ಪ್ರಧಾನಿಗಳೇ,ಮೌನ ಬೇಡ,ನಿಮ್ಮ ಉತ್ತರಕ್ಕೆ ದೇಶವೇ ಕಾಯುತ್ತಿದೆ: ರಾಹುಲ್
Team Udayavani, Apr 13, 2018, 6:05 PM IST
ಹೊಸದಿಲ್ಲಿ : ಉತ್ತರ ಪ್ರದೇಶದ ಉನ್ನಾವ್ ಮತ್ತು ಜಮ್ಮು ಕಾಶ್ಮೀರದ ಕಠುವಾ ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಜಾಣ ಮೌನ ವಹಿಸಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕಟುವಾಗಿ ಆರೋಪಿಸಿ ಖಂಡಿಸಿದ್ದಾರೆ.
“ಮಾನ್ಯ ಪ್ರಧಾನಿಗಳೇ, ನಿಮ್ಮ ಮೌನವನ್ನು ನಾವು ಒಪ್ಪುವುದಿಲ್ಲ. ದೇಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಹೆಚ್ಚುತ್ತಿರುವ ಹಿಂಸೆ ಮತ್ತು ದೌರ್ಜನ್ಯದ ಬಗ್ಗೆ ನೀವು ಏನು ಹೇಳುತ್ತೀರಿ ? ರಾಜ್ಯ ಸರಕಾರಗಳು ಆತ್ಯಾಚಾರಿಗಳನ್ನು ಮತ್ತು ಕೊಲೆಗಡುಕರನ್ನು ಏಕೆ ರಕ್ಷಿಸುತ್ತಿದೆ ? ನಿಮ್ಮ ಉತ್ತರಕ್ಕಾಗಿ ಇಡಿಯ ದೇಶವೇ ಕಾಯುತ್ತಿದೆ’ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಕಠುವಾ ಮತ್ತು ಉನ್ನಾವ್ ಗ್ಯಾಂಗ್ ರೇಪ್ ಪ್ರಕರಣಗಳನ್ನು ಪ್ರತಿಭಟಿಸಿ ನಿನ್ನೆ ಮಧ್ಯರಾತ್ರಿ ರಾಷ್ಟ್ರ ರಾಜಧಾನಿಯಲ್ಲಿ ರಾಹುಲ್ ಗಾಂಧಿ ಮಧ್ಯರಾತ್ರಿಯ ಮೋಂಬತ್ತಿ ಮೆರವಣಿಗೆಯನ್ನು ನಡೆಸಿದ್ದರು.
ದೇಶದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲೆ ಹೆಚ್ಚುತ್ತಿರುವ ಹಿಂಸೆ ಮತ್ತು ದೌರ್ಜನ್ಯವನ್ನು ಹಾಗೂ ಪ್ರಧಾನಿ ಮೋದಿ ಅವರು ತಳೆದಿರುವ ಜಾಣ ಮೌನವನ್ನು ಅನೇಕ ವಿರೋಧ ಪಕ್ಷಗಳು ಪ್ರಶ್ನಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
IPL; ಬೌಲರ್ಗಳನ್ನು ಕಾಪಾಡಿ: ಅಶ್ವಿನ್ ವಿನಂತಿ!
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ