ಶಹಜಹಾನ್‌ನ ಸಹಿ ತೋರಿಸಿ


Team Udayavani, Apr 12, 2018, 3:22 PM IST

blore-8.jpg

ನವದೆಹಲಿ: “ವಿಶ್ವ ಪ್ರಸಿದ್ಧ ತಾಜ್‌ ಮಹಲ್‌ ವಕ್ಫ್ ಆಸ್ತಿಯೇ? ಭಾರತದಲ್ಲಿ ಇದನ್ನು ಯಾರಾದರೂ ನಂಬುತ್ತಾರೆಯೇ? ವಕ್ಫ್
ನಾಮಾಗೆ ಶಹಜಹಾನ್‌ ಸಹಿ ಮಾಡಿದ್ದು ಎಂದು? ವಕ್ಫ್ ಮಂಡಳಿಗೆ ಹಸ್ತಾಂತರಿಸಿದ್ದು ಯಾವಾಗ? ಈ ಬಗ್ಗೆ ದಾಖಲೆಗಳಿದ್ದರೆ, ವಾರದೊಳಗೆ ಅದನ್ನು ತಂದು ತೋರಿಸಿ’! ಸಾವಿರಾರು ವರ್ಷಗಳ ಇತಿಹಾಸವಿರುವ “ಪ್ರೇಮ ಸೌಧ’ದ ಕುರಿತು ಇಂಥ ಪ್ರಶ್ನೆಗಳನ್ನೆಲ್ಲ ಹಾಕಿದ್ದು ಮತ್ಯಾರೂ ಅಲ್ಲ, ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ದೀಪಕ್‌ ಮಿಶ್ರಾ ನೇತೃತ್ವದ ಪೀಠ. ತಾಜ್‌ ಮಹಲ್‌ ಒಡೆತನಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸುನ್ನಿ ವಕ್ಫ್ ಮಂಡಳಿ ಸಲ್ಲಿಸಿದ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಅವರು ಇಂಥ ಖಡಕ್‌ ಪ್ರಶ್ನೆಗಳನ್ನು ಕೇಳಿ ಅಚ್ಚರಿ ಮೂಡಿಸಿದ್ದಾರೆ.

1631ರಲ್ಲಿ ಪ್ರೇಯಸಿ ಮಮ್ತಾಜ್‌ಳ ಪ್ರೀತಿಯ ಸಂಕೇತವಾಗಿ ಕಟ್ಟಿಸಲಾದ ವಿಶ್ವ ಪ್ರಸಿದ್ಧ ತಾಜ್‌ಮಹಲ್‌ ಅನ್ನು ಮೊಘಲ್‌
ಚಕ್ರವರ್ತಿ ಶಹಜಹಾನ್‌ ಸ್ವತಃ ಸಹಿ ಮಾಡಿ ತಮಗೆ ಬರೆದುಕೊಟ್ಟಿದ್ದಾರೆ ಎಂದು ಉತ್ತರಪ್ರದೇಶ ವಕ್ಫ್ ಮಂಡಳಿ ಕೋರ್ಟ್‌ ಮೆಟ್ಟಿಲೇರಿತ್ತು. ಇದನ್ನು ಪ್ರಶ್ನಿಸಿ ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) 2010ರಲ್ಲಿ ಪ್ರತಿವಾದ ಮಂಡಿಸಿ ಅರ್ಜಿ ಸಲ್ಲಿಸಿತ್ತು. ವಕ್ಫ್ ಮಂಡಳಿ ವಾದದಲ್ಲಿ ಯಾವುದೇ ಹುರುಳಿಲ್ಲ ಎಂದು ಎಎಸ್‌ಐ ಹೇಳಿತ್ತು. ಮಂಗಳವಾರ ಈ ಸಂಬಂಧ ಮು.ನ್ಯಾ. ದೀಪಕ್‌ ಮಿಶ್ರಾ, ನ್ಯಾ. ಎ.ಎಂ. ಖನ್ವಿಲ್ಕರ್‌ ಮತ್ತು ನ್ಯಾ. ಡಿ.ವೈ. ಚಂದ್ರಚೂಡ್‌ ಪೀಠ ಪ್ರಕರಣದ ವಿಚಾರಣೆ ನಡೆಸಿದೆ. ವಕ್ಫ್ ಮಂಡಳಿ ವಾದವನ್ನು ಆಧರಿಸಿ ಸೂಕ್ತ ದಾಖಲೆಗಳನ್ನು ಒಂದು ವಾರದೊಳಗೆ ಕೋರ್ಟ್‌ಗೆ ಹಾಜರು ಪಡಿಸುವಂತೆ ತಾಕೀತು ಮಾಡಿದೆ. ಶಹಜಹಾನ್‌ ಸಹಿ ಇರುವ ಎಲ್ಲಾ ದಾಖಲೆಗಳನ್ನು ತೋರಿಸಿ ಎಂದು ಸ್ವತಃ ಮುಖ್ಯ ನ್ಯಾಯಮೂರ್ತಿಗಳೇ ಆದೇಶಿಸಿದ್ದಾರೆ. ಎಎಸ್‌ಐ ಪರ ವಕೀಲ ಎಡಿಎನ್‌ ರಾವ್‌ ವಾದ ಮಂಡಿಸುತ್ತಿದ್ದು, ಆ ಸಮಯದಲ್ಲಿ ವಕ್ಫ್ನಾಮಾ ಅಸ್ತಿತ್ವದಲ್ಲೇ ಇರಲಿಲ್ಲ ಎಂದಿದ್ದಾರೆ.

ತಾಜ್‌ಮಹಲ್‌ ಆಸ್ತಿ ವಿವಾದ; ವಕ್ಫ್ ಮಂಡಳಿಗೆ ಸಿಜೆಐ ತಾಕೀತು.

„ ಸ್ವತಃ ಶಹಜಹಾನ್‌ ಹಸ್ತಾಂತರಿಸಿದ್ದರು ಎಂದಿರುವ ವಕ್ಫ್ ಮಂಡಳಿ.

ಟಾಪ್ ನ್ಯೂಸ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

Virat kohli spoke about his post-retirement life

Virat Kohli; ನಿವೃತ್ತಿಯ ಬಗ್ಗೆ ಮಾತನಾಡಿದ ವಿರಾಟ್..; ಫ್ಯಾನ್ಸ್ ಗೆ ಆತಂಕತಂದ ಕೊಹ್ಲಿ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

7-ಬನಗ

Bengaluru: ಕಾಲೇಜಿನ 6ನೇ ಮಹಡಿಯಿಂದ ಜಿಗಿದು ಬಿಇ ವಿದ್ಯಾರ್ಥಿ ಆತ್ಮಹತ್ಯೆ

6-bng-crime

Drugs ಮಾರಾಟ: ಮೂವರು ವಿದೇಶಿ ಪ್ರಜೆಗಳು ಸೇರಿ 8 ಮಂದಿ ಬಂಧನ ‌

5-bng-crime-1

Bengaluru Crime: ಮನೆ ಮಾಲಕಿಯ ಕೊಂದು ಚಿನ್ನ ದೋಚಿದಳು!

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

E-bus: ಚಾಲಕರ ಧರಣಿ: ರಸ್ತೆಗಿಳಿಯದ 113 ಇ-ಬಸ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

Wadgera; A crocodile appeared in the farm

Wadgera; ಜಮೀನಿನಲ್ಲಿ ಕಾಣಿಸಿಕೊಂಡು ರೈತರಿಗೆ ಆತಂಕ ತಂದ ಮೊಸಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.