ಕಾಂಗ್ರೆಸ್‌ ವಿರುದ್ಧ ವೀರಶೈವರು ಕಿಡಿ


Team Udayavani, Apr 8, 2018, 2:35 PM IST

3_68.jpg

ಹಿರಿಯೂರು: ನಗರದ ತನ್ಯಾಸಿ ಗೌಂಡರ್‌ ಕಲ್ಯಾಣಮಂಟಪದಲ್ಲಿ ಶನಿವಾರ “ಒಂದುಗೂಡಿ ಬನ್ನಿ ನಾಡಸೇವೆಗೆ’ ಶೀರ್ಷಿಕೆ ಅಡಿ ವೀರಶೈವ ಸಮುದಾಯದ ಸಭೆ ನಡೆಯಿತು.

ಹೊಸದುರ್ಗದ ಬಿಜೆಪಿ ಮುಖಂಡ ಲಿಂಗಮೂರ್ತಿ ಮಾತನಾಡಿ, ವೀರಶೈವ ಲಿಂಗಾಯತ ಸಮುದಾಯ ಒಡೆದಿದ್ದಕ್ಕೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬುದ್ದಿ ಕಲಿಸಬೇಕು. “ಇವ ನಮ್ಮವ, ಇವ ನಮ್ಮವ’ ಎಂದು ಎಲ್ಲರನ್ನೂ ಅಪ್ಪಿಕೊಳ್ಳುವ ವೀರಶೈವರು ಪ್ರಜ್ಞಾವಂತಿಕೆ ಪ್ರದರ್ಶಿಸಬೇಕು. ಹೊಸದುರ್ಗದಲ್ಲಿ ಗೂಳಿಹಟ್ಟಿ ಶೇಖರ್‌, ಹಿರಿಯೂರಿನಲ್ಲಿ ಪೂರ್ಣಿಮಾ ಅಥವಾ
ಡಿ.ಟಿ. ಶ್ರೀನಿವಾಸ್‌ ಅವರನ್ನು ಗೆಲ್ಲಿಸುವ ಮೂಲಕ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯಾಗಿಸಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ರೈತ ಮುಖಂಡ ಆರನಕಟ್ಟೆ ಶಿವಕುಮಾರ್‌ ಮಾತನಾಡಿ, ಇಷ್ಟೊಂದು ಪ್ರಮಾಣದಲ್ಲಿ ವೀರಶೈವರು ಸೇರಿರುವುದು ಇದೇ ಪ್ರಥಮ. 800 ವರ್ಷಗಳ ಹಿಂದೆಯೇ ಅನ್ನ ಹಾಗೂ ಅಕ್ಷರ ಭಾಗ್ಯ ಕೊಟ್ಟದ್ದು ವೀರಶೈವ ಸಮಾಜ. ನಮ್ಮಲ್ಲಿನ ಒಳ ಪಂಗಡಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದೇವೆ. ಚುನಾವಣೆಗೆ ಮಾತ್ರ ನಮ್ಮ ಒಗ್ಗಟ್ಟು ಸೀಮಿತವಾಗಬಾರದು ಎಂದು ಎಚ್ಚರಿಸಿದರು. 

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎಸ್‌. ನವೀನ್‌ ಮಾತನಾಡಿ, ವೀರಶೈವರು ಎಲ್ಲ ಸಮುದಾಯದವರನ್ನು ಗೌರವದಿಂದ ಕಾಣುತ್ತಾರೆ. ವೀರೇಂದ್ರ ಪಾಟೀಲರು ಮುಖ್ಯಮಂತ್ರಿಯಾಗಿದ್ದಾಗ 110 ವೀರಶೈವ ಶಾಸಕರಿದ್ದರು. ನಮ್ಮ ಮೇಲೆ ಇತರೆ ಸಮುದಾಯದವರಿಗೆ ಇದ್ದ ಪ್ರೀತಿ,
ವಿಶ್ವಾಸದಿಂದ ಈ ಸಾಧನೆ ಸಾಧ್ಯವಾಗಿತ್ತು. ಈಗ ಈ ಸಂಖ್ಯೆ 45ಕ್ಕೆ ಇಳಿದಿದೆ.

ನಮ್ಮ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದ ಹೊಳಲ್ಕೆರೆ, ಮಾಯಕೊಂಡ, ಸಕಲೇಶಪುರದಂತಹ ಕ್ಷೇತ್ರಗಳನ್ನು ಮೀಸಲು ಕ್ಷೇತ್ರಗಳನ್ನಾಗಿಸಿ ವೀರಶೈವರು ಗೆಲ್ಲದಂತೆ ಮಾಡಲಾಗಿದೆ. ಅಲ್ಲಿಂದ ಆರಂಭವಾದ ಸಮಾಜ ಒಡೆಯುವಿಕೆ ಸಿದ್ದರಾಮಯ್ಯನವರ ಆಡಳಿತದಲ್ಲಿ ತಾರ್ಕಿಕ ಹಂತಕ್ಕೆ ಬಂದಿದೆ ಎಂದು ಆರೋಪಿಸಿದರು. ಶಿಕ್ಷಣ ಇಲಾಖೆ ನಿವೃತ್ತ ಅಧಿಕಾರಿ ಟಿ. ಶಿವಪ್ರಸಾದ್‌ ಮಾತನಾಡಿ, ಇಷ್ಟಲಿಂಗ ಪೂಜೆ ಎಂದರೆ ಏನೆಂದು ತಿಳಿಯದವರು ಸಮಾಜ ಒಡೆಯುವ ಕೆಲಸಕ್ಕೆ ಮುಂದಾಗಿದ್ದಾರೆ.

ಕೇವಲ ಆರು ತಿಂಗಳಲ್ಲಿ ಇಡೀ ಸಮಾಜವನ್ನು ಕಲುಷಿತಗೊಳಿಸಲಾಗಿದೆ. ನಮ್ಮಲ್ಲಿ ಹಲವು ಒಳಪಂಗಡಗಳು ಇದ್ದರು ವೈವಾಹಿಕ ಸಂಬಂಧಗಳು ನಡೆಯುವ ಮೂಲಕ ಒಗ್ಗೂಡುತ್ತಿದ್ದೇವೆ. ಮೀಸಲಾತಿಗಾಗಿ ಸಮಾಜ ಒಡೆಯುವುದು ಬೇಡ. ಪ್ರತಿಭೆಯ ಮೂಲಕ ಉದ್ಯೋಗ ಪಡೆಯೋಣ. ಮುಂಬರುವ ಚುನಾವಣೆಯಲ್ಲಿ ಪ್ರಜ್ಞಾವಂತ ವೀರಶೈವರು ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಉದ್ಯಮಿ ಮಹೇಶ್‌ ಸಭೆ ಉದ್ಘಾಟಿಸಿದರು. ಹಿರಿಯ ಪತ್ರಕರ್ತ ಜಿ.ಎಸ್‌. ಉಜ್ಜಿನಪ್ಪ ಅಧ್ಯಕ್ಷತೆ ವಹಿಸಿದ್ದರು. ಹನುಮಂತಪ್ಪ, ಶ್ಯಾಮಲಾ ಶಿವಪ್ರಕಾಶ್‌, ಸಂಗಮನಾಥಯ್ಯ, ಮಲ್ಲಿಕಾರ್ಜುನ್‌, ಡಾ| ಸಿದ್ದಪ್ಪ, ಯಶವಂತ್‌ ಮಾತನಾಡಿದರು. ಬಿಜೆಪಿ ಮುಖಂಡರಾದ ಡಿ.ಟಿ. ಶ್ರೀನಿವಾಸ್‌, ಪೂರ್ಣಿಮಾ, ನಿವೃತ್ತ ಡಿವೈಎಸ್ಪಿ ಬಸವರಾಜ, ಎಂ. ಬಸವರಾಜಪ್ಪ, ಸೌಭಾಗ್ಯವತಿದೇವರು, ತಿಪ್ಪೇಸ್ವಾಮಿ, ರಾಜಶೇಖರಯ್ಯ, ಕಾಂತೇಶ್ವರಸ್ವಾಮಿ, ಆರ್‌.ಕೆ. ಸದಾಶಿವಪ್ಪ, ಆರ್‌.ಟಿ. ಬಸವರಾಜ, ಸಿ. ಸಿದ್ದರಾಮಣ್ಣ, ಎಸ್‌.ಟಿ. ಚಿದಾನಂದಪ್ಪ ಇದ್ದರು.

ಪ್ರತ್ಯೇಕ ಲಿಂಗಾಯತ ಧರ್ಮದ ಬೇಡಿಕೆ ಇಟ್ಟಿದ್ದು ಸಚಿವರಾದ ಎಂ.ಬಿ. ಪಾಟೀಲ್‌ ಹಾಗೂ ವಿನಯ ಕುಲಕರ್ಣಿ. ಸಿದ್ದರಾಮಯ್ಯ
ಮತ್ತೂಮ್ಮೆ ಮುಖ್ಯಮಂತ್ರಿಯಾಗಲು, ಎಂ.ಬಿ. ಪಾಟೀಲ್‌ ಉಪಮುಖ್ಯಮಂತ್ರಿಯಾಗಲು ನಮ್ಮ ಸಮುದಾಯವನ್ನು ಪಡೆಯಬೇಕೇ ಎಂದು ಖಾರವಾಗಿ ಪ್ರಶ್ನಿಸಿದರು. ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಮಾಡಿದ ಸಂಚು ಇದು. ಬಿಜೆಪಿಗೆ ಲಿಂಗಾಯತರು ಮತ್ತು ವೀರಶೈವರು ಇಬ್ಬರೂ ಬೇಕು.
ಕೆ.ಎಸ್‌. ನವೀನ್‌, ಬಿಜೆಪಿ ಜಿಲ್ಲಾಧ್ಯಕ್ಷರು

ಟಾಪ್ ನ್ಯೂಸ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.