ಕಾಳಿಂಗ ಸರ್ಪದ ಪ್ರಾತ್ಯಕ್ಷಿಕೆ!


Team Udayavani, Apr 9, 2018, 5:51 PM IST

shiv.jpg

ಸಾಗರ: ನಗರದ ಸಂಗೊಳ್ಳಿ ರಾಯಣ್ಣ ಮೈದಾನದಲ್ಲಿ ಸೆಂಟರ್‌ ಸ್ಟೇಜ್‌ ಸಂಸ್ಥೆ ವತಿಯಿಂದ ಏರ್ಪಡಿಸಿರುವ ಮಕ್ಕಳ
ಬೇಸಿಗೆ ಶಿಬಿರದಲ್ಲಿ ಚಿಣ್ಣರಿಗೆ ಉರಗ ತಜ್ಞ ಮನ್ಮಥಕುಮಾರ್‌ ಜೀವಂತ ಕಾಳಿಂಗ ಸರ್ಪವನ್ನೇ ಹಿಡಿದು ತಂದು ಅದರ ಕುರಿತು ಮಾಹಿತಿ, ಪ್ರಾತ್ಯಕ್ಷಿಕೆ ನಡೆಸಿಕೊಟ್ಟ ವಿಶೇಷ ಘಟನೆ ಭಾನುವಾರ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಳಿಂಗ ಸರ್ಪ ಅತ್ಯಂತ ನಾಚಿಕೆ ಸ್ವಭಾವದ ಉರಗ. ಇದು ಕಚ್ಚಿದ ಉದಾಹರಣೆಗಳು ತೀರಾ ಕಡಿಮೆ. ಯಾರಿಗಾದರೂ ಕಚ್ಚಿದರೆ ಕಚ್ಚಿದ ಹದಿನೈದು ನಿಮಿಷದಲ್ಲಿ ಸಾಯುತ್ತಾರೆ. ನಾಗರ ಹಾವು ಕಚ್ಚಿದರೆ ಎರಡು ತಾಸು ಬದುಕಬಹುದು ಎಂದು ತಿಳಿಸಿದರು.
 
ಪಶ್ಚಿಮ ಘಟ್ಟದ ಶ್ರೇಣಿಯಲ್ಲಿ ಕಾಳಿಂಗ ಸರ್ಪ ಕಂಡುಬರುತ್ತದೆ. ಅದು ಬಿಟ್ಟರೆ ಭಾರತದಲ್ಲಿ ಅಸ್ಸಾಂನಲ್ಲಿ ಮಾತ್ರ ಈ ಸಂತತಿ ಕಾಣುತ್ತದೆ. ಕಾಳಿಂಗ ಸರ್ಪ ಸುಮಾರು 12ರಿಂದ 16 ಅಡಿ ಇರುತ್ತದೆ. ಈಗ ಹೆಣ್ಣು ಕಾಳಿಂಗ ಮೊಟ್ಟೆ ಇಡುವ ಸಮಯ. ಕನಿಷ್ಟ ಇದು 62 ಮೊಟ್ಟೆಗಳನ್ನಿಡುತ್ತದೆ.
 
ಮೊಟ್ಟೆಯಿಂದ ಮರಿ ಹೊರಬರುತ್ತಿರುವಂತೆಯೇ ಅದರಲ್ಲಿ ವಿಷ ಹುಟ್ಟಿರುತ್ತದೆ ಎಂದು ವಿವರಿಸಿದರು. ಇತ್ತೀಚಿನ ದಿನಗಳಲ್ಲಿ ಕಾಡಿನ ಅವ್ಯಾಹತ ನಾಶ, ಶುಂಠಿ ಇತರ ಬೆಳೆಗಳಿಗೆ ಮಂಗ ಹಾಗೂ ಹಂದಿಯ ಉಪಟಳಕ್ಕಾಗಿ ಬಲೆ ಬೀಸಲಾಗುತ್ತದೆ. ಅದರಲ್ಲಿ ಸಿಕ್ಕಿ ಹಾಕಿಕೊಂಡು ಸಾಕಷ್ಟು ಕಾಳಿಂಗ ಸರ್ಪಗಳು ಸಾಯುತ್ತಿವೆ.

ನೋಡಲು ಭಯ ಹುಟ್ಟಿಸುವ ಕಾಳಿಂಗಸರ್ಪ ಮಳೆ ಮತ್ತು ಚಳಿಗಾಲದಲ್ಲಿ ಕಪ್ಪುಬಣ್ಣವನ್ನು ಹೊಂದಿರುತ್ತದೆ. ಬೇಸಿಗೆಯಲ್ಲಿ ಅದು ಚಾಕಲೇಟ್‌ ಬಣ್ಣಕ್ಕೆ ತಿರುಗುತ್ತದೆ ಎಂದರು.

ಶಿಬಿರದ ನಿರ್ದೇಶಕಿ ಬೆಂಗಳೂರಿನ ಮಂಜುಳಾ ನಾರಾಯಣ್‌ ಮಾತನಾಡಿ, ಆಧುನಿಕತೆಯ ಸೆಳೆತಕ್ಕೆ ಸಿಕ್ಕು ಮಕ್ಕಳು ನವ
ನಾಗರಿಕತೆಯ ಬೆನ್ನು ಹತ್ತಿದ್ದಾರೆ. ಅವರ ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರಗಳು ಸಹಕಾರಿಯಾಗಿವೆ. ರಂಗಭೂಮಿ ಮಕ್ಕಳ ಅಭಿವ್ಯಕ್ತಿಗೆ ಉತ್ತಮ ಮಾಧ್ಯಮ.

ಇದರಲ್ಲಿ ನಟನೆ, ಗಾಯನ, ಸಂಗೀತ ಎಲ್ಲವೂ ಒಳಗೊಂಡಿರುತ್ತದೆ. ಶಿಬಿರದಲ್ಲಿ ಕೋಟಗಾನಹಳ್ಳಿ ರಾಮಯ್ಯನವರ “ನಾಯಿತಿಪ್ಪ’ ನಾಟಕವನ್ನು ಕಲಿಸಲಾಗುತ್ತಿದೆ. ಏ. 14ರಂದು ಸಂಗೊಳ್ಳಿ ರಾಯಣ್ಣ ಮೈದಾನದ ಮರದ ನೆರಳಿನಲ್ಲಿ ಅಭಿನಯಿಸಲಾಗುವುದು
ಎಂದರು. 

ಸೆಂಟರ್‌ ಸ್ಟೇಜ್‌ ಸಂಸ್ಥೆಯ ಸಂತೋಷ್‌ ಡಿ.ಆರ್‌., ಗಾಯಕಿ ಸಹನಾ ಜಿ. ಭಟ್‌, ಸುಬ್ರಹ್ಮಣ್ಯ, ಗಾಂ ಧಿನಗರ ಯುವಜನ
ಸಂಘದ ಅಧ್ಯಕ್ಷ ವೆಂಕಟೇಶ್‌, ಸಮೀಕ್ಷಾ, ಸಮೀಕ್ಷಾ, ಪ್ರತೀಕ್ಷಾ, ಲಾವಣ್ಯ, ಪರಿಣ್‌, ರಾಘವ್‌ ಇತರರು ಇದ್ದರು

ಟಾಪ್ ನ್ಯೂಸ್

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

ಪ್ರಭಾಸ್‌ ಜೀವನಕ್ಕೆ ಬರಲಿದ್ದಾರೆ ವಿಶೇಷ ವ್ಯಕ್ತಿ.. ಮದುವೆ ಆಗಲಿದ್ದಾರಾ ʼಸಲಾರ್‌ʼ ನಟ?

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Hubli; ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

Anushka Shetty: ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

5-araga

SSLC: ಉತ್ತಮ ಅಂಕ ಪಡೆದ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ ಶಾಸಕ ಆರಗ ಜ್ಞಾನೇಂದ್ರ

ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Shimoga ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Shimoga: ಆಟೋಗೆ ಕ್ಯಾಂಟರ್ ಡಿಕ್ಕಿ, ವಿದ್ಯಾರ್ಥಿನಿ ಸಾವು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Swati Maliwal Arvind Kejriwal’s aide repeatedly kicked her in stomach

AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್

17

ಕಾರ್ತಿಕ್‌ – ಸೂರ್ಯ ಕಾಂಬಿನೇಷನ್ ನ ಬಹು ನಿರೀಕ್ಷಿತ ಸಿನಿಮಾಕ್ಕೆ ಪೂಜಾ ಹೆಗ್ಡೆ ನಾಯಕಿ?

5-

Doddaballapura: ಹೇಮಂತ್ ಗೌಡ ಹತ್ಯೆ ಪ್ರಕರಣ: ಗುಂಡು ಹಾರಿಸಿ ಆರೋಪಿಯ ಬಂಧನ

The Judgement;

The Judgement; ಭವಿಷ್ಯ ನಿರ್ಧರಿಸುವ ಜಡ್ಜ್ಮೆಂಟ್‌: ರವಿಚಂದ್ರನ್‌

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.