ಕೇಂದ್ರ ಸರಕಾರದ ಪ್ರಜಾತಂತ್ರ ವಿರೋಧಿ ನೀತಿ: ಕಾಂಗ್ರೆಸ್
Team Udayavani, Apr 15, 2018, 6:00 AM IST
ಉಡುಪಿ: ವಿಪಕ್ಷಗಳು ಬಜೆಟ್ ಅಧಿವೇಶನದಲ್ಲಿ ಸಂಸತ್ ಕಲಾಪ ನಡೆಸಲು ಅವಕಾಶ ನೀಡದೆ ಪ್ರಜಾಪ್ರಭುತ್ವ ವಿರೋಧಿ ನೀತಿ ಅನುಸರಿಸುತ್ತಿವೆ ಎಂಬ ನೆಪದೊಂದಿಗೆ ದೇಶದ ವಿವಿಧೆಡೆ ಬಿಜೆಪಿ ಹಮ್ಮಿಕೊಂಡ ಉಪವಾಸ ಸತ್ಯಾಗ್ರಹ ಜನವಿರೋಧಿ ನೀತಿಯಾಗಿದೆ ಎಂದು ಕಾಂಗ್ರೆಸ್ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಪ್ರತಿಕ್ರಿಯಿಸಿದ್ದಾರೆ.
ಸಂಸತ್ತಿನಲ್ಲಿ ಬಹುಮತ ಇದೆ ಎಂಬುದರಿಂದ ತಾನು ನಡೆದದ್ದೇ ದಾರಿ ಎಂಬಂತೆ ವರ್ತಿಸುವ ಬಿಜೆಪಿ, ಕಲಾಪಗಳಲ್ಲಿ ಜನಸಾಮಾನ್ಯರ ಹಾಗೂ ದೇಶದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ವಿಪಕ್ಷಗಳಿಗೆ ಆಸ್ಪದ ನೀಡದೆ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿರುವುದು ಖಂಡನೀಯ ಎಂದಿದ್ದಾರೆ.
ಯುಪಿಎ ಸರಕಾರದ ಅವಧಿಯಲ್ಲಿ ಇದೇ ಬಿಜೆಪಿಯ ಸಂಸದರು ಯಾವುದೇ ಜನಪರ ಮಸೂದೆಗಳನ್ನು ಸಂಸತ್ತಿನಲ್ಲಿ ಮಂಡಿಸಲು ಅವಕಾಶ ನೀಡದೆ ಪ್ರತಿಭಟನೆ, ಗದ್ದಲದೊಂದಿಗೆ ಜನವಿರೋಧಿ ನೀತಿ ಅನುಸರಿಸಿದ್ದರು. ಬಿಜೆಪಿಯ ಈ ನಡೆಯಿಂದ ದೇಶದ ಅಭಿವೃದ್ಧಿಯ ನಾಗಾಲೋಟಕ್ಕೆ ಹಿನ್ನಡೆಯಾಗಿತ್ತು.
ಇದರ ಹೊಣೆಯನ್ನು ಬಿಜೆಪಿ ಹೊರಬೇಕು. ಅಂದು ಪ್ರತಿಭಟಿಸಿ, ವಿರೋಧಿಸಿದ ಯುಪಿಎ ಸರಕಾರದ ಯೋಜನೆಗಳನ್ನು ಇಂದು ಬಿಜೆಪಿ ಕಾರ್ಯಗತಗೊಳಿಸುತ್ತಿದೆ. ಚುನಾವಣೆ ಬಂದಾಗ ಮಾತ್ರ ಬಿಜೆಪಿಗೆ ಉಪವಾಸ ಹಾಗೂ ಪ್ರತಿಭಟನೆಯ ನೆನಪಾಗುವುದು ಎಂದು ಕಾಂಗ್ರೆಸ್ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ