ಪಡ್ಡೆಹುಲಿಗೆ ಬೆಳ್ಳಿ ಖಡ್ಗ
Team Udayavani, Apr 8, 2018, 11:24 AM IST
ನಿರ್ಮಾಪಕ ಕೆ. ಮಂಜು ಅವರ ಮಗ ಶ್ರೇಯಸ್ ಅಭಿನಯದ ಮೊದಲ ಚಿತ್ರ “ಪಡ್ಡೆಹುಲಿ’ ಚಿತ್ರದ ಮುಹೂರ್ತ ಈಗಾಗಲೇ ಮುಗಿದಿದೆ. ಚಿತ್ರದ ಚಿತ್ರೀಕರಣ ಏಪ್ರಿಲ್ 16ರಂದು ಶುರುವಾಗಲಿದ್ದು, ಈ ಮಧ್ಯೆ ಶ್ರೇಯಸ್ನ ಹುಟ್ಟುಹಬ್ಬದ ಸಲುವಾಗಿ ಚಿತ್ರದ ಪ್ರೋಮೋ ಸಾಂಗ್ ಬಿಡುಗಡೆ ಮಾಡಲಾಯಿತು.
ಇತ್ತೀಚೆಗೆ ಕಲಾವಿದರ ಸಂಘದ ಹೊಸ ಕಟ್ಟಡದಲ್ಲಿ ನಡೆದ ಸಮಾರಂಭದಲ್ಲಿ ಚಿತ್ರದ ಪ್ರೋಮೋ ಸಾಂಗ್ ಬಿಡುಗಡೆ ಮಾಡುವುದರ ಜೊತೆಗೆ ಶ್ರೇಯಸ್ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಹಾಡು ಬಿಡುಗಡೆ ಮಾಡುವುದಕ್ಕೆ ರಕ್ಷಿತ್ ಶೆಟ್ಟಿ ಬಂದಿದ್ದರು. ವಿಷಲ್ ಊದುವ ಮೂಲಕ ಹಾಡು ಬಿಡುಗಡೆ ಮಾಡಿದರು.
ಜೊತೆಗೆ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು, ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್, ಇಂದ್ರಜಿತ್ ಲಂಕೇಶ್, ಎ.ಪಿ. ಅರ್ಜುನ್, ಎನ್.ಎಂ. ಸುರೇಶ್, ಎಂ.ಜಿ. ರಾಮಮೂರ್ತಿ, ಸೂರಪ್ಪ ಬಾಬು ಸೇರಿದಂತೆ ಹಲವರು ಇದ್ದರು. ಶ್ರೇಯಸ್ ಹುಟ್ಟುಹಬ್ಬದ ಸಲುವಾಗಿ, ಬೆಳ್ಳಿ ಖಡ್ಗ ನೀಡಿ ಸನ್ಮಾಸಲಾಯಿತು. ಈ ಚಿತ್ರವನ್ನು ರಮೇಶ್ ರೆಡ್ಡಿ ನಿರ್ಮಿಸಿದರೆ, ಗುರು ದೇಶಪಾಂಡೆ ನಿರ್ದೇಶಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…