ಗೋರಿಯಿಂದ ಹಾಡು ಬಂತು; ಹುಟ್ಟು ಸಾವಿನ ನಡುವಿನ ಸಿನಿಮಾ 


Team Udayavani, Apr 12, 2018, 3:52 PM IST

Yar-Yaro-Gori-Mele_(108).jpg

ಕನ್ನಡದಲ್ಲಿ ಈಗಾಗಲೇ ಸಾಕಷ್ಟು ತರಹೇವಾರಿ ಶೀರ್ಷಿಕೆವುಳ್ಳ ಚಿತ್ರಗಳು ಮೂಡಿಬಂದಿವೆ. ಆ ಸಾಲಿಗೆ “ಯಾರ್‌ ಯಾರೋ ಗೋರಿ ಮೇಲೆ …’ ಎಂಬ ಚಿತ್ರವೂ ಒಂದು. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ. ಇತ್ತೀಚೆಗೆ ಚಿತ್ರದ ಆಡಿಯೋ ಸಿಡಿ ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿದೆ. ಅಂದು ನಿರ್ದೇಶಕ ಹೆಚ್‌.ವಾಸು, ಎಂ.ಡಿ.ಶ್ರೀಧರ್‌ ಹಾಗೂ ತೆಲುಗು ನಟ ಶಫಿ ಆಡಿಯೋ ಸಿಡಿ ಬಿಡುಗಡೆ ಮಾಡಿದರು.
 
ರಾಘುಚಂದ್‌ ಈ ಚಿತ್ರದ ನಿರ್ದೇಶಕರು. ಕಥೆ, ಚಿತ್ರಕಥೆಯ ಜವಾಬ್ದಾರಿಯೂ ಇವರದೇ. ಇದೊಂದು ಪಕ್ಕಾ ಯುವಕರಿಗೆ ಸಂಬಂಧಿಸಿದ ಚಿತ್ರ. ಹಳ್ಳಿಯಿಂದ ಸಿಟಿಗೆ ಬರುವ ಹುಡುಗರಿಬ್ಬರು ಆ ಸಿಟಿಯಲ್ಲಿ ಯಾವ ರೀತಿ ಸಮಸ್ಯೆ ಎದುರಿಸುತ್ತಾರೆ. ಕೆಲ ಸಮಸ್ಯೆಯಿಂದ ಹೇಗೆ ಹೊರಬರುತ್ತಾರೆ ಎಂಬ ಅಂಶ ಚಿತ್ರದ ಹೈಲೈಟ್‌. ಇಡೀ ಚಿತ್ರದ ಕಥೆ ಇಬ್ಬರು ನಾಯಕರ ಸುತ್ತ ನಡೆಯಲಿದೆ.

ನಿರ್ದೇಶಕ ರಾಘುಚಂದ್‌ ಅವರಿಗೆ ತಾನೊಬ್ಬ ನಿರ್ದೇಶಕ ಎನಿಸಿಕೊಳ್ಳಬೇಕು ಎಂಬುದು ಅವರ ಬಹುದಿನಗಳ ಕನಸಂತೆ. ಅದು ಅವರ ಗೆಳೆಯನ ಮೂಲಕ ಈಡೇರಿದೆಯಂತೆ. ಇದೊಂದು ಸಸ್ಪೆನ್ಸ್‌, ಥ್ರಿಲ್ಲರ್‌ನಲ್ಲಿ ಸಾಗುವ ಸಿನಿಮಾ ಆಗಿದ್ದರೂ, ವಾಸ್ತವ ಅಂಶಗಳು ಚಿತ್ರದ ಪ್ರಮುಖ ಅಂಶವಂತೆ. ಹುಟ್ಟು ಸಾವಿನ ನಡುವೆ ಸಮಯ ಎಂಬುದು ಮನುಷ್ಯನ್ನು ಹೇಗೆಲ್ಲಾ ಆಡಿಸುತ್ತದೆ ಎಂಬುದನ್ನಿಲ್ಲಿ ಸೂಕ್ಷ್ಮವಾಗಿ ಹೇಳಲಾಗಿದೆಯಂತೆ. ಬಳ್ಳಾರಿ ಸುತ್ತಮುತ್ತ ಶೇ.80 ರಷ್ಟು ಚಿತ್ರೀಕರಿಸಿರುವ ನಿರ್ದೇಶಕರು, ಸಕಲೇಶಪುರ, ಶ್ರೀರಂಗಪಟ್ಟಣ, ಬೆಂಗಳೂರಿನಲ್ಲೂ ಚಿತ್ರೀಕರಿಸಿದ ಬಗ್ಗೆ ವಿವರ ಕೊಡುತ್ತಾರೆ.

ಚಿತ್ರಕ್ಕೆ ಅಭಿ ಮತ್ತು ರಾಜ್‌ ಇಬ್ಬರು ನಾಯಕರು.  ಈ ಪೈಕಿ ರಾಜ್‌ ಅವರು ಅಭಿನಯದ ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ಹೊತ್ತಿದ್ದಾರಂತೆ. ಇನ್ನು, ವರ್ಷಾ ಅವರಿಗೆ ನಾಯಕಿಯಾಗಿ ನಟಿಸಿದ್ದಾರೆ. ನಾಯಕ ರಾಜು ಅವರು ಮೂಲತಃ ಬಳ್ಳಾರಿಯವರು. 

ಚಿತ್ರರಂಗದಲ್ಲಿ ತಾನೂ ಹೀರೋ ಆಗಬೇಕು ಅಂತ ಕಳೆದ ಏಳು ವರ್ಷಗಳಿಂದ ಪ್ರಯತ್ನ ಪಡುತ್ತಿದ್ದರಂತೆ. ಕೊನೆಗೆ ಗೆಳೆಯನಿಗೂ ನಿರ್ದೇಶನದ ಕನಸು ಇದ್ದುದರಿಂದ ಅವರೇ ಹಣ ಹಾಕುವ ಮೂಲಕ ನಿರ್ಮಾಣ ಮಾಡಲು ಮುಂದಾಗಿದ್ದಾರೆ. ಅವರ ಈ ಕೆಲಸಕ್ಕೆ ಮನೆಯವರಿಂದಲೂ ಬೆಂಬಲ ಸಿಕ್ಕಿದೆ. ಆಂದಹಾಗೆ, ರಾಜು ಇಲ್ಲಿ ಒಂದು ರೀತಿಯ ಸೈಕೋ ಪಾತ್ರ ಮಾಡಿದ್ದಾರಂತೆ. 

ಇನ್ನೊಬ್ಬ ಹೀರೋ ಅಭಿ ಅವರಿಗೂ ಚಿತ್ರರಂಗ ಹೊಸದೇನಲ್ಲ. ಸಿನಿಮಾರಂಗದಲ್ಲಿ ಅವರು ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಫೇಸ್‌ಬುಕ್‌ ಮೂಲಕ ಈ ಚಿತ್ರತಂಡಕ್ಕೆ ಪರಿಚಯವಾಗಿ, ಆ ಮೂಲಕ ಹೀರೋ ಆಗುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ ಅಭಿ. “ಇದೊಂದು ತ್ರಿಕೋನ ಪ್ರೇಮಕಥೆಯಾಗಿದ್ದು, ಪಕ್ಕಾ ರಾ ಲವ್‌ ಸಬ್ಜೆಕ್ಟ್ ಎಂಬುದು ಅಭಿ ಮಾತು.

ಚಿತ್ರಕ್ಕೆ ಲೋಕಿ ಅವರು ಸಂಗೀತ ನೀಡಿದ್ದಾರೆ. ಹಂಸಲೇಖ ಅವರ ದೇಸಿ ಕಾಲೇಜಿನಲ್ಲಿ ಕೆಲಸ ಮಾಡಿದ್ದ ಲೋಕಿ ಇಲ್ಲಿ ನಾಲ್ಕು ಹಾಡುಗಳನ್ನು ನೀಡಿದ್ದಾರೆ. ವಿನು ಮನಸು ಚಿತ್ರಕ್ಕೆ ಹಿನ್ನೆಲೆ ಸಂಗೀತ ನೀಡಿದ್ದಾರೆ. ಪ್ರದೀಪ್‌ ಗಾಂಧಿ ಚಿತ್ರದ ಛಾಯಾಗ್ರಾಹಕರು.

ಟಾಪ್ ನ್ಯೂಸ್

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

10-hunsur

Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್‌ಗೂ ಹಾನಿ

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.