ಪೊಲಾರಿಸ್‌ಗೆ ಧೂಳಿನ ಅಭಿಷೇಕ!


Team Udayavani, Apr 9, 2018, 4:37 PM IST

bell-2.jpg

ಬಳ್ಳಾರಿ: ಜಿಲ್ಲೆಯಲ್ಲಿ ಕ್ರೀಡೆಗಳ ಬಗ್ಗೆ ಜಿಲ್ಲಾಡಳಿತವೇ ಎಷ್ಟು ನಿರಾಸಕ್ತಿ ವಹಿಸುತ್ತದೆ ಎಂಬುದಕ್ಕೆ ನಗರದ ಜಿಲ್ಲಾ ಕ್ರೀಡಾಂಗಣ ಆವರಣದಲ್ಲಿ ಬಳಕೆಯಾಗದೆ ಧೂಳು ಹಿಡಿಯುತ್ತಿರುವ ಪೊಲಾರಿಸ್‌ ಸಾಹಸ ಕ್ರೀಡಾ ವಾಹನಗಳೇ ಪ್ರತ್ಯಕ್ಷ ಸಾಕ್ಷಿ. ವಾಹನ ಸಂಚರಿಸಲು ಪ್ರತ್ಯೇಕ ಟ್ರಾಫಿಕ್‌ ಸೇರಿದಂತೆ ಇತರೆ ಮೂಲ ಸೌಲಭ್ಯ ಕಲ್ಪಿಸದೆ, ವಾಹನಗಳನ್ನು ಖರೀದಿಸಿರುವುದೇ ವಾಹನಗಳು ನಿರುಪಯುಕ್ತವಾಗಲು ಕಾರಣವಾಗಿವೆ.

ಹಂಪಿ ಉತ್ಸವ ಸೇರಿದಂತೆ ವಿಶೇಷ ಸಂದರ್ಭಗಳಲ್ಲಿ ಸಾಹಸ ಕ್ರೀಡೆಗಳಿಗೆ ಉತ್ತೇಜನ ನೀಡುವ ಸಲುವಾಗಿ 2013ರಲ್ಲಿ 5 ಲಕ್ಷ ರೂ. ವೆಚ್ಚದಲ್ಲಿ ಮೂರು ಪೊಲಾರಿಸ್‌ ಸಾಹಸ ವಾಹನಗಳನ್ನು ಖರೀದಿಸಲಾಗಿತ್ತು. ಇದಕ್ಕೆ ಅಂದಿನ ಜಿಲ್ಲಾಧಿಕಾರಿ ಡಾ| ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ಹೆಚ್ಚು ಜವಾಬ್ದಾರಿ ವಹಿಸಿದ್ದು, ಸಾಹಸ ಕ್ರೀಡೆಗಳಿಗೆ ಹೆಚ್ಚು ಒತ್ತು ನೀಡಬೇಕೆಂಬುದು ಅವರ ಮುಖ್ಯ ಉದ್ದೇಶವಾಗಿತ್ತು.

ಅದಕ್ಕಾಗಿ ಖಾಸಗಿ ಪ್ರಾಯೋಜಕತ್ವದಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ವಾಹನಗಳನ್ನು ಖರೀದಿಸಿದ್ದರು. ಅಂದಿನಿಂದ ಇಂದಿನವರೆಗೆ ಹಲವು ಹಂಪಿ ಉತ್ಸವಗಳು ಆಚರಿಸಿದರೂ, ಸಾಹಸ ಕ್ರೀಡೆಗಳಲ್ಲಿ ವಾಹನಗಳನ್ನು ಮಾತ್ರ ಬಳಕೆ ಮಾಡಲಿಲ್ಲ. ಅವುಗಳ ಪ್ರದರ್ಶನವೂ ಜನರ ಕಣ್ಣಿಗೆ ಬೀಳಲಿಲ್ಲ. 

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಿಂತಲ್ಲೇ ಸ್ಥಗಿತಗೊಂಡಿರುವ ಪೊಲಾರಿಸ್‌ ವಾಹನಗಳು ಬಳಕೆಗೆ ಬಾರದೆ ಧೂಳು ಹಿಡಿಯುತ್ತಿವೆ. ಕಳೆದ ಐದು ವರ್ಷಗಳಿಂದ ನಿಂತಲ್ಲೇ ನಿಂತಿದ್ದು, ಬ್ಯಾಟರಿ ಸೇರಿದಂತೆ ಇತರೆ ವಸ್ತುಗಳು ದುರಸ್ತಿಗೆ ಬಂದಿವೆ. ಎಲ್ಲವನ್ನೂ ಹೊಸದಾಗಿ ಅಳವಡಿಸಬೇಕಾಗಿದೆ. ಇದಕ್ಕಾಗಿ ಪುನಃ ಹಣ ಖರ್ಚು ಮಾಡಬೇಕಿದೆ. ಹಲವಾರು ಕಾರ್ಯಕ್ರಮಗಳ ನಿಮಿತ್ತ ಜಿಲ್ಲಾ ಕ್ರೀಡಾಂಗಣಕ್ಕೆ ಆಗಮಿಸುವ ಮೇಲಧಿಕಾರಿಗಳು ಕಂಡು ಕಾಣದಂತೆ ತೆರಳುತ್ತಿದ್ದಾರೆ. ಕಣ್ಣೆದುರಿಗೆ ಧೂಳು ಹಿಡಿಯುತ್ತಿರುವ ವಾಹನಗಳ ಬಳಕೆಗೆ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲು ಮುಂದಾಗದಿರುವುದು ಆಡಳಿತದ ಕಾರ್ಯ ವೈಖರಿಗೆ ಹಿಡಿದ ಕೈಗನ್ನಡಿಯಾಗಿದೆ.

ಇನ್ನೂ ಈ ಹಿಂದೆ ಗಣರಾಜ್ಯೋತ್ಸವ, ಸ್ವತಂತ್ರ ದಿನಾಚರಣೆಯಂದು ಗೃಹರಕ್ಷಕ ಸಿಬ್ಬಂದಿಗಳು ಪೊಲಾರಿಸ್‌ ವಾಹನಗಳನ್ನು ಬಳಸಿ, ಸಾಹಸ ಕ್ರೀಡೆಗಳನ್ನು ಪ್ರದರ್ಶಿಸಿದ್ದರು. ಇದನ್ನು ಹೊರತುಪಡಿಸಿದರೆ, ಇನ್ನುಳಿದಂತೆ ವಾಹನಗಳ ಬಳಕೆಯಾಗಿಲ್ಲ. ಇದರಿಂದ ಲಕ್ಷಾಂತರ ರೂ. ಹಣ ನಷ್ಟವಾಗಿದ್ದು, ಕ್ರೀಡಾಸಕ್ತರಲ್ಲಿ ಬೇಸರ ಮೂಡಿಸಿದೆ.

ಸಾಹಸ ಕ್ರೀಡೆಗಳಿಗೆ ಬಳಸುವ ಪೊಲಾರಿಸ್‌ ವಾಹನಗಳ ಸಂಚಾರಕ್ಕೆ ಪ್ರತ್ಯೇಕ ಟ್ರಾಫಿಕ್‌ ಬೇಕು. ಆದರೆ, ಯಾವುದೇ ಟ್ರಾಕ್‌ ನಿರ್ಮಿಸದೆ, ವಾಹನಗಳನ್ನು ಖರೀದಿಸಿ, ಹಣವನ್ನು ಪೋಲು ಮಾಡಲಾಗಿದೆ. ವಾಹನಗಳ ಚಾಲನೆಗೆ ಪ್ರತ್ಯೇಕ ಟ್ರಾಕ್‌ ನಿರ್ಮಿಸಿ, ಅವುಗಳಿಗೆ ಇಂತಿಷ್ಟು ಶುಲ್ಕ ನಿಗದಿಪಡಿಸಿ, ಕ್ರೀಡಾಸಕ್ತರಿಗೆ ವಾಹನ ಚಲಾಯಿಸಲು ಅವಕಾಶ ಕಲ್ಪಿಸಬೇಕು. ಈ ಮೂಲಕ ವಾಹನಗಳನ್ನು ಬಳಸಬೇಕು. ಆದರೆ, ಇಲ್ಲಿ ಯಾವುದೇ ಮೂಲ ಸೌಲಭ್ಯ ಕಲ್ಪಿಸದೆ ವಾಹನ ಖರೀದಿಸಿರುವುದು ಕ್ರೀಡಾಸಕ್ತರನ್ನು ಬೇಸರ ಮೂಡಿಸಿದೆ.
 
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಳೆದ ಐದು ವರ್ಷಗಳಿಂದ ಬಳಕೆಯಾಗದೆ ಸ್ಥಗಿತಗೊಂಡಿರುವ ಪೊಲಾರಿಸ್‌ ವಾಹನಗಳ
ದುರಸ್ತಿಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಮೆಕಾನಿಕ್‌ ಸಹ ಬಂದು ವಾಹನಗಳನ್ನು ಪರಿಶೀಲನೆ ನಡೆಸಿದ್ದಾರೆ. ಶೀಘ್ರದಲ್ಲೇ ರಿಪೇರಿ ಮಾಡಲಿದ್ದಾರೆ. ಜತೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ವಾಹನ ಸಂಚಾರಕ್ಕೆ ಪ್ರತ್ಯೇಕ ಟ್ರಾಕ್‌ ನಿರ್ಮಿಸಲು ಚಿಂತನೆ ನಡೆಸಲಾಗಿದೆ.  ರೆಹಮತ್‌ ವುಲ್ಲಾ, ಸಹಾಯಕ ನಿರ್ದೇಶಕರು, ಯುವಜನ ಮತ್ತು ಕ್ರೀಡಾ ಇಲಾಖೆ. 

„ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.