ತೋಳವನ್ನು ನಂಬಿದ  ಕುರಿಗಾಹಿ!


Team Udayavani, Apr 12, 2018, 7:30 AM IST

10.jpg

ರಾಚೇನಹಳ್ಳಿ ಎಂಬ ಊರಿನಲ್ಲಿ ಒಬ್ಬ ಕುರುಬನಿದ್ದ. ಅವನ ಬಳಿ ನೂರಾರು ಕುರಿಗಳಿದ್ದವು. ಹತ್ತಿರದ ಗುಡ್ಡದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಕುರಿ ಮೇಯಿಸುವುದೇ ಅವನ ಕೆಲಸ. ಒಮ್ಮೆ ಅವನು ಕುರಿ ಕಾಯುತ್ತಿದ್ದಾಗ ತೋಳವೊಂದು ಅಲ್ಲಿಗೆ ಬಂತು. ಕುರಿಗಳು ಹೆದರಿ ದಿಕ್ಕಾಪಾಲಾಗಿ ಓಡತೊಡಗಿದವು. ಆದರೆ, ತೋಳ, ಕುರಿಗಳ ಮೇಲೆ ದಾಳಿ ಮಾಡದೆ ಸುಮ್ಮನೆ ನಿಂತುಕೊಂಡಿತು. ಹೆದರಿದ ಕುರಿಗಳನ್ನು ಹತ್ತಿರ ಕರೆದು- “ಅಣ್ಣಗಳಿರಾ, ಅಕ್ಕಗಳಿರಾ! ದುಷ್ಟ ತೋಳ ನಮ್ಮನ್ನು ಹಿಡಿದು ತಿನ್ನುತ್ತದೆ ಎಂದು ಹೆದರಿದಿರಾ? ನಾನು ನಿಮ್ಮನ್ನು ತಿನ್ನುವುದಿಲ್ಲ. ಹೊಟ್ಟೆಪಾಡಿಗಾಗಿ ಮೊದಲೆಲ್ಲ ಪ್ರಾಣಿಗಳನ್ನು ತಿಂದಿದ್ದು ನಿಜವೇ. ಆದರೆ, ಈಗ ಪ್ರಾಣಿ ಹಿಂಸೆ ಬಿಟ್ಟು ಸನ್ಯಾಸತ್ವ ಸ್ವೀಕರಿಸಿದ್ದೇನೆ. ಈ ಪ್ರಶಾಂತ ಪರಿಸರದಲ್ಲಿ ತಪಸ್ಸು ಮಾಡಲು ಬಂದಿದ್ದೇನೆ. ನನ್ನನ್ನು ನಂಬಿ ಗೆಳೆತನ ಮಾಡಿ’ ಎಂದಿತು. ಕುರಿಗಳಿಗೆ ಆಶ್ಚರ್ಯವೋ ಆಶ್ಚರ್ಯ! ದೂರದಿಂದಲೇ ಇದನ್ನೆಲ್ಲಾ ಗಮನಿಸಿದ ಕುರುಬನಿಗೂ ಅಚ್ಚರಿಯಾಯ್ತು. ಆದರ ನಯವಾದ ಮಾತಿನಲ್ಲಿ ಕಪಟತನ ಕಾಣಿಸಲಿಲ್ಲ. ಯಜಮಾನನಿಗೆ ತೋಳ ತುಂಬಾ ಹಿಡಿಸಿತು. ತೋಳ ಕುರಿಗಳಿಗೆ ರಕ್ಷಣೆ ನೀಡುವುದನ್ನು ಕಂಡು ತೋಳವನ್ನು ಸಾಕಲು ನಿರ್ಧರಿಸಿದ. ತನ್ನ ಬಳಿಯಿದ್ದ ನಾಯಿಯನ್ನು ಓಡಿಸಿದ. ಪ್ರತಿದಿನ ತೋಳ ಕುರಿಗಳ ಹಿಂಡಿನೊಂದಿಗೆ ಹೋಗಿ ಸುರಕ್ಷಿತವಾಗಿ ಕರೆತರುತ್ತಿತ್ತು.

ಹೀಗಿರುವಾಗ ಒಂದು ದಿನ ಕುರುಬ ಎರಡು ವಾರ ಪಕ್ಕದ ಊರಿಗೆ ಹೋಗಬೇಕಾಯ್ತು. ಕುರಿ ಕಾಯಲು ಬೇರೆ ಜನರೇ ಬೇಡ. ಹೇಗೂ ತೋಳಣ್ಣ ಇದ್ದಾನಲ್ಲ ಎಂದು ಆ ಕೆಲಸವನ್ನು ತೋಳಕ್ಕೆ ವಹಿಸಿ ಕುರುಬ ನಿಶ್ಚಿಂತೆಯಿಂದ ಹೊರಟ. ಕುರಿಗಳಿಗೆ ದಿಗಿಲು ಹತ್ತಿತು. ಯಜಮಾನ ಅತ್ತ ಹೋಗುತ್ತಲೇ ತೋಳ ದಾಳಿ ಮಾಡಿದರೆ ಎಂಬ ಭಯ ಅವುಗಳನ್ನು ಕಾಡುತ್ತಲೇ ಇತ್ತು. ಅವುಗಳ ಭಯ ನಿಜವಾಯಿತು. ಅವನು ಹೋಗುವುದನ್ನೇ ಕಾಯುತ್ತಿದ್ದ ತೋಳ ತನ್ನ ನಿಜ ಬುದ್ಧಿಯನ್ನು ತೋರಿಸಿಯೇ ಬಿಟ್ಟಿತು. ಕುರಿಗಳನ್ನು ಕೂಡಿ ಹಾಕಿದ್ದ ಬೇಲಿಯ ಒಳಗೆ ನುಗ್ಗಿತು. ಕುರಿಗಳು ಕಿರುಚತೊಡಗಿದವು. ಅದೇ ಸಮಯಕ್ಕೆ ಹಿಂದೆ ಅಲ್ಲಿ ಕೆಲಸಕ್ಕಿದ್ದ ಜಾನಿ ನಾಯಿ ಚಂಗನೆ ಅದೆಲ್ಲಿಂದಲೋ ನೆಗೆದು ಬಂತು. “ನನಗೆ ಮೊದಲಿನಿಂದಲೂ ನಿನ್ನ ಮೇಲೆ ಅನುಮಾನ ಇದ್ದೇ ಇತ್ತು’ ಎನ್ನುತ ತೋಳದ ಮೈಮೇಲೆ ಬಿದ್ದಿತು ಜಾನಿ. ನಾಯಿಯ ಏಕಾಏಕಿ ದಾಳಿಯಿಂದ ಕಂಗೆಟ್ಟ ತೋಳ ಕುರಿಗಳನ್ನು ಅಲ್ಲಿಯೇ ಬಿಟ್ಟು ಕಾಲಿಗೆ ಬುದ್ಧಿ ಹೇಳಿತು. ಮಾರನೇ ದಿನ ಕುರಿಗಾಹಿ ವಾಪಸ್ಸಾದ. ಅಕ್ಕಪಕ್ಕದವರಿಂದ ಸುದ್ದಿ ತಿಳಿದು ಜಾನಿಯ ತಲೆಯನ್ನು ಪ್ರೀತಿಯಿಂದ ನೇವರಿಸಿದ.

ಬನ್ನೂರು ಕೆ. ರಾಜು

ಟಾಪ್ ನ್ಯೂಸ್

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.