ಸಿಎಂ ಸಿದ್ದು ಬಣ ಕಾಂಗ್ರೆಸ್‌ನ ಬಿ ಟೀಂ


Team Udayavani, Apr 9, 2018, 1:07 PM IST

vij-2.jpg

ವಿಜಯಪುರ: ಜೆಡಿಎಸ್‌ಗೆ ಮತ ಹಾಕಿದರೆ ಬಿಜೆಪಿಗೆ ಹಾಕಿದಂತೆ, ಜೆಡಿಎಸ್‌ ಪಕ್ಷ ಬಿಜೆಪಿ ಬಿ ಟೀಂ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡುತ್ತಾರೆ. ಆದರೆ ಸ್ವಯಂತ ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ವಲಸೆ ಹೋಗಿದ್ದರಿಂದ ಆ ಖರ್ಗೆ, ಡಾ| ಪರಮೇಶ್ವರ ಅವರಂಥ ನಾಯಕರು ಮೂಲೆಗುಂಪಾದರು. ಹೀಗಾಗಿ ಸಿದ್ದರಾಮಯ್ಯ ಅವರು ತಮ್ಮದು ಕಾಂಗ್ರೆಸ್‌ ಬಿ ಟೀಂ ಎಂಬುವುದನ್ನು ಮರೆತಿದ್ದಾರೆ
ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದರು.

ರವಿವಾರ ನಗರದಲ್ಲಿ ನಾಗಠಾಣ ವಿಧಾನಸಭೆ ಕ್ಷೇತ್ರದ ಪಕ್ಷದ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆ ರಾಮಕೃಷ್ಣ ಹೆಗಡೆ ಸರ್ಕಾರದ ಕೊಡುಗೆ. ಇದನ್ನು ಸಿದ್ದರಾಮಯ್ಯ ಸರ್ಕಾರ ತನ್ನದೆಂದು ಹೇಳಿಕೊಳ್ಳುತ್ತಿದೆ. ಮತ್ತೂಂದು ರಾಜ್ಯದಲ್ಲಿ ಅಭಿವೃದ್ಧಿ ಮಾಡದೇ ಜಾಹೀರಾತು ಸರ್ಕಾರ ನಡೆಸಿದ ಸಿದ್ದರಾಮಯ್ಯ ಸರ್ಕಾರ, ಇದಕ್ಕಾಗಿ 1 ಸಾವಿರ ಕೋಟಿ ರೂ. ಖರ್ಚು ಮಾಡಿದ್ದು ಅನುಮೋದಿಸಿದೆ, ಮಂಜೂರು ಮಾಡಿದೆ ಎಂಬುದನ್ನು ಹೇಳಲು ಬಳಸಿದೆಯೇ ಹೊರತು ಮಾಡಿದ ಸಾಧನೆ ಹೇಳಲು ಅಲ್ಲ. ಇನ್ನು ನೀರಾವರಿ ಸಚಿವ ಎಂ.ಬಿ. ಪಾಟೀಲ ಬಲಲೇಶ್ವರ ಕ್ಷೇತ್ರಕ್ಕೆ ಮಿತಿಗೊಂಡರೇ ಹೊರತು ಬೇರೆಡೆ ಚಿತ್ತ ಹರಿಸಲೇ ಇಲ್ಲ ಎಂದು ಲೇವಡಿ ಮಾಡಿದರು.

ಬಿಜೆಪಿ ಹಾಗೂ ಕಾಂಗ್ರೆಸ್‌ ಒಂದೇ ನಾಣ್ಯದ ಎರಡು ಮುಖ. ಹೊಂದಾಣಿಕೆ ರಾಜಕೀಯ ಈ ಪಕ್ಷಗಳ ಗುಟ್ಟು ಎಂದು ಜರಿದ ಅವರು, ಬಿಜೆಪಿ ಹಿಂದೂ ಎಂದು, ಕಾಂಗ್ರೆಸ್‌ ದಲಿತ-ಮುಸ್ಲಿಂ ಸಮುದಾಯಗಳ ಪರ ಎಂದು ಬಿಂಬಿಸಿಕೊಳ್ಳುತ್ತಲೇ ಈ ಸಮುದಾಯಗಳನ್ನು ತಮ್ಮ ರಾಜಕೀಯ ದಾಳ ಮಾಡಿಕೊಂಡವು. ಆದರೆ ಈ ಸಮುದಾಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಿಲ್ಲ. ಇದೇ ಕಾರಣಕ್ಕೆ ರಾಜ್ಯದಲ್ಲಿ ಬಹುತೇಕ ಅಧಿಕಾರ ನಡೆಸಿ ಕಾಂಗ್ರೆಸ್‌ ಓರ್ವ ದಲಿತನನ್ನೂ ಸಿಎಂ ಮಾಡಲಿಲ್ಲ ಎಂಬುದಕ್ಕೆ ಇದೇ ಪ್ರಮುಖ ಕಾರಣ ಎಂದು
ವಿಶ್ಲೇಷಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌-ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಬಂದರೂ ಅಭಿವೃದ್ಧಿ ಬಗ್ಗೆ ಚರ್ಚಿಸದೇ ಪರಸ್ಪರ ಕೆಸರು ಎರಚಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ಆಡಳಿತದಲ್ಲಿ ರೈತರು ಮಾತ್ರವಲ್ಲ ನೂರಾರು ನೇಕಾರರೂ ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಗಾವಿ ಒಂದೇ ಜಿಲ್ಲೆಯಲ್ಲಿ 70 ನೇಕಾರರು ನೇಣಿಗೆ ಕೊರಳೊಡ್ಡಿದ್ದಾರೆ. ಇಷ್ಟಾದರೂ ಈ ಸರ್ಕಾರ ಕಣ್ತೆರೆದು ನೋಡಲಿಲ್ಲ. ಆದರೆ ನಮ್ಮ ಸರ್ಕಾರ
ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ರಾಜ್ಯದ ರೈತರ ರಾಷ್ಟ್ರೀಕೃತ, ಗ್ರಾಮೀಣ ಹಾಗೂ ಸಹಕಾರಿ ಎಲ್ಲ ಸಾಲ ಮಾಡಲಿದೆ. ಜೊತೆಗೆ ಕೃಷಿ ಸಬಲೀಕರಣಕ್ಕಾಗಿ ಇಸ್ರೇಲ್‌ ಮಾದರಿಯಲ್ಲಿ ಕೃಷಿ ಕಾರ್ಯಕ್ರಮಗಳನ್ನು ರೂಪಿಸಿ, ರೈತರ ಬೆವರಿನ ಶ್ರಮ ವ್ಯರ್ಥವಾಗದಂತೆ ಉತ್ಪನ್ನಗಳಿಗೆ ಮಾರುಕಟ್ಟೆ ಸೇರಿ ಹಲವು ಯೋಜನೆ ಜಾರಿಗೆ ತರಲಿದೆ ಎಂದರು.

ಮಾಜಿ ಸಚಿವ ಬಸವರಾಜ ಹೊರಟ್ಟಿ, ಬಿಎಸ್‌ಪಿ ರಾಜ್ಯ ಉಸ್ತುವಾರಿ ಗೋಪಿನಾಥ ಮಾತನಾಡಿದರು. ಜಿಲ್ಲೆಯ ಜೆಡಿಎಸ್‌ ಘೋಷಿತ ಅಭ್ಯರ್ಥಿಗಳಾದ ನಾಗಠಾಣ-ದೇವಾನಂದ ಚವ್ಹಾಣ, ಇಂಡಿ-ಬಿ.ಡಿ. ಪಾಟೀಲ, ಸಿಂದಗಿ-ಎಂ.ಸಿ. ಮನಗೂಳಿ, ಮುಖಂಡರಾದ ಎಂ.ಆರ್‌. ಪಾಟೀಲ ಬಳ್ಳೊಳ್ಳಿ, ರೇಷ್ಮಾ ಪಡೇಕನೂರ, ಎಲ್‌.ಎಲ್‌. ಉಸ್ತಾದ, ಚಂದ್ರಕಾಂತ ಹಿರೇಮಠ, ಎಸ್‌.ವಿ. ಪಾಟೀಲ, ಗೋವಿಂದ ಜೋಶಿ, ಕವಿತಾ ರಾಠೊಡ, ಮಲ್ಲಿಕಾರ್ಜುನ ಯಂಡಿಗೇರಿ ಸೇರಿದಂಥೆ ಇತರರು ವೇದಿಕೆ ಮೇಲಿದ್ದರು. 

ಟಾಪ್ ನ್ಯೂಸ್

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

police crime

West Bengal ಬಿಜೆಪಿಯ ಮುಸ್ಲಿಂ ಕಾರ್ಯಕರ್ತನ ಬರ್ಬರ ಹತ್ಯೆ

1-wq-wewqe

T20 World Cup; ಪಪುವಾ ನ್ಯೂ ಗಿನಿಯ ವಿರುದ್ಧ ವಿಂಡೀಸ್‌ ಗೆ 5 ವಿಕೆಟ್ ಗಳ ಜಯ

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Babaleshwara: ಸ್ಪ್ರೈಟ್ ತುಂಬಿದ್ದ ಲಾರಿ ರಸ್ತೆ ಮಧ್ಯೆಯೇ ಪಲ್ಟಿ: ಸಂಚಾರಕ್ಕೆ ಸಮಸ್ಯೆ

Babaleshwara: ಸ್ಪ್ರೈಟ್ ತುಂಬಿದ್ದ ಲಾರಿ ರಸ್ತೆ ಮಧ್ಯೆಯೇ ಪಲ್ಟಿ: ಸಂಚಾರಕ್ಕೆ ಸಮಸ್ಯೆ

police

Petrol ಸುರಿದು ಬೆಂಕಿ ಹಚ್ಚಿದ ಘಟನೆ: ಪ್ರಿಯತಮೆಯ ತಂದೆಯ ಬಂಧನ

doctor 2

Vijayapura;ಭ್ರೂಣಲಿಂಗ ಪತ್ತೆ: ವೈದ್ಯರು ಸೇರಿ ನಾಲ್ವರ ವಿರುದ್ಧ ಕ್ರಿಮಿನಲ್ ಕೇಸ್

ramesh-jigajinagi

Vijayapura;’ಮಂಗಳವಾರದ ಮಹಿಮೆ’ ಎನ್ನುತ್ತಿರುವ ಸಂಸದ ಜಿಗಜಿಣಗಿ

Vijayapura ಆಕಸ್ಮಿಕ ಬೆಂಕಿ: ನೂರಾರು ಲಿಂಬೆ ಗಿಡ ಹಾನಿ

Vijayapura; ಆಕಸ್ಮಿಕ ಬೆಂಕಿ: ನೂರಾರು ಲಿಂಬೆ ಗಿಡ ಹಾನಿ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

1-asdasdas

Tamil actor ಕರುಣಾಸ್‌ ಬಳಿ 40 ಬುಲೆಟ್‌ಗಳು ಪತ್ತೆ!

mob

WhatsApp ನಲ್ಲಿ ಶೀಘ್ರ ಚಾಟ್‌ ಫಿಲ್ಟರ್‌ ಅಪ್‌ಡೇಟ್‌?

Vimana 2

Again ವಿಮಾನಕ್ಕೆ ಬಾಂಬ್‌ ಬೆದರಿಕೆ: ವಾರದಲ್ಲಿ 4ನೇ ಘಟನೆ

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.