ಗೋವಾದ ಹೈ ಅಲರ್ಟ್ ಸ್ಥಿತಿ ಕರಾವಳಿಯಲ್ಲಿ ಇಲ್ಲ
Team Udayavani, Apr 9, 2018, 8:01 AM IST
ಮಂಗಳೂರು/ಉಡುಪಿ: ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ ಗೋವಾ ಕರಾವಳಿಯಲ್ಲಿ ಗೋವಾ ಕರಾವಳಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದರೂ ಮಂಗಳೂರು ಕರಾವಳಿಯಲ್ಲಿ ಇದುವರೆಗೆ ಅಂತಹ ಯಾವುದೇ ಪರಿಸ್ಥಿತಿ ಇಲ್ಲ.
ಕರಾವಳಿ ತೀರದಲ್ಲಿ ಸಾಮಾನ್ಯವಾಗಿ ಉಗ್ರರ ಭೀತಿ, ತುಫಾನು, ಚಂಡ ಮಾರುತ ಇತ್ಯಾದಿ ಯಾವುದೇ ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ಪ್ರಥಮವಾಗಿ ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ಮೀನುಗಾರರಿಗೆ ಎಚ್ಚರಿಕೆ ನೀಡಲಾಗುತ್ತದೆ. ಆದರೆ ಅಂತಹ ಯಾವುದೇ ಎಚ್ಚರಿಕೆ ಇದುವರೆಗೆ ಬಂದಿಲ್ಲ ಎಂದು ಮೀನುಗಾರಿಕಾ ಮೂಲಗಳು ತಿಳಿಸಿವೆ. ಕರಾವಳಿ ಕಾವಲು ಪಡೆಯ ಪೊಲೀಸರಿಗೂ ಯಾವುದೇ ಸೂಚನೆ ಬಂದಿಲ್ಲ.
ಇಲ್ಲಿನ ಜಿಲ್ಲಾಡಳಿತಕ್ಕೆ ಅಂತಹ ಯಾವುದೇ ಸೂಚನೆ ಬಂದಿಲ್ಲ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ. ದೇಶದ ಭದ್ರತೆಗೆ ಸಂಬಂಧಿಸಿದ ಕೆಲವೊಂದು ಸಂಗತಿಗಳನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಲಾಗುತ್ತಿಲ್ಲ; ಈ ವಿಷಯದಲ್ಲಿ ಗೌಪ್ಯತೆಯನ್ನು ಕಾಯ್ದುಕೊಂಡು ಬರಲಾಗುತ್ತಿದೆ ಎಂದು ದ.ಕ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ