ಇಸ್ರೇಲ್‌ ಕೃಷಿ ಪದ್ಧತಿ ಜಾರಿ ಅವಶ್ಯ: ಕುಮಾರಸ್ವಾಮಿ


Team Udayavani, Apr 10, 2018, 5:13 PM IST

vij-1.jpg

ಬಸವನಬಾಗೇವಾಡಿ: ರಾಜ್ಯದಲ್ಲಿ ಇಸ್ರೇಲ್‌ ದೇಶದ ಮಾದರಿಯಲ್ಲಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಈಗಾಗಲೇ ಅಧ್ಯಯನ ಮಾಡಲಾಗಿದೆ. ರಾಜ್ಯದಲ್ಲಿ ಇಸ್ರೇಲ್‌ ದೇಶದ ಮಾದರಿಯಲ್ಲಿ ಕೃಷಿ ಪದ್ಧತಿ ಜಾರಿಯಾದರೆ ರೈತರು ಸಂಕಟದಿಂದ ಹೊರ ಬರಲು ಸಾಧ್ಯವೆಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ವೀರಭದ್ರೇಶ್ವರ ನಗರದಲ್ಲಿ ಬಯಲು ರಂಗ ಮಂದಿರದಲ್ಲಿ ಕುಮಾರಪರ್ವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹೊಸ ಕೃಷಿ ನೀತಿ ಜಾರಿಗೆ ಬರಬೇಕಿದೆ ಎಂದರು.

ರಾಜ್ಯದಲ್ಲಿ ಯುವಕರು ಮತ್ತು ರೈತರು ಮಹಿಳೆಯರಿಗೆ ಗೌರವದಿಂದ ಕಾಣುವಂತ ಸರಕಾರ ಅಧಿಕಾರಕ್ಕೆ ಬರಬೇಕು. ಅಂದಾಗ ಮಾತ್ರ ಈ ರಾಜ್ಯದ ಯುವಕರು, ರೈತರು, ಮಹಿಳೆಯರು ಸ್ವಾವಲಂಬಿಯಾಗಿ ಬದುಕಲು ಸಾಧ್ಯವಾಗುತ್ತದೆ. ಯಾಕೆಂದರೆ ರಾಜ್ಯದಲ್ಲಿ ಯುವಕರು ಉದ್ಯೋಗವಿಲ್ಲದೆ ನಿರುದ್ಯೋಗ ತಾಂಡವಾಡುತ್ತಿದೆ. ರೈತರು ಸಾಲ ಸೂಲ ಮಾಡಿ ತಮ್ಮ ಕುಟುಂಬದ ಜೀವನ ಸಾಗಿಸಲು ಸಾಧ್ಯವಾಗದೆ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆದರೆ ಕೇಂದ್ರದಲ್ಲಿನ ಬಿಜೆಪಿ ಸರಕಾರ ರಾಜ್ಯದಲ್ಲಿನ ಕಾಂಗ್ರೆಸ್‌ ಸರಕಾರ ರೈತರ ಮತ್ತು ಯುವಕರ ನೇರವಿಗೆ ಬಾರದೆ ಇರುವುದು ನೋವಿನ ಸಂಗತಿಯಾಗಿದೆ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಸಾವಿರಾರು ಕೋಟಿ ಹಣದ ಜಾಹೀರಾತು ನೀಡಿ ಕರ್ನಾಟಕ ಬದಾಲಾವಣೆ ಎಂದು ಹೇಳುತ್ತಾರೆ. ಇವರ ಬದಲಾವಣೆ ಅಭಿವೃದ್ಧಿ ಪರವಾಗಿಲ್ಲ, ಕೇವಲ ಜಾಹೀರಾತು ಮೂಲಕ ಮಾತ್ರ ಅಭಿವೃದ್ಧಿಯಾಗಿದೆ ಎಂದು ಆರೋಪಿಸಿದರು.

ಎಂ.ಬಿ. ಪಾಟೀಲ ರಾಜ್ಯದ ಸಚಿವರಾಗಿ ಕಾರ್ಯ ನಿರ್ವಹಿಸದೆ ಕೇವಲ ಬಬಲೇಶ್ವರ ಕ್ಷೇತ್ರಕ್ಕೆ ಸಚಿವರಾಗಿ ಕಳೆದ 5 ವರ್ಷದಿಂದ ಕಾರ್ಯ ನಿರ್ವಹಿಸಿದ್ದಾರೆ. ರಾಜ್ಯದಲ್ಲಿ ನೀರಾವರಿ ಮತ್ತು ಕೆರೆ ತುಂಬುವ ಯೋಜನೆಗೆ ಪ್ರಾಮುಖ್ಯತೆ ನೀಡದೆ ತಮ್ಮ ಮನೆಯಿಂದ ತಂದಿರುವ ಹಣದಂತೆ ಸರಕಾರದ ಮತ್ತು ಸಾರ್ವಜನಿಕರ ಸಾವಿರಾರು ಕೋಟಿ ಹಣವನ್ನು ಜಾಹಿರಾತಿಗೆ ಬಳಸಿ ತಮ್ಮ ಅಭಿವೃದ್ಧಿ ಜಾಹೀರಾತಿನಲ್ಲಿ ತೊರಿಸಿದ್ದಾರೆ ಎಂದು ವ್ಯಂಗ್ಯವಾಡಿದರು. ರಾಜ್ಯದ ಜನತೆ 2018 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷದ ಬಾಗಿಲು ತಟ್ಟುವ ಕೆಲಸವನ್ನು ನನಗೆ ನೀಡದೆ ಸರಳ ಬಹುಮತಕ್ಕೆ ಅವಕಾಶ ನೀಡಿ 113 ಸ್ಥಾನ ಗೆಲ್ಲಿಸಿ. ನಿಮಗೆ 5 ವರ್ಷಗಳ ಕಾಲ ಸುಭಧ್ರ ಸರಕಾರ ನೀಡುವ ಜವಾಬ್ದಾರಿ ನನ್ನದು. ರಾಜ್ಯದ ಎಲ್ಲ ಜನತೆಯನ್ನು ಒಂದುಗೂಡಿಸಿ ಕೊಂಡೊಯ್ಯುವುದರ ಜೊತೆಗೆ ಎಲ್ಲಿರಿಗೂ ಸಮಪಾಲು ಎಲ್ಲರಿಗೂ ಸಮಬಾಳು ನೀಡುತ್ತೇನೆ ಎಂದು ಹೇಳಿದರು.

ಬಸವನಬಾಗೇವಾಡಿ ಮತಕ್ಷೇತ್ರದ ಜಾತ್ಯತೀತ ಜನತಾದಳ ಪಕ್ಷದ ಅಭ್ಯರ್ಥಿ ಅಪ್ಪುಗೌಡ ಪಾಟೀಲ ಮಾತನಾಡಿ, ನಮ್ಮ ತಂದೆ ಬಿ.ಎಸ್‌. ಪಾಟೀಲ ಮನಗೂಳಿ ಈ ಕ್ಷೇತ್ರದಿಂದ 6 ಬಾರಿ ಶಾಸಕರಾಗಿ ಅವರು ಯಾವುದೇ ಹಣ ಮತ್ತು ಆಸ್ತಿಗಳಿಕೆ ಮಾಡಿಲ್ಲ. ಕ್ಷೇತ್ರದ ಜನರನ್ನು ಗಳಿಸಿದ್ದಾರೆ. ನಾನು ಕೂಡಾ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲೇ ನಡೆಯುತ್ತೆನೆ ನನಗೂ ಒಮ್ಮೆ ಅವಕಾಶ ನೀಡಿ ಎಂದು ಹೇಳಿದರು.

ಬಸವರಾಜ ಹೊರಟ್ಟಿ, ಎಂ.ಸಿ. ಮನಗೂಳಿ, ಎನ್‌.ಎಸ್‌. ಪಾಟೀಲ, ರೇಷ್ಮಾ ಪಡೇಕನೂರ, ಶಿವನಗೌಡ ಬಿರಾದಾರ, ರೀಯಾಜ್‌ ಪಾರುಕ್‌, ಎಲ್‌.ಎಲ್‌. ಉಸ್ತಾದ, ಎಸ್‌.ಬಿ. ಪಾಟೀಲ, ಗಣೇಶಾಂ ಬಾಂಡಗೆ, ರಾಜುಗೌಡ ಪಾಟೀಲ ಸದಾಶಿವ ಕುಬಗಡ್ಡಿ, ಸೂಭಾಸ್‌ಗೌಡ ಪಾಟೀಲ, ಎಂ. ಗೋಪಿನಾಥ, ಮಲ್ಲಿಕಾರ್ಜುನ ಅವಟಿ, ಮನಾನ ಶಾಬಾದಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಶಶಿಧರ ಯರನಾಳ ಸ್ವಾಗತಿಸಿದರು. ಬಸವರಾಜ ಅವಟಿ ಕಾರ್ಯಕ್ರಮ ನೀರುಪಿಸಿ. ವಂದಿಸಿದರು.

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.