಅನಸೂಯ ಪಾವಂಜೆ ಹೇಳಿದರು. ಮಂಗಳೂರು ವಿಶ್ವವಿದ್ಯಾಲಯ, ಎನ್‌ಜಿ ಪಾವಂಜೆ ಲಲಿತಕಲಾ ಪೀಠ ಮತ್ತು ರಾಜ್ಯ ಲಲಿತಕಲಾ ಅಕಾಡೆಮಿ ಸಹಯೋಗದಲ್ಲಿ ನಗರದ ರೋಶನಿ ನಿಲಯದಲ್ಲಿ ಎರಡು ದಿನಗಳ ಕಾಲ ನಡೆಯಲಿರುವ ‘ಕರಾವಳಿ ಪರಂಪರೆ ಮತ್ತು ಕಲೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಆಧುನಿಕ ಕಲೆಯ ವಿಕಾಸ’ ಎಂಬ ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.

 ಕಲೆ ಬೆಳೆಯಲಿ
ಆಧುನಿಕ ಕಲೆ ತನಗೆ ಅರ್ಥವಾಗದಿದ್ದರೂ ಅಲ್ಲಿನ ಬಣ್ಣಗಳ ಸಂಯೋಜನೆ ಉತ್ತಮವಾಗಿದೆ. ತನ್ನ ತಂದೆ ಎನ್‌ಜಿ ಪಾವಂಜೆ ಅವರು ಚಿತ್ರಕಲೆಯ ಬೆಳವಣಿಗೆಗಾಗಿ ಶ್ರಮಿಸಿದವರು. ಮೈಸೂರು ಅರಸರ ಆಸ್ಥಾನದಲ್ಲಿ ಚಿತ್ರಕಲೆ ಬಿಡಿಸುತ್ತಿದ್ದ ಬಗ್ಗೆ ತನಗೆ ನೆನಪುಗಳಿವೆ. ಕಲೆ ಬೆಳೆಯಬೇಕು ಎಂದರು.

ಅಧ್ಯಯನ ನಡೆಯಲಿ
ಹಿರಿಯ ಸಂಶೋಧಕ ಡಾ| ಪುಂಡಿಕಾಯಿ  ಗಣಪಯ್ಯ ಭಟ್‌ ಮಾತನಾಡಿ, ಕರಾವಳಿಯಲ್ಲಿ ಚಿತ್ರಕಲೆಗೆ ಇನ್ನೂರು ವರ್ಷಗಳ ಇತಿಹಾಸವಿದ್ದರೂ, ಪರಂಪರೆಯ ಚಿತ್ರ ಕತೆಯ ಕುರಿತ ಸರಿಯಾದ ಮಾಹಿತಿ ನಮಗೆ ಸಿಗುತ್ತಿಲ್ಲ. ಮೂಡಬಿದಿರೆಯಲ್ಲಿ ಲಭ್ಯವಿರುವ ತಾಳೆಗರಿಗಳಲ್ಲಿ ಇರುವ ಚಿತ್ರಗಳು ಶ್ರವಣಬೆಳಗೊಳ, ಬಂಕಾಪುರದಿಂದ ಬಂದವುಗಳು ಎಂಬ ಬಗ್ಗೆ ಚರ್ಚೆಯಾಗುತ್ತಿದೆ. ಜಾನಪದ, ಯಕ್ಷಗಾನ, ಭೂತಾರಾಧನೆ ಬಣ್ಣಗಾರಿಕೆಯನ್ನೂ ಚಿತ್ರಕಲೆ ಎಂದು ಪರಿಗಣಿಸಬಹುದು. ಈ ನಿಟ್ಟಿನಲ್ಲಿ ಇನ್ನಷ್ಟು ಹೆಚ್ಚಿನ ಅಧ್ಯಯನವಾಗಬೇಕು ಎಂದರು.ಹಿರಿಯ ಕಲಾವಿದ ಪಿ.ಎಸ್‌. ಪುಣಿಚಿತ್ತಾಯ ಕಾಸರಗೋಡು, ಉಡುಪಿ ಆರ್ಟಿಸ್ಟ್ಸ್ ಫೋರಂ ಅಧ್ಯಕ್ಷ ರಮೇಶ್‌ ರಾವ್‌ ಅತಿಥಿಗಳಾಗಿದ್ದರು. ರಾಜ್ಯ ಲಲಿತ ಕಲಾ ಅಕಾಡೆಮಿ ಅಧ್ಯಕ್ಷೆ ಪ್ರೊ| ಎಂ.ಜೆ. ಕಮಲಾಕ್ಷಿ ಆಶಯ ನುಡಿಗಳನ್ನಾಡಿದರು. 

ಮಂಗಳೂರು ವಿವಿ ಕುಲಪತಿ ಪ್ರೊ| ಕೆ. ಬೈರಪ್ಪ ಅಧ್ಯಕ್ಷತೆ ವಹಿಸಿದ್ದರು. ಲಲಿತಕಲಾ ಅಕಾಡೆಮಿ ರಿಜಿಸ್ಟ್ರಾರ್‌ ಇಂದ್ರಮ್ಮ, ಎನ್‌.ಜಿ. ಪಾವಂಜೆ ಲಲಿತಕಲಾ ಪೀಠ ಸಂಯೋಜಕ ಪ್ರೊ| ಕೆ. ಕೃಷ್ಣ ಶರ್ಮ ಮುಖ್ಯ ಅತಿಥಿಗಳಾಗಿದ್ದರು. ಪ್ರೊ| ರವಿಶಂಕರ ರಾವ್‌ ಸ್ವಾಗತಿಸಿ, ಡಾ| ನೇಮಿರಾಜ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. 

ಕಲಾಕೃತಿ ಪ್ರದರ್ಶನ
ವಿಚಾರ ಸಂಕಿರಣ ಅಂಗವಾಗಿ ನಡೆದ ಕಲಾ ಪ್ರದರ್ಶನದಲ್ಲಿ 29 ಮಂದಿ ಕಲಾವಿದರ ಕಲಾಕೃತಿ ಪ್ರದರ್ಶನಗೊಂಡಿತು. ಎರಡು ದಿನಗಳ ಕಾಲ ವಿವಿಧ ಗೋಷ್ಠಿಗಳು ನಡೆಯಲಿದ್ದು, ಕಲಾವಿದರು ವಿವಿಧ ವಿಚಾರಗಳ ಬಗ್ಗೆ ವಿಷಯ ಮಂಡಿಸಲಿದ್ದಾರೆ. ಶನಿವಾರ ಸಂಜೆ ಸಮಾರೋಪ ನಡೆಯಲಿದೆ. ಕರಾವಳಿಯ ಯುವ ಆಧುನಿಕ ಚಿತ್ರ ಕಲಾವಿದರ ಚಿತ್ರ ಪ್ರದರ್ಶನ ಇಲ್ಲಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.