ಪೆರಂಪಳ್ಳಿಯಲ್ಲಿ “ಸಿರಿ ತುಪ್ಪೆ – 2018′ 


Team Udayavani, Apr 11, 2018, 6:00 AM IST

9.jpg

ಉಡುಪಿ: ಇನ್ನೇನು ಮಳೆಗಾಲ ಪ್ರಾರಂಭಗೊಳ್ಳಲು ಕೆಲವೇ ವಾರಗಳು ಉಳಿದಿವೆ. ಇದೀಗ ಮಳೆಯನ್ನೇ ನಂಬಿ ಕೃಷಿ ಕಾಯಕ ಮಾಡುವ ರೈತಾಪಿ ಜನರು ಸಜ್ಜುಗೊಳ್ಳುತ್ತಿದ್ದಾರೆ. ಇಂಥ ರೈತರಿಗೆ ಸ್ಫೂರ್ತಿ ನೀಡಲೋ ಎಂಬಂತೆ ಪೆರಂಪಳ್ಳಿಯಲ್ಲಿ ಎ. 8ರಂದು ಜರಗಿದ “ಸಿರಿ ತುಪ್ಪೆ – 2018′ ಕಾರ್ಯಕ್ರಮ ಅಪಾರ ಜನಮನ ಸೆಳೆಯಲು ಕಾರಣವಾಯಿತು.

ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್‌ ರಾಮಕೃಷ್ಣ ಶರ್ಮ ಕಾರ್ಯಕ್ರಮ ಉದ್ಘಾಟಿಸಿದರು. ಈ ಮೇಳದಲ್ಲಿ ಭಾಗವಹಿಸಿದ  ಉಡುಪಿ ಕೃಷಿ ನಿರ್ದೇಶಕರಾದ ಮೋಹನ್‌ ರಾಜ್‌, ಮೆಸ್ಕಾಂ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ಎಸ್‌. ಗಣರಾಜ ಭಟ್‌, ಮಂಗಳೂರು ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಮುಖ್ಯ ನಿರ್ವಹಣಾಧಿಕಾರಿ ಉದಯ ಜಿ. ಹೆಗ್ಡೆ, ಉಡುಪಿ ಸಿರಿ ತುಳು ಚಾವಡಿಯ ಗುರಿಕಾರ ಈಶ್ವರ ಚಿಟಾ³ಡಿ, ಉಪಾಧ್ಯಕ್ಷ ಶ್ರೀನಿವಾಸ ಬಲ್ಲಾಳ್‌, ಕಾರ್ಯದರ್ಶಿ ಕುದಿ ಶ್ರೀನಿವಾಸ ಭಟ್‌, ಪಶು ವೈದ್ಯಾಧಿಕಾರಿ ಡಾ. ಸಂದೀಪ್‌ ಶೆಟ್ಟಿ ರೈತರಿಗೆ ಸೂಕ್ತ ಮಾರ್ಗದರ್ಶನವನ್ನು ನೀಡಿದರು.

ಸಮ್ಮಾನ
ಸಮ್ಮೇಳನದಲ್ಲಿ ಹಿರಿಯ ಕೃಷಿಕ ಅಂತಪ್ಪ ಪೂಜಾರಿ ಪೆರಂಪಳ್ಳಿ ಮತ್ತು ಶ್ರೀನಿವಾಸ ಬಲ್ಲಾಳ್‌ ಅವರನ್ನು ಸಮ್ಮಾನಿಸ ಲಾಯಿತು. ಉಡುಪಿ ಜಿಲ್ಲಾ  ಕೃಷಿಕ ಸಂಘ ಹಾಗೂ ವಿಜಯಾ ಗ್ರಾಮೀಣ ಅಭಿವೃದ್ಧಿ   ಪ್ರತಿಷ್ಠಾನ ಮಂಗಳೂರು ಇವರ ಸಹಯೋಗದಲ್ಲಿ ಈ ಕೃಷಿ ಮೇಳವನ್ನು ಪೆರಂಪಳ್ಳಿ  ಕೃಷಿ ಸಂಘದ ಮುಖಂಡರಾದ ಸುಬ್ರಹ್ಮಣ್ಯ ಶ್ರೀಯಾನ್‌, ಶೀಂಬ್ರ ರವೀಂದ್ರ ಪೂಜಾರಿ, ಪೀಟರ್‌ ಡಿ’ಸೋಜಾ, ಜಯ ಸಾಲಿಯಾನ್‌, ಶಂಕರ್‌ ಸುವರ್ಣ, ಜೇಮ್ಸ್‌, ವಿಲಿಯಮ್ಸ್‌, ರಫೇಲ್‌ ಡಿ’ಸೋಜಾ, ಫೆಡ್ರಿಕ್‌ ಡಿ’ಸೋಜಾ ಮೊದಲಾದವರು ಸಂಘಟಿಸಿದ್ದರು. ಪ್ರಶಾಂತ್‌ ಶೆಟ್ಟಿ ಹಾವಂಜೆ ಅವರು ಕಾರ್ಯಕ್ರಮ ನಿರೂಪಿಸಿದರು.

ಪುರಾತನ ಕೃಷಿ ಪರಿಕರ, ಆಧುನಿಕ ಯಂತ್ರಗಳ ಪ್ರದರ್ಶನ
ಪೆರಂಪಳ್ಳಿ ಬೊಬ್ಬರ್ಯ ಕಟ್ಟೆ ವಠಾರದಲ್ಲಿ ಜರಗಿದ ಈ ಕೃಷಿ ಮೇಳದಲ್ಲಿ ಹಸಿರು ಶಾಲುಗಳು ರಾರಾಜಿಸಿದ್ದವು. ರೈತರ ಪುರಾತನ ಕೃಷಿ ಪರಿಕರಗಳ ಸಹಿತ ಆಧುನಿಕ ಉಳುವ ಯಂತ್ರಗಳೂ ಮೇಳದಲ್ಲಿ ಪ್ರದರ್ಶನಗೊಂಡವು. ಸಾವಯವ ಗೊಬ್ಬರ ಬಳಸಿ ಬೆಳೆದ ತರಕಾರಿಗಳು ಭರ್ಜರಿ ಮಾರಾಟಗೊಂಡವು. ಭಾಗವಹಿಸಿದವರೆಲ್ಲರೂ ತುಳುವರ “ಪೆಲಕಾಯಿ ಗಟ್ಟಿ’ಯನ್ನು ಸವಿದರು. ಈಶ್ವರ್‌ ಚಿಟಾ³ಡಿ, ಕುದಿ ವಸಂತ ಶೆಟ್ಟಿ, ಶ್ರೀಕಾಂತ್‌ ಶೆಟ್ಟಿ ಇವರ “ಸಿರಿ ತುಳು ಚಾವಡಿ’ ಹಾಗೂ ಸ್ಥಳೀಯ “ಶೀಂಬ್ರ ಅರುಣಾ ಹೇಮಾ ಪ್ರೇಮಾ’ ತಂಡದಿಂದ “ಅಂಗಣದ ಸಿರಿ’ ಸಾಂಸ್ಕೃತಿಕ ಕಾರ್ಯಕ್ರಮ ಮೆಚ್ಚುಗೆಯನ್ನು ಗಳಿಸಿತು. ಮೂಲ್ಕಿ ದಪ್ಪುಣಿ ಗುತ್ತು ಕಿಶೋರ್‌ ಶೆಟ್ಟಿ ಅವರಿಂದ “ಜುಮಾದಿ ದೈವ’ವನ್ನು ಉಂಟು ಮಾಡುವ ಮದಿಪುಗಾರಿಕೆ ಭರ್ಜರಿ ಕರತಾಡನವನ್ನು  ಗಿಟ್ಟಿಸಿಕೊಂಡಿತು.

ಟಾಪ್ ನ್ಯೂಸ್

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.