ನಮ್ಮ ಧ್ವನಿ ಹತ್ತಿಕ್ಕಿದರೆ ದಿಲ್ಲಿ ಗದ್ದುಗೆ ಹೋಗುತ್ತೆ


Team Udayavani, Apr 14, 2018, 12:45 PM IST

gul-5.jpg

ಕಲಬುರಗಿ: ದಲಿತರ-ಶೋಷಿತರ ಧ್ವನಿ ಹತ್ತಿಕ್ಕಲು ಇನ್ನೂ ಮುಂದೆ ಹೋದರೆ ರಾಷ್ಟ್ರದ ದಿಲ್ಲಿ ಗದ್ದುಗೆ ನಾವು ಹಿಡಿದೇ ಹಿಡಿಯುತ್ತೇವೆ. ಇದರಲ್ಲಿ ಅನುಮಾನವೇ ಬೇಡ ಎಂದು ಖ್ಯಾತ ಚಿತ್ರನಟ ಪ್ರಕಾಶ ರೈ ಗುಡುಗಿದರು.

ನಗರದ ಜಗತ್‌ ವೃತ್ತದ ಡಾ| ಅಂಬೇಡ್ಕರ್‌ ಪುತ್ಥಳಿ ಬಳಿ ಅಂಬೇಡ್ಕರ್‌ ಜಯಂತ್ಯುತ್ಸವ ಸಮಿತಿಯು ಸಂವಿಧಾನ ಶಿಲ್ಪಿ ಡಾ| ಬಿ.ಆರ್‌. ಅಂಬೇಡ್ಕರ್‌ರ 127ನೇ ಜಯಂತ್ತುತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಹಾಗೂ ಕ್ರಾಂತಿಗೀತೆಗಳ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.

ನಮ್ಮ ಧ್ವನಿ ಹತ್ತಿಕ್ಕಲು ಕಲ್ಲು ಹೊಡೆದರೆ ಅವುಗಳಿಂದ ಮನೆ ಕಟ್ಟುತ್ತೇವೆ. ಬೆಂಕಿ ಹಚ್ಚಿದರೆ ಅದರಿಂದ ದೀಪ ಹಚ್ಚುತ್ತೇವೆ. ಇದರಿಂದ ಹೆಚ್ಚಿನ ಧೈರ್ಯ ಬರುತ್ತದೆ. ಅಲ್ಲದೇ ಕಾರ್ಯಪ್ರವೃತ್ತರಾಗಲು ಪ್ರೇರಣೆ ನೀಡುತ್ತದೆ. ಈ ಹಿನ್ನೆಲೆಯಲ್ಲಿ ದಲಿತರು-ಶೋಷಿತ ಬಂಧುಗಳು ರಾಜಕೀಯ ಪ್ರಜ್ಞೆ ಬೆಳೆಸಿಕೊಳ್ಳುವ ಮೂಲಕ ಬದಲಾವಣೆಗೆ ನಾಂದಿ ಹಾಡಬೇಕೆಂದು ಕರೆ ನೀಡಿದರು. ನಮ್ಮನ್ನು ಪ್ರಾಣಿ ಎಂದು
ಹೀಯಾಳಿಸುವವರನ್ನು ಹಾಗೂ ಸಂವಿಧಾನ ಬದಲಾಯಿಸುತ್ತೇವೆ ಎನ್ನುವವರನ್ನು ನಾವೇ ಬದಲಾಯಿಸಬೇಕು. ನಿಜ ನಾವು ಮನುಷ್ಯ ಪ್ರಾಣಿಗಳು. ಖಂಡಿತ ನಿಮ್ಮನ್ನು ತಿನ್ನದೇ ಬಿಡುವುದಿಲ್ಲ. ಪ್ರಮುಖವಾಗಿ ಇವರನ್ನು ಬದಲಾವಣೆ ಮೂಲಕ ನಮ್ಮ ಕೈಗೆ ಮತ್ತೆ ಅಧಿಕಾರ ತೆಗೆದುಕೊಳ್ಳಬೇಕಾಗಿದೆ ಎಂದರು. ಕಲಬುರಗಿಯಲ್ಲಿ ಗುರುವಾರ ರಾತ್ರಿ ತಮ್ಮ ಧ್ವನಿ ಹತ್ತಿಕ್ಕುವ ನಿಟ್ಟಿನಲ್ಲಿ ಮುತ್ತಿಗೆ ಹಾಕಿರುವ ಘಟನೆ ಮತ್ತಷ್ಟು ಧೈರ್ಯ ತರುವಂತೆ ಮಾಡಿದೆ. ಹೀಗಾಗಿ ತಮಗೆ ಧನ್ಯವಾದಗಳು ಎಂದು ಟಾಂಗ್‌ ನೀಡಿದ ಅವರು, 2019ರಲ್ಲಿ ಅಧಿಕಾರಕ್ಕೆ ಬರೋಲ್ಲ ಎನ್ನುವ ಹತಾಶೆಯಿಂದ ಈ ರೀತಿ ನಡೆದುಕೊಳ್ಳಲಾಗುತ್ತಿದೆ ಎಂದು ಟೀಕಿಸಿದರು.

ತಾವು ಹೋದ ಕಡೆ ಗಣ್ಯರ ಹೆಸರು ಬಳಸದಿರುವಂತೆ ತಾಕೀತು ಮಾಡಲಾಗುತ್ತಿದೆ. ಆದರೆ ಮಾನ-ಮರ್ಯಾದೆ ಹಾಗೂ ಯಾವುದೇ ವ್ಯಕ್ತಿತ್ವ ಇರದವರಿಗೆ ಹೆಸರು ಎಲ್ಲಿ ಇರುತ್ತೇ? ಕೋಮುವಾದ ಬಗ್ಗೆ ಮಾತನಾಡಿದರೆ ಇವರಿಗೇಕೆ ಸಿಟ್ಟು. ಕುಂಬಳಕಾಯಿ ಕಳ್ಳ ಎಂದರೆ ಇವರೇಕೆ ಹೆಗಲು ಮುಟ್ಟಿಕೊಳ್ಳುತ್ತಾರೆ ಎಂದು ವಾಗ್ಧಾಳಿ ನಡೆಸಿದರು. ಪ್ರಗತಿಪರ ಚಿಂತಕ ಅನಂತ ನಾಯಕ ಮಾತನಾಡಿ, ಇಂದು ರಾಜಕೀಯವೇ ಎಲ್ಲ ನಿರ್ಧಾರ ಮಾಡುತ್ತಿರುವಾಗ ನಾವೇಕೆ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಆಗಬಾರದು ಎಂದು ಜನತೆಯನ್ನು ಪ್ರಶ್ನಿಸಿದರು.
 
ಕೇಂದ್ರೀಯ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ| ಅಪ್ಪಗೆರೆ ಸೋಮಶೇಖರ್‌ ಮಾತನಾಡಿ, ಮಹಾತ್ಮಾಗಾಂಧಿಗಿಂತ ಡಾ| ಅಂಬೇಡ್ಕರ್‌ ನಿಜವಾದ ಅಹಿಂಸಾವಾದಿ. ಏಕೆಂದರೆ ಮಹಾತ್ಮಾಗಾಂಧಿ ಅವರು ಅಂಬೇಡ್ಕರ್‌ ಅವರಷ್ಟು ಹಿಂಸೆ ಹಾಗೂ ಅವಮಾನಕ್ಕೆ ಒಳಗಾಗಿಲ್ಲ. ನೋವು ತನ್ನೊಳಗೆ ತುಂಬಿಕೊಂಡು ಬಡಿದಾಡಿದರು ಎಂದರು. ಕೆ. ನೀಲಾ ಮಾತನಾಡಿದರು. 

ಜಯಂತ್ಯುತ್ಸವ ಸಮಿತಿ ಗೌರವಾಧ್ಯಕ್ಷ ಡಾ| ವಿಠ್ಠಲ ದೊಡ್ಡಮನಿ, ಸಮಿತಿ ಅಧ್ಯಕ್ಷರಾಗಿರುವ ಪಾಲಿಕೆ ಸದಸ್ಯ ರಾಜಕುಮಾರ ಕಪನೂರ, ಕಾರ್ಯಾಧ್ಯಕ್ಷ ಸುರೇಶ ಬಡಿಗೇರ್‌, ದಲಿತ ಸೇನೆಯ ಹಣಮಂತ ಯಳಸಂಗಿ, ಸುರೇಶ ಹಾದಿಮನಿ, ದೇವೇಂದ್ರ ಸಿರನೂರ, ಅರ್ಜುನ ಗಾಯಕವಾಡ ಮುಂತಾದವರಿದ್ದರು. ಮಂಜುನಾಥ ಹಿರೋಳಿ ನಿರೂಪಿಸಿದರು. 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.