ಓಂ ಪ್ರಕಾಶ್‌ಗೆ ಮತ್ತೂಂದು ಕಂಚು


Team Udayavani, Apr 12, 2018, 7:00 AM IST

15.jpg

ಗೋಲ್ಡ್‌ಕೋಸ್ಟ್‌: ಭಾರತದ ಯುವ ಶೂಟರ್‌ ಓಂಪ್ರಕಾಶ್‌ ಮಿತರ್ವಾಲ್‌ ಗೋಲ್ಡ್‌ಕೋಸ್ಟ್‌ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ 2ನೇ ಕಂಚಿನ ಪದಕ ಜಯಿಸಿದ್ದಾರೆ. ಬುಧವಾರ ನಡೆದ 50 ಮೀ. ಪಿಸ್ತೂಲ್‌ ಸ್ಪರ್ಧೆಯಲ್ಲಿ ಅವರು ಈ ಸಾಧನೆಗೈದರು. ಆದರೆ ಇದೇ ವಿಭಾಗದಲ್ಲಿ ಸ್ಪರ್ಧಿಸಿದ್ದ ಜಿತು ರಾಯ್‌ 8ನೇ ಸ್ಥಾನಕ್ಕೆ ಕುಸಿದು ತೀವ್ರ ನಿರಾಸೆ ಮೂಡಿಸಿದರು.

“ಬೆಲ್ಮಾಂಟ್‌ ಶೂಟಿಂಗ್‌ ಸೆಂಟರ್‌’ನಲ್ಲಿ ನಡೆದ 50 ಮೀ. ಪಿಸ್ತೂಲ್‌ ಸ್ಪರ್ಧೆಯ ಫೈನಲ್‌ನಲ್ಲಿ ಓಂಪ್ರಕಾಶ್‌ ಒಟ್ಟು 201.1 ಅಂಕದೊಂದಿಗೆ ಕಂಚಿನ ಪದಕ ಜಯಿಸಿದರು. 2 ದಿನಗಳ ಹಿಂದೆ ನಡೆದ 10 ಮೀ. ಏರ್‌ ಪಿಸ್ತೂಲ್‌ ಸ್ಪರ್ಧೆಯಲ್ಲೂ ಅವರು ಕಂಚಿನ ಪದಕ ಪಡೆದಿದ್ದರು.

50 ಮೀ. ಪಿಸ್ತೂಲ್‌ ಸ್ಪರ್ಧೆಯ ಸ್ವರ್ಣ ಪದಕ ಆಸ್ಟ್ರೇಲಿಯದ ಡೇನಿಯಲ್‌ ರೆಪಶೋಲಿ ಪಾಲಾಯಿತು. ಅವರು 227.2 ಅಂಕಗಳೊಂದಿಗೆ ಗೋಲ್ಡ್‌ ಕೋಸ್ಟ್‌ ಗೇಮ್ಸ್‌ ದಾಖಲೆ ಸ್ಥಾಪಿಸಿದರು. ಬೆಳ್ಳಿ ಪದಕ ಬಾಂಗ್ಲಾದೇಶದ ಶಕಿಲ್‌ ಅಹ್ಮದ್‌ಗೆ ಒಲಿಯಿತು. ಶಕಿಲ್‌ ಗಳಿಕೆ 220.5 ಅಂಕ.

10 ಮೀ. ಏರ್‌ ಪಿಸ್ತೂಲ್‌ ಸ್ಪರ್ಧೆಯಲ್ಲಿ ಬಂಗಾರಕ್ಕೆ ಕೊರಳು ಚಾಚಿದ್ದ ಜಿತು ರಾಯ್‌ 50 ಮೀ. ವಿಭಾಗದಲ್ಲಿ ಕೇವಲ 105.0 ಅಂಕ ಸಂಪಾದಿಸಿ 8ನೇ ಸ್ಥಾನಕ್ಕೆ ಕುಸಿದದ್ದು ಅಚ್ಚರಿ ಹಾಗೂ ಆಘಾತಕ್ಕೆ ಕಾರಣವಾಯಿತು. 

ಫೈನಲ್‌ ಸ್ಪರ್ಧೆಯ ಮೊದಲ ಸುತ್ತಿನ ಬಳಿಕ 6ನೇ ಸ್ಥಾನದಲ್ಲಿದ್ದ ಓಂಪ್ರಕಾಶ್‌ ಮುಂದಿನೆರಡು ಸುತ್ತುಗಳ ವೇಳೆ 93.7 ಅಂಕಗಳೊಂದಿಗೆ ಅಗ್ರಸ್ಥಾನಕ್ಕೆ ನೆಗೆಯುವಲ್ಲಿ ಯಶಸ್ವಿಯಾಗಿದ್ದರು. ಮುಂದಿನೆರಡು ಶಾಟ್ಸ್‌ ವೇಳೆಯೂ ಭಾರತೀಯ ಮುನ್ನಡೆ ಮುಂದು ವರಿಯಿತು. ಬಳಿಕ ಆಸೀಸ್‌ ಶೂಟರ್‌ ಈ ಸ್ಥಾನಕ್ಕೆ ಲಗ್ಗೆ ಇರಿಸಿದರು. 

ಕ್ರಮೇಣ ಓಂ ಪ್ರಕಾಶ್‌ ಬೆಳ್ಳಿ ಪದಕದ ರೇಸ್‌ನಲ್ಲಿ ಕಾಣಿಸಿಕೊಳ್ಳಬೇಕಾಯಿತು. 186. 3 ಅಂಕ ಸಂಪಾದಿಸಿದ ಓಂ ಪ್ರಕಾಶ್‌, ಬಾಂಗ್ಲಾ ಎದುರಾಳಿಗಿಂತ ಮೂರಂಕಗಳ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಮುಂದಿನ ಸುತ್ತಿನಲ್ಲಿ ಇದೇ ನಿಖರತೆಯನ್ನು ಕಾಯ್ದುಕೊಳ್ಳಲು ಸಾಧ್ಯವಾಗಲಿಲ್ಲ. 7.2 ಹಾಗೂ 7.6 ಅಂಕಗಳೊಂದಿಗೆ ಕುಸಿದು ಕಂಚಿಗೆ ಸಮಾಧಾನಪಡಬೇಕಾಯಿತು.

ಟಾಪ್ ನ್ಯೂಸ್

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Kodagu ಜಿಲ್ಲೆಯಲ್ಲಿ ಮಳೆ; ಮರೆಯಾದ ಬರದ ಛಾಯೆ; ಪ್ರವಾಸಿಗರ ದಾಂಗುಡಿ

Uppinangady: ಹೆದ್ದಾರಿ ತಡೆಗೋಡೆ ಕುಸಿತ

Uppinangady: ಹೆದ್ದಾರಿ ತಡೆಗೋಡೆ ಕುಸಿತ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

T20 World Cup: McGurk is Australia’s reserve player

T20 World Cup: ಮೆಕ್‌ಗರ್ಕ್‌ ಆಸ್ಟ್ರೇಲಿಯದ ಮೀಸಲು ಆಟಗಾರ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

pvs

Malaysia Masters ಬ್ಯಾಡ್ಮಿಂಟನ್‌ ; ಬ್ರೇಕ್‌ ಮುಗಿಸಿ ಆಡಲಿಳಿದ ಪಿ.ವಿ.ಸಿಂಧು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Modi insults Tamils ​​for votes: CM Stalin sparks

Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್‌ ಕಿಡಿ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

This time 2004 result will repeat: Jairam Ramesh

Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.