ಸ್ಥಳೀಯಾಡಳಿತ ಸದಸ್ಯರ ಆಸ್ತಿ ವಿವರ ಆನ್‌ಲೈನ್‌ನಲ್ಲಿ


Team Udayavani, Apr 12, 2018, 9:15 AM IST

Karnataka-State-Election-Commission-600.jpg

ಮಂಗಳೂರು: ಒಂದೆಡೆ, ರಾಜ್ಯ ವಿಧಾನಸಭಾ ಚುನಾವಣೆಗೆ ನಾನಾ ಪಕ್ಷಗಳಿಂದ ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಯುತ್ತಿರಬೇಕಾದರೆ, ಇನ್ನೊಂದೆಡೆ ಜಿ.ಪಂ., ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಸದಸ್ಯರು ತಮ್ಮ ಹಾಗೂ ಕುಟುಂಬದ ಆಸ್ತಿ, ಹೊಣೆಗಾರಿಕೆಯನ್ನು ಆನ್‌ಲೈನ್‌ ಮೂಲಕ ಸಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗ ಕಡ್ಡಾಯಗೊಳಿಸಿದೆ. ಇದರಿಂದ ಇನ್ನುಮುಂದೆ, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಆಸ್ತಿ ವಿವರಗಳು ಕೂಡ ಸಾರ್ವಜನಿಕರಿಗೆ ಲಭ್ಯವಾಗುವ ಮೂಲಕ ಹೆಚ್ಚು ಪಾರದರ್ಶಕವೆನಿಸಿಕೊಳ್ಳಲಿದೆ. ಇಲ್ಲಿಯವರೆಗೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ತಮ್ಮ ಆಸ್ತಿ ಹಾಗೂ ಹೊಣೆಗಾರಿಕೆ ವಿವರದ ಪ್ರತಿಯನ್ನು ಕೈಬರಹದ ಮೂಲಕ ಆಯೋಗಕ್ಕೆ ಸಲ್ಲಿಸಬೇಕಿತ್ತು. ಆದರೆ, ಸ್ಥಳೀಯ ಜನಪ್ರತಿನಿಧಿಗಳ ಆಸ್ತಿ ಹಾಗೂ ಹಾಗೂ ಹೊಣೆಗಾರಿಕೆ ವಿವರ ಸಾರ್ವಜನಿಕರಿಗೆ ಮುಕ್ತವಾಗಿ ದೊರಕಬೇಕು ಹಾಗೂ ಪಾರದರ್ಶಕವಾಗಿರಬೇಕು ಎಂಬ ಉದ್ದೇಶದಿಂದ ಕೈಬರಹದ ಮೂಲಕ ಸಲ್ಲಿಸುವುದರ ಬದಲಿಗೆ ಆನ್‌ಲೈನ್‌ ಮೂಲಕವೇ ನೀಡಬೇಕೆಂದು ಸಾರ್ವಜನಿಕರಿಗೂ ನೋಡಲು ಸಿಗಲಿದೆ.

ಸ್ಥಳೀಯ ಸಂಸ್ಥೆಗಳ ಚುನಾಯಿತ ಸದಸ್ಯರು ನಿಯಮಾನುಸಾರ ಪ್ರತಿ ವರ್ಷ ಸಲ್ಲಿಸಬೇಕಾಗಿರುವ ಅವರ ಹಾಗೂ ಅವರ ಕುಟುಂಬದ ಆಸ್ತಿ ಘೋಷಣೆ ನಮೂನೆಯನ್ನು ಆನ್‌ಲೈನ್‌ ಮೂಲಕ ಸಲ್ಲಿಸಲು ಎನ್‌ಐಸಿ ಮುಖೇನ ತಂತ್ರಾಂಶವನ್ನು ಸಿದ್ಧಪಡಿಸಲಾಗಿದೆ. ಈಗಾಗಲೇ ಬಹುತೇಕ ಜಿ.ಪಂ, ತಾ.ಪಂ ಹಾಗೂ ಗ್ರಾಮ ಪಂಚಾಯತ್‌ ಚುನಾಯಿತ ಜನಪ್ರತಿನಿಧಿಗಳು ತಮ್ಮ ಆಸ್ತಿ, ಹೊಣೆಗಾರಿಕೆಯನ್ನು ಆನ್‌ಲೈನ್‌ ಮೂಲಕ ನಮೂದು ಮಾಡುತ್ತಿದ್ದಾರೆ. ಪ್ರಾಥಮಿಕವಾಗಿ ಸದಸ್ಯರ ಹೆಸರುಗಳನ್ನು ಸಂಬಂಧಪಟ್ಟ ಕ್ಷೇತ್ರಗಳಿಗೆ ಮ್ಯಾಪ್‌ ಮಾಡಬೇಕಿದೆ. ಮ್ಯಾಪಿಂಗ್‌ ತಂತ್ರಾಂಶ ಬಳಸಲು ಆಯೋಗದ ವೆಬ್‌ಸೈಟ್‌ www.karsec.gov.inಗೆ ಲಾಗಿನ್‌ ಆಗಬೇಕಿದೆ. ಅದರಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಅಥವಾ ಗ್ರಾಮ ಪಂಚಾಯತ್‌ ಆಯ್ಕೆ ಮಾಡಿ ಸಂಬಂಧಪಟ್ಟ ಕ್ಷೇತ್ರವನ್ನು ಆರಿಸಬೇಕು. ಆಯಾಯಾ ಸ್ಥಳೀಯ ಸಂಸ್ಥೆಗಳಲ್ಲಿ ಆನ್‌ಲೈನ್‌ ನೋಂದಣಿ ಮಾಡಿಸಬೇಕಿದೆ. ಗ್ರಾ.ಪಂ. ಸದಸ್ಯರು ಆನ್‌ಲೈನ್‌ ಮೂಲಕ ನೋಂದಣಿ ಮಾಡುವಾಗ ಪಿಡಿಓ ಅವರ ಮೊಬೈಲ್‌ ಸಂಖ್ಯೆಗೆ ಆರು ಸಂಖ್ಯೆಯ ಓಟಿಪಿ ಬರುತ್ತದೆ. ಈ ಓಟಿಪಿಯನ್ನು ತಂತ್ರಾಂಶದಲ್ಲಿ ದಾಖಲಿಸಬೇಕು. ಅದರ ಮುಖೇನ ಆಸ್ತಿ ಕುರಿತ ಫಾರಂನಲ್ಲಿ ವಿವರಗಳನ್ನು ಭರ್ತಿ ಮಾಡಬೇಕು. ಸದಸ್ಯರ ಕುಟುಂಬದವರ ವಿವರಗಳನ್ನು ಕೂಡ ನಮೂದಿಸಬೇಕಿದೆ. ಒಂದು ವೇಳೆ ಸದಸ್ಯರ ಹೆಸರು ಆನ್‌ಲೈನ್‌ ಮೂಲಕ ನೋಂದಣಿ ಮಾಡುವ ವೇಳೆ ಅವರ ಕ್ಷೇತ್ರಗಳ ಎದುರು ಬಾರದೇ ಇದ್ದರೆ ಅಂತಹ ಸದಸ್ಯರುಗಳನ್ನು ತಮಗೆ ಮುಂದೆ ನೀಡಲಾಗುವ ‘ಸೂಪರ್‌ ಯೂಸರ್‌ ಅಡ್ಮಿನ್‌’ ಲಾಗಿನ್‌ ಮೂಲಕ ಹೊಸ ಸದಸ್ಯರನ್ನು ಸೇರಿಸಲು ಅವಕಾಶವಿದೆ.

ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯತ್‌ ಸದಸ್ಯರು ಅವರ ವಾರ್ಷಿಕ ಆಸ್ತಿ ಹಾಗೂ ಹೊಣೆಗಾರಿಕೆ ವಿವರಗಳನ್ನು ಸಲ್ಲಿಸದಿದ್ದಲ್ಲಿ ಅಥವಾ ತಪ್ಪು ವಿವರಗಳನ್ನು ಸಲ್ಲಿಸಿದ್ದಲ್ಲಿ ಅವರನ್ನು ಅನರ್ಹಗೊಳಿಸುವ ಅಧಿಕಾರ ರಾಜ್ಯ ಚು.ಆಯೋಗಕ್ಕೆ ನೀಡಲಾಗಿದೆ. ಆನ್‌ಲೈನ್‌ ಮೂಲಕ ಆಸ್ತಿ ಹಾಗೂ ಹೊಣೆಗಾರಿಕೆ ವಿವರಗಳನ್ನು ಘೋಷಣೆ ಮಾಡಿದ ನಂತರ ಪುನಃ ಅದರ ಪ್ರತಿಯನ್ನು ಆಯೋಗಕ್ಕೆ ಸಲ್ಲಿಸುವ ಆವಶ್ಯಕತೆ ಇಲ್ಲ ಎಂದು ವೆಬ್‌ಸೈಟ್‌ನಲ್ಲಿ ತಿಳಿಸಿದೆ. 

ಹಣ, ಆಸ್ತಿ, ಒಡವೆ, ಮಾಹಿತಿ
ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಉಲ್ಲೇಖೀಸಿದಂತೆ, ನಮೂನೆ 1ರ ಕ್ರಮ ಸಂಖ್ಯೆ 1ರಲ್ಲಿ ಸದಸ್ಯರ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಬೇಕು. ಕ್ರ.ಸಂಖ್ಯೆ 2ರಲ್ಲಿ ಕುಟುಂಬದ ಸದಸ್ಯರ ಹೆಸರು ಸಂಬಂಧದ ದಾಖಲು ಮಾಡಬೇಕು. 3ರಲ್ಲಿ ಸದಸ್ಯರ ಒಟ್ಟು ವಾರ್ಷಿಕ ಆದಾಯ ನಮೂದಿಸಬೇಕು. ಬ್ಯಾಂಕ್‌, ನಿಗಮ, ಮಂಡಳಿಗಳಲ್ಲಿ ತೊಡಗಿಸಿರುವ ಹಣದ ವಿವರ, ಆಭರಣಗಳು, ಜಾನುವಾರುಗಳ ವಿವರ, 5000ರೂ.ಗಳಿಗಿಂತ ಅಧಿಕ ಬೆಲೆ ಬಾಳುವ ಟಿ.ವಿ. ರೆಫ್ರಿಜರೇಟರ್‌ ಸೇರಿದಂತೆ ಜನಪ್ರತಿನಿಧಿಯ ಮನೆಯಲ್ಲಿ ಬಳಕೆಯಲ್ಲಿರುವ ವಸ್ತುಗಳು, ವಾಹನಗಳ ಬಗ್ಗೆ ದಾಖಲಾತಿ ಮಾಡಬೇಕಿದೆ. ಜತೆಗೆ ಕೃಷಿ ಜಮೀನಿನ ವಿವರ, ಕಟ್ಟಡ ನಿರ್ಮಿಸಿದ ಕೃಷಿಯೇತರ ಜಮೀನಿನ ವಿವರ, ಕಟ್ಟಡಗಳ ವಿವರ ಹಾಗೂ ಇತರ ಸ್ಥಿರಾಸ್ತಿಗಳ ವಿವರವನ್ನೂ ನಮೂದಿಸಬೇಕಿದೆ.

— ದಿನೇಶ್‌ ಇರಾ

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.