ಬಾವರಿಯಾ ಗ್ಯಾಂಗ್‌ನ ಗೂಂಡಾಗೆ ಗುಂಡೇಟು


Team Udayavani, Apr 12, 2018, 3:36 PM IST

blore-10.jpg

ಬೆಂಗಳೂರು: ಕಪ್ಪು ಬಣ್ಣದ ಪಲ್ಸರ್‌ ಬೈಕ್‌ಗಳಲ್ಲಿ ಬಂದು ಮಹಿಳೆಯರ ಸರ ಕಳವು ಮಾಡಿ ಕ್ಷಣಾರ್ಧದಲ್ಲಿ ಪರಾರಿಯಾಗುತ್ತಿದ್ದ ಕುಖ್ಯಾತ ಬಾವರಿಯಾ ತಂಡದ ಸದಸ್ಯನೊಬ್ಬನನ್ನು ಉತ್ತರ ವಿಭಾಗದ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ತನ್ನನ್ನು ಹಿಡಿಯಲು ಬಂದ ಪೊಲೀಸ್‌ ಕಾನ್‌ಸ್ಟೆಬಲ್‌ಗ‌ಳಿಬ್ಬರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಆರೋಪಿ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.

ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ರಾಮ್‌ಸಿಂಗ್‌(35) ಬಂಧಿತ. ಪೊಲೀಸರ ಗುಂಡೇಟಿನಿಂದ ರಾಮ್‌ಸಿಂಗ್‌ನ ಬಲಗಾಲು ಮತ್ತು ಬಲಕೈಗೆ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮತ್ತೂಬ್ಬ ಆರೋಪಿ ರಾಜೇಂದರ್‌ ತಲೆಮರೆಸಿಕೊಂಡಿದ್ದು, ಡುಕಾಟ ನಡೆಯುತ್ತಿದೆ. ಆರೋಪಿಯಿಂದ ಚಾಕು ಇರಿತಕ್ಕೊಳಗಾದ ಕಾನ್‌ಸ್ಟೆಬಲ್‌ಗ‌ಳಾದ ಇಮಾಮ್‌ ಸಾಬ್‌ ಕರಿಕಟ್ಟಿ ಹಾಗೂ
ಬೀರಾದಾರ್‌ಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎಂದು ಉತ್ತರ ವಿಭಾಗದ ಡಿಸಿಪಿ ಚೇತನ್‌ ಸಿಂಗ್‌ ರಾಥೋಡ್‌ ತಿಳಿಸಿದ್ದಾರೆ.

ನಗರದ ಪಶ್ಚಿಮ, ಈಶಾನ್ಯ, ಉತ್ತರ ವಿಭಾಗದಲ್ಲಿ ಕಳೆದ ನಾಲ್ಕೈದು ತಿಂಗಳಿನಿಂದ ಹೆಚ್ಚುತ್ತಿದ್ದ ಸರಗಳ್ಳತನ ಪೊಲೀಸರಿಗೆ ತಲೆನೋವು ತಂದಿದ್ದು, ಈ ಹಿನ್ನೆಲೆಯಲ್ಲಿ ಪ್ರತ್ಯೇಕ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸುವಂತೆ ಪೊಲೀಸ್‌ ಆಯುಕ್ತ ಟಿ. ಸುನಿಲ್‌ ಕುಮಾರ್‌ ಎಲ್ಲ ಡಿಸಿಪಿಗಳಿಗೆ ಸೂಚಿಸಿದ್ದರು.

ಅದರಂತೆ ಎಲ್ಲೆಡೆ ವಿಶೇಷ ತಂಡಗಳು ಸರಗಳ್ಳರ ಪತ್ತೆಗೆ ಶೋಧ ನಡೆಸುತ್ತಿದೆ. ಜತೆಗೆ ಬಾವರಿಯಾ, ಇರಾನಿ ಹಾಗೂ ಓಜಿಕುಪ್ಪಂ ತಂಡದ ಸದಸ್ಯರ ಬಗ್ಗೆಯೂ ಪೊಲೀಸರು ಗಮನಹರಿಸಿದ್ದರು. ಜೈಲಿನಲ್ಲಿರುವ ಗ್ಯಾಂಗ್‌ ಸದಸ್ಯರನ್ನು ವಿಚಾರಣೆಗೊಳಪಡಿಸಿದ್ದರು. 

ಈ ಮಧ್ಯೆ ಬಾವರಿಯಾ ಗ್ಯಾಂಗ್‌ ನ ನಾಲ್ಕೈದು ಮಂದಿ ಸದಸ್ಯರು ಮಂಗಳವಾರ ಯಲಹಂಕ, ಬಾಗಲೂರು ಮತ್ತು ಚಿಕ್ಕಜಾಲ ಹಾಗೂ ನಗರದ ಮತ್ತೂಂದು ಠಾಣೆ ವ್ಯಾಪ್ತಿಯ ಒಟ್ಟು ನಾಲ್ಕು ಕಡೆಗಳಲ್ಲಿ ಸರಗಳ್ಳನ ಮಾಡಿ ಸೋಲದೇವನಹಳ್ಳಿ ಕಡೆ ಪರಾರಿಯಾಗಿದ್ದರು. ಈ ಮಾಹಿತಿ ಪಡೆದ ಸಹಾಯವಾಣಿ “ನಮ್ಮ-100′ ಸಿಬ್ಬಂದಿ ಪಂಜಾಬ್‌ ನೊಂದಣಿಯ ಪಲ್ಸರ್‌ ಬೈಕ್‌ನಲ್ಲಿ ಸರಗಳ್ಳರು ಪರಾರಿಯಾಗಿದ್ದಾರೆ ಎಂಬ ಮಾಹಿತಿಯನ್ನು ಉತ್ತರ ವಿಭಾಗದ ಪೊಲೀಸರಿಗೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಮಂಗಳವಾರ ಮಧ್ಯಾಹ್ನ 12.30ರ ಸುಮಾರಿಗೆ ಲಕ್ಷ್ಮೀಪುರ ಕ್ರಾಸ್‌ ಬಳಿ ಸೋಲದೇವನಹಳ್ಳಿ ಠಾಣೆ ಕಾನ್‌ಸ್ಟೇಬಲ್‌ಗಳಾದ ಇಮಾಮ್‌ ಕರಿಕಟ್ಟಿ ಮತ್ತು ಬೀರಾದರ್‌ ವಾಹನಗಳ ತಪಾಸಣೆಯಲ್ಲಿ ತೊಡಗಿದ್ದರು. ಈ ವೇಳೆ ಪಂಜಾಬ್‌ ನೊಂದಣಿಯ ಪಲ್ಸರ್‌ ಬೈಕ್‌ ಕಂಡು ಅನುಮಾನಗೊಂಡ ಕಾನ್‌ಸ್ಟೇಬಲ್‌ಗ‌ಳು ಬೈಕ್‌ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ, ಏಕಾಏಕಿ ಪೊಲೀಸರ ಮೇಲೆ ಬೈಕ್‌ ಹತ್ತಿಸಲು ಪ್ರಯತ್ನಿಸಿದ್ದಲ್ಲದೆ, ಸ್ಥಳದಲ್ಲೇ ಬೈಕ್‌ ಬಿಟ್ಟು ಇಬ್ಬರು ಆರೋಪಿಗಳು ಪ್ರತ್ಯೇಕ ದಿಕ್ಕುಗಳಲ್ಲಿ ಪರಾರಿಯಾದರು. ಈ ವೇಳೆ ಅವರನ್ನು ಹಿಂಬಾಲಿಸಿದ ಕಾನ್‌ಸ್ಟೇಬಲ್‌ಗ‌ಳ ಮೇಲೆ ಆರೋಪಿಗಳು ಚಾಕುವಿನಿಂದ ಕುತ್ತಿಗೆಗೆ ಇರಿಯಲು ಯತ್ನಿಸಿ ನೀಲಗಿರಿ ತೋಪಿನ ಕಡೆಗೆ ಓಡಿಹೋಗಿದ್ದರು.

ಮಾಹಿತಿ ಪಡೆದ ಡಿಸಿಪಿ ಚೇತನ್‌ ಸಿಂಗ್‌ ರಾಥೋಡ್‌ ಅವರು ಯಶವಂತಪುರ ಎಸಿಪಿ ರವಿಪ್ರಸಾದ್‌, ಮಹಾಲಕ್ಷ್ಮೀ ಲೇಔಟ್‌ ಪಿಐ ಲೋಹಿತ್‌, ನಂದಿನಿ ಲೇಔಟ್‌ ಪಿಐ ಕಾಂತರಾಜು, ಆರ್‌ಎಂಸಿ ಯಾರ್ಡ್‌ ಪಿಐ ರಾಮಪ್ಪ, ಪಿಎಸ್‌ಐ ಸೋಮಶೇಖರ್‌ ನೇತೃತ್ವದ ಒಟ್ಟು 50-60 ಮಂದಿ ಸಿಬ್ಬಂದಿಯ ತಂಡ ರಚಿಸಿದ್ದರು.

ಕಾಲಿಗೆ ಗುಂಡೇಟು: ವಿಶೇಷ ತಂಡದ ಸಿಬ್ಬಂದಿ ಕಾಡು ಪ್ರದೇಶಗಳಲ್ಲಿ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿತು. ತಡರಾತ್ರಿ 11.30ರ ಸುಮಾರಿಗೆ ಆರೋಪಿಗಳು ಸೋಮಶೆಟ್ಟಿಹಳ್ಳಿ ಹತ್ತಿರದ ಕೆರೆಗುಡ್ಡದಹಳ್ಳಿಯ ಕಾಡು ಪ್ರದೇಶಗಳಲ್ಲಿ ಅನುಮಾನಸ್ಪದವಾಗಿ ಸಂಚರಿಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಕೂಡಲೇ ಇಡೀ ತಂಡ ಕಾಡು ಪ್ರದೇಶವನ್ನು ಸುತ್ತುವರಿದು ಆರೋಪಿಗಳ ಬೆನ್ನು ಬಿದ್ದಿದೆ. ಈ ವೇಳೆ ರಾಮ್‌ಸಿಂಗ್‌ನನ್ನು ಗುರುತಿಸಿದ ಪೇದೆ ಇಮಾಮ್‌ ಸಾಬ್‌ ಕರಿಕಟ್ಟಿ ಆರೋಪಿಯನ್ನು ಬಂಧಿಸಲು ಹೋದಾಗ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಕೂಡಲೇ ಪಿಎಸ್‌ಐ ಸೋಮಶೇಖರ್‌ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದ್ದಾರೆ. ಆದರೂ ಮತ್ತೆ ಹಲ್ಲೆಗೆ ಮುಂದಾದಾಗ ರಾಮ್‌ಸಿಂಗ್‌ ಮೇಲೆ ಗುಂಡು ಹಾರಿಸಿದ್ದಾರೆ. ಇದರಿಂದ ಆತನ ಬಲಗಾಲು ಮತ್ತು ಬಲಕೈಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೊಳಗಾದ ಕಾನ್‌ಸ್ಟೇಬಲ್‌ಗ‌ಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.