ಶಾಸಕ ಕಾಗೇರಿ ಗೆಲುವಿಗೆ ಶ್ರಮಿಸಲು “ಸ್ವಯಂ’ ಪಡೆ ಸಿದ್ಧ


Team Udayavani, Apr 10, 2018, 12:20 PM IST

Kageri.jpg

ಶಿರಸಿ: ಸೋಲಿಲ್ಲದ ಸರದಾರ, ಕ್ಷೇತ್ರ ಬದಲಾವಣೆ ಮಾಡಿದರೂ ಎರಡು ಸಲ ಗೆದ್ದ ಶಿರಸಿ ವಿಧಾನ ಸಭಾ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ರಕ್ಷಣೆಗೆ ಸ್ವಯಂ ಪಡೆ ಸಿದ್ಧವಾಗಿದೆ. ಈಗಾಗಲೇ ತನ್ನೊಳಗಿನ ಕಾರ್ಯ ಆರಂಭಿಸಿದ್ದು, ಹೊರ ನೋಟಕ್ಕೆ ಕಾಣದೇ ಒಳಗೊಳಗೇ ಸಂಘಟನೆ, ಪ್ರಚಾರ, ರಾಷ್ಟ್ರಹಿತ ಕಾರ್ಯ ಎಂದು ಕೆಲಸ ಶುರು ಮಾಡಿದೆ.

ಜಿಲ್ಲೆಯ ರಾಜಕೀಯ ವಿದ್ಯಮಾನದಲ್ಲಿ ಪ್ರಥಮ ಬಾರಿಗೆ ವಿಧಾನ ಸಭಾ ಚುನಾವಣೆಗೆ ಈ ಸ್ವಯಂ ತಂಡ ಇಳಿದಿದ್ದು ಇದೇ ಪ್ರಥಮ. ಕಳೆದ ಸಂಸತ್‌ ಚುನಾವಣೆಯಲ್ಲಿ ಅಖಾಡಕ್ಕೆ ಇಳಿದಿದ್ದ ಕಾರ್ಯಕರ್ತರ ಪಡೆ ಇದೀಗ ವಿಧಾನ ಸಭಾ ಚುನಾವಣೆಗೂ ಇಳಿದಿದೆ.

ಏನಿದು ಸ್ವಯಂ ಪಡೆ?

 ಬೇರೆ ಬೇರೆ ಹಂತದಲ್ಲಿ ಪ್ರಮುಖರು ನಿರ್ವಹಣೆ ಮಾಡುವ ಆದರೆ, ರಾಜಕೀಯ ಪಕ್ಷದ ಕಾರ್ಯಕರ್ತರಿಗೆ ಸಂಬಂಧ  ಇಲ್ಲದಂತೆ ಕೆಲಸ ಮಾಡುತ್ತಿರುವ ಸಂಘಟನೆ ಇದು. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಶಿರಸಿಯಲ್ಲಿ ಸ್ವಯಂ ಆಗಿ ಪ್ರಚಾರದ ಕಾರ್ಯಕ್ಕೆ ಇಳಿದಿದೆ.

ಈಗಾಗಲೇ ಕ್ಷೇತ್ರದಲ್ಲಿ ಐವತ್ತಕ್ಕೂ ಅಧಿಕ ಕಾರ್ಯಕರ್ತ ಪ್ರಮುಖರು ರಾಷ್ಟ್ರಹಿತ, ರಾಜ್ಯದ ಒಳಿತು, ಹಿಂದುಗಳ ಮೇಲಿನ ದೌರ್ಜನ್ಯ, ದೇವಾಲಯಗಳ ಸರಕಾರೀಕರಣ ಸೇರಿದಂತೆ ಅನೇಕ ಕಾರಣಗಳನ್ನು ಪ್ರಸ್ತುತಗೊಳಿಸಿ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ.

ಟಾರ್ಗೆಟ್‌

ಶಾಸಕ ಕಾಗೇರಿ ಅವರು ಶಿರಸಿ ವಿಧಾನ ಸಭಾ ಕ್ಷೇತ್ರಕ್ಕೆ ಅಂಕೋಲಾದಲ್ಲಿ ಮೂರು   ಅವಧಿ  ಪೂರ್ಣಗೊಳಿಸಿ ಬಂದಾಗ 32 ಸಾವಿರ ಮತಗಳು ಅಧಿ ಕವಾಗಿದ್ದವು. ಆದರೆ, ಕಳೆದ ಚುನಾವಣೆಯಲ್ಲಿ 3 ಸಾವಿರ ಚಿಲ್ಲರೆ ಮತಗಳು ಬಂದಿದ್ದವು. ಈ ಬಾರಿ ಗೆಲ್ಲಿಸುವ ಜೊತೆಗೆ ಬಿಜೆಪಿ ಸರಕಾರವನ್ನು ರಾಜ್ಯದಲ್ಲಿ ತರಬೇಕು ಎಂಬ ಆಶಯದಲ್ಲಿ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಉಳಿದ ಪಕ್ಷಗಳಿಗೆ ಕಾಗೇರಿ ಟಾರ್ಗೆಟ್‌ ಆಗಿದ್ದಾರೆ. ಐದು ಬಾರಿ ಆಡಳಿತ ಮಾಡಿದ್ದನ್ನು ನೋಡಿದ್ದೇವೆ, ನಮಗೆ ಅವಕಾಶ ಕೊಡಿ ಎಂದು ಜೆಡಿಎಸ್‌ ಶಶಿಭೂಷಣ ಹೆಗಡೆ, ಕಾಂಗ್ರೆಸ್‌ ಟಿಕೆಟ್‌ ಆಂಕಾಕ್ಷಿತರಾದ ಭೀಮಣ್ಣ ನಾಯ್ಕ, ನಿವೇದಿತ್‌ ಆಳ್ವಾ ಇಬ್ಬರೂ ಕೇಳುತ್ತಿದ್ದಾರೆ.

ಕಾಂಗ್ರೆಸ್‌ ಟಿಕೆಟ್‌ ಯಾರಿಗೆ ಎಂಬುದರ ಮೇಲೆ ಚುನವಣಾ ಪ್ರಚಾರದ ನಡೆ ಕೂಡ ಬದಲಿಸಿಕೊಳ್ಳಲಿದೆ. ಜೆಡಿಎಸ್‌, ಬಿಜೆಪಿ ಇಬ್ಬರೂ ಕಾಂಗ್ರೆಸ್‌ ಅಭ್ಯರ್ಥಿ ಮೇಲೆ ತಮ್ಮ ಜಯ ಅಪಜಯದ ಲೆಕ್ಕಾಚಾರ ಮಾಡುತ್ತಿದ್ದಾರೆ. ಬಲವಾಗುವುದೇ?: ವಿಶ್ವ ಹಿಂದೂ ಪರಿಷತ್‌, ಆರ್‌ಎಸ್‌ಎಸ್‌ ಹಾಗೂ ಇತರ ಹಿಂದೂ ಸಂಘಟನೆಗಳು ಬಿಜೆಪಿಗೆ ಬೆಂಬಲವಾಗಿ ನಿಂತಿವೆ. ಬಿಜೆಪಿಯಲ್ಲಿ ಇನ್ನೊಬ್ಬ ಅಭ್ಯರ್ಥಿ ಕೃಷ್ಣ ಎಸಳೆ ಇದ್ದರೂ ಅವರಿಗೆ ಕರಾವಳಿ ಭಾಗದ ಜವಾಬ್ದಾರಿ ನೀಡಿದ್ದಾರೆ. ಕರಾವಳಿಯ ಮೂರು ಹಾಗೂ ಶಿರಸಿ, ಯಲ್ಲಾಪುರ ಕ್ಷೇತ್ರದ ಗೆಲುವು ಅನಂತಕುಮಾರ ಹೆಗಡೆ ಅವರ ಮರ್ಯಾದೆ ಉಳಿಸುವುದಕ್ಕೂ ಕಾರಣವಾಗಿದೆ.

ಈ ಕಾರಣದಿಂದ ಆರ್‌ಎಸ್‌ಎಸ್‌ ಸಂಘಟನೆಗೆ ಶಿರಸಿ ಜವಬ್ದಾರಿ ವಿಶೇಷವಾಗಿ ನೀಡಲಾಗಿದೆ ಎಂಬ ಮಾತುಗಳೂ ಇವೆ. ಕಾಗೇರಿ ಕೂಡ ಕಳೆದ ಅವಧಿಗಿಂತ ಕೆಲವು ವಿಚಾರದಲ್ಲಿ ಸ್ಟ್ರಾಂಗ್‌ ಆಗಿದ್ದಾರೆ ಎಂಬುದೂ ಹಲವು ಘಟನೆಗಳಿಂದ ಸಾಬೀತಾಗಿದೆ ಎಂದೂ ಅವರ ಒಡನಾಡಿಗಳೇ ಹೇಳುತ್ತಿದ್ದಾರೆ. ಈವರೆಗೆ ವಿಧಾನ ಸಭಾ ಚುನಾವಣೆಗೆ ಇಳಿಯದ ಸ್ವಯಂ ಪಡೆ ಈ ಬಾರಿ ಇಳಿದದ್ದು ಯಾಕೆ? ಸೋಲಿನ ಭೀತಿನಾ ಎಂಬ ಪ್ರಶ್ನೆಯೂ ಜತೆಯಾಗಿದೆ. 

ಶಿರಸಿ ಕ್ಷೇತ್ರ ಉಳಿದರೆ ಉಳಿದ ಕ್ಷೇತ್ರಗಳೂ ಉಳಿಯುತ್ತವೆ. ಒಮ್ಮೆ ಇಲ್ಲಿ ನಷ್ಟವಾದರೆ ಉಳಿದ ಕಡೆ ಇನ್ನು ಯಾವತ್ತೂ ಬರುವುದಿಲ್ಲ. ಈ ಕಾರಣದಿಂದ ನಾವು ಇದೇ ಪ್ರಥಮ ಬಾರಿಗೆ ವಿಧಾನ ಸಭಾ ಚುನಾವಣೆ ಅಖಾಡಕ್ಕೆ ಇಳಿದಿದ್ದೇವೆ.
 ಹೆಸರು ಬಯಸದ ಆರ್‌ಎಸ್‌ಎಸ್‌ ಹಿರಿಯ ಪ್ರಮುಖ

ಕಾಂಗ್ರೆಸ್‌ ಟಿಕೆಟ್‌ ಮೇಲೆ ತ್ರಿಕೋನ ಸ್ಪರ್ಧೆಯಲ್ಲಿ ಗೆಲುವು ನಿಂತಿದೆ. ಶಿರಸಿ ಕ್ಷೇತ್ರದಷ್ಟು ಕುತೂಹಲ ಬೇರೆ ಕಡೆ ಇಲ್ಲ. ಇಲ್ಲಿ ಬಿದ್ದರೂ ಗೆದ್ದರೂ ಸಾವಿರ ಮತಗಳೊಳಗೆ…
 ಜಿ.ಎನ್‌.ನಾಯ್ಕ, ಮತದಾರ

ರಾಘವೇಂದ್ರ ಬೆಟ್ಟಕೊಪ್ಪ

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.