ವಿಶೇಷ ಅಧಿವೇಶನಕ್ಕೆ ಜೈರಾಂ ರಮೇಶ್ಆಗ್ರಹ
Team Udayavani, Apr 8, 2018, 7:00 AM IST
ಹೊಸದಿಲ್ಲಿ: ಬಜೆಟ್ ಅಧಿವೇಶನದ ಎರಡನೇ ಚರಣ ಸಂಪೂರ್ಣವಾಗಿ ವ್ಯರ್ಥವಾಗಿದ್ದರಿಂದಾಗಿ ಬಾಕಿ ಉಳಿದಿರುವ ಪ್ರಮುಖ ಮಸೂದೆಗಳು ಹಾಗೂ ವಿಷಯಗಳ ಚರ್ಚೆಗಾಗಿ ವಿಶೇಷ ಅಧಿವೇಶನ ಕರೆಯುವಂತೆ ರಾಜ್ಯಸಭೆ ಸಭಾಪತಿ ಎಂ.ವೆಂಕಯ್ಯನಾಯ್ಡುಗೆ ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್ ಪತ್ರ ಬರೆದು ಕೇಳಿಕೊಂಡಿದ್ದಾರೆ.
ವಿಶೇಷ ಅಧಿವೇಶನವು ಜನರಲ್ಲಿ ಸಂಸತ್ ಬಗ್ಗೆ ಧನಾತ್ಮಕ ಭಾವನೆ ಮೂಡಿಸಲಿದೆ. ಮೇ ಅಥವಾ ಜೂನ್ ಮೊದಲ ವಾರದಲ್ಲಿ ಅಧಿವೇಶನ ಕರೆಯುವಂತೆ ಸರಕಾರವನ್ನು ನೀವು ಯಾಕೆ ಮನವೊಲಿಸಬಾರದು ಎಂದು ಅವರು ಕೇಳಿದ್ದಾರೆ. ಆದರೆ ಇದು ನನ್ನ ವೈಯಕ್ತಿಕ ಅಭಿಪ್ರಾಯವಷ್ಟೇ ಎಂದೂ ಅವರು ಹೇಳಿದ್ದಾರೆ. ಜುಲೈ ಎರಡನೇ ವಾರದಲ್ಲಿ ಸಾಮಾನ್ಯವಾಗಿ ಮಳೆಗಾಲದ ಅಧಿವೇಶವನ್ನು ಕರೆಯಲಾಗುತ್ತದೆ. ಆಗ ಈ ವಿಷಯಗಳನ್ನು ಚರ್ಚಿಸ ಬಹುದಾದರೂ, ಬಜೆಟ್ ಅಧಿವೇಶನ ಸಂಪೂರ್ಣ ಯಾವುದೇ ಫಲ ನೀಡದೇ ವ್ಯರ್ಥವಾಗಿದ್ದಕ್ಕೆ ಪ್ರತಿಯಾಗಿ ವಿಶೇಷ ಅಧಿವೇಶನ ಕರೆಯಬಹುದಾಗಿದೆ. ಅಲ್ಲದೆ ಮುಂದಿನ ಬಾರಿಯೂ ಗದ್ದಲ ಉಂಟಾಗದಂತೆ ಸರಕಾರವು ಎಲ್ಲ ರಾಜಕೀಯ ಪಕ್ಷಗಳ ಜತೆ ಚರ್ಚೆ ನಡೆಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!