ಕಾರಜೋಳ ಪುತ್ರ ಹೆಸರಲ್ಲಿ ವಿವಾದಾತ್ಮಕ ಸ್ಟೇಟಸ್
Team Udayavani, Apr 14, 2018, 6:50 AM IST
ಬಾಗಲಕೋಟೆ: ಮುಧೋಳದ ಬಿಜೆಪಿ ಶಾಸಕ ಗೋವಿಂದ ಕಾರಜೋಳ ಅವರ ಪುತ್ರ ಉಮೇಶ ಕಾರಜೋಳ ಅವರ ಹೆಸರಿನಲ್ಲಿರುವ ಫೇಸ್ಬುಕ್ನಲ್ಲಿ “ಮೋದಿ ಓಕೆ, ಬಿಎಸ್ವೈ ಯಾಕೆ?’ ಎಂಬ ಬರಹ ಈಗ ವಿರೋಧ ಪಕ್ಷಗಳ ಟೀಕೆಗೆ ಆಹಾರವಾಗಿದೆ. ಕಾರಜೋಳರ ಕ್ಷೇತ್ರ ಮುಧೋಳಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬರುವ ದಿನವೇ ಈ ಸ್ಟೇಟಸ್ ಬಗ್ಗೆ ವಿರೋಧ ಪಕ್ಷದವರು ಫೇಸ್ಬುಕ್ನಲ್ಲೇ ಟೀಕೆ ಮಾಡಿದ್ದಾರೆ.
ಏ.12ರಂದು ಉಮೇಶ ಕಾರಜೋಳ ಹೆಸರಿನಲ್ಲಿ ಇರುವ ಫೇಸ್ಬುಕ್ನಲ್ಲಿ ಮೋದಿ ಓಕೆ, ಬಿಎಸ್ವೈ ಯಾಕೆ? ಎಂಬ ಬರಹ ಹಾಕಲಾಗಿತ್ತು. ರಾಯಚೂರು ಜಿಲ್ಲೆಯ ಲಿಂಗಸಗೂರು ಕ್ಷೇತ್ರದ ಆಕಾಂಕ್ಷಿ ಆಗಿರುವ ಉಮೇಶ ಅವರಿಗೆ ಅಲ್ಲಿ ಟಿಕೆಟ್ ಸಿಕ್ಕಿರಲಿಲ್ಲ. ಹೀಗಾಗಿ ಅವರು ಅಸಮಾಧಾನಗೊಂಡು ಈ ರೀತಿ ಹಾಕಿದ್ದಾರೆಂದು ಹೇಳಲಾಗಿದೆ. ಆದರೆ, ಸಂಜೆಯ ಹೊತ್ತಿಗೆ ಉಮೇಶ ಕಾರಜೋಳ ಹೆಸರಿನ ಅದೇ ಫೇಸ್ಬುಕ್ನಲ್ಲಿ, ನಾನು ಯಾವುದೇ ಸ್ಟೇಟಸ್ ಹಾಕಿಲ್ಲ. ಕಿಡಿಗೇಡಿಗಳು ನನ್ನ ಹೆಸರಿಗೆ ಮಸಿ ಬಳಿಯಲು ಈ ರೀತಿ ಮಾಡಿದ್ದಾರೆಂದು ಮತ್ತೂಂದು ಸ್ಟೇಟಸ್ ಹಾಕಿ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು