ನಿಸರ್ಗಧಾಮದಲ್ಲಿ ಹಬ್ಬದೂಟದ ಸಂಭ್ರಮ


Team Udayavani, Apr 15, 2018, 10:01 AM IST

15-April-1.jpg

ಮಹಾನಗರ: ಪ್ರಾಚೀನ ಕಾಲದ ಗುತ್ತಿನ ಮನೆಯ ಬಿಸು ಹಬ್ಬವನ್ನು ನೆನಪಿಸುವ ಭೋಜನ… ಬಿಸಿಲ ಉರಿ ಇದ್ದರೂ ಬಿಸು ಊಟದ ಸಂಭ್ರಮ. ಬಾಳೆ ಎಲೆಯಲ್ಲಿ ಚಟ್ನಿ, ಕೋಸಂಬರಿ, ಪಲ್ಯ, ಅನ್ನ, ಸಾಂಬಾರು… ಹೀಗೆ 25 ವಿವಿಧ ಬಗೆಯ ಖಾದ್ಯ. ಇದು ಪಿಲಿಕುಳದ ಗುತ್ತುಮನೆಯಲ್ಲಿ ಶನಿವಾರ ಕಂಡು ಬಂದ ಬಿಸು ಪರ್ಬದ ಊಟೋಪಚಾರದ ದೃಶ್ಯ.

ಡಾ| ಶಿವರಾಮ ಕಾರಂತ ನಿಸರ್ಗಧಾಮದ ಗುತ್ತು ಮನೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಶನಿವಾರ ಆಯೋಜಿಸಲಾದ ‘ಪಿಸುಪರ್ಬ’ದಲ್ಲಿ ಹಬ್ಬದ ಸಂಭ್ರಮವಿತ್ತು. ಗುತ್ತು ಮನೆಯ ಹೊರ ಆವರಣದಲ್ಲಿ ಊಟದ ವ್ಯವಸ್ಥೆ ಮಾಡಲಾಗಿದ್ದು, ಆಗಮಿಸಿದ ಅತಿಥಿಗಳಿಗೆ ಬಗೆ ಬಗೆಯ ಆಹಾರವನ್ನು ಉಣ ಬಡಿಸಲಾಯಿತು. ಪಿಲಿಕುಳ ನಿಸರ್ಗ ಧಾಮಕ್ಕೆ ಆಗಮಿಸುವ ಪ್ರವಾಸಿಗರಿಗೆ ಬಿಸು ಹಬ್ಬದ ವಿಶೇಷ ಊಟ ಸಹಿತ ಶನಿವಾರ ಪ್ರವೇಶ ದರವಾಗಿ 300 ರೂ. ಗಳ ವಿಶೇಷ ಕೂಪನ್‌ ನೀಡಲಾಗಿತ್ತು.

ಬೆಲ್ಲ- ನೀರಿನ ವ್ಯವಸ್ಥೆ
ಗುತ್ತಿನ ಮನೆಯಲ್ಲಿ ಹಣ್ಣು- ತರಕಾರಿಗಳ ಬಿಸು ಕಣಿಯೊಂದಿಗೆ ಬಿಸು ಪರ್ಬ ಆಚರಣೆಗೆ ಚಾಲನೆ ನೀಡಲಾಯಿತು. ಆಗಮಿಸಿದ ಅತಿಥಿಗಳಿಗೆ ಗುತ್ತು ಮನೆಯ ಚಾವಡಿಯಲ್ಲಿ ಬೆಲ್ಲ- ನೀರಿನ ವ್ಯವಸ್ಥೆ ಮಾಡಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭಾಸ್ಕರ ರೈ ಕುಕ್ಕುವಳ್ಳಿ ನೇತೃತ್ವದಲ್ಲಿ ‘ತುಳುನಾಡ ಬಲೀಂದ್ರ’ ತಾಳಮದ್ದಳೆ ಹಾಗೂ ಮಂಜುಳಾ ಶೆಟ್ಟಿ ಸಂಯೋಜನೆಯಲ್ಲಿ ಗಾಯನ ವೈಭವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಪಿಲಿಕುಳ ಜೈವಿಕ ಉದ್ಯಾನವನದ ನಿರ್ದೇಶಕ ಜಯಪ್ರಕಾಶ್‌ ಭಂಡಾರಿ, ಕಸಾಪ ಜಿಲ್ಲಾಧ್ಯಕ್ಷ ಪ್ರದೀಪ್‌ ಕುಮಾರ್‌ ಕಲ್ಕೂರ, ಪಿಲಿಕುಳ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ| ಕೆ. ವಿ. ರಾವ್‌ ಮೊದಲಾದವರು ಉಪಸ್ಥಿತರಿದ್ದರು.

ವಿಶೇಷ ಅತಿಥಿಯಾಗಿದ್ದ ಜಾನಪದ ವಿದ್ವಾಂಸ ಡಾ| ಚಿನ್ನಪ್ಪ ಗೌಡ ಅವರು ಆಚರಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ತುಳುನಾಡಿನಲ್ಲಿ ಹೊಸ ವರ್ಷದ ಮೊದಲ ದಿನವನ್ನಾಗಿ ಬಿಸುವನ್ನು ಆಚರಿಸಲಾಗುತ್ತದೆ. ಅಂದು ಇಲ್ಲಿ ಬೆಳೆಯಲಾಗುವ ಎಲ್ಲ ರೀತಿಯ ತರಕಾರಿ, ಫ‌ಲವಸ್ತುಗಳನ್ನು ಇಟ್ಟು ಪೂಜೆ ಮಾಡಿಕೊಂಡು ಮಧ್ಯಾಹ್ನ ವಿಶೇಷ ಅಡುಗೆಯೂಟ ಮಾಡಲಾಗುತ್ತದೆ ಎಂದರು.

ಕಾಲ ಬದಲಾಗುತ್ತಿದೆ. ಕಡಿದು ಹೋಗುತ್ತಿರುವ ಅಥವಾ ದೂರವಾಗುತ್ತಿರುವ ಸಂಬಂಧಗಳನ್ನು ಜೋಡಿಸುವ ದೃಷ್ಟಿಯಿಂದ ಈ ಬಿಸು ಪರ್ಬ ಆಚರಣೆ ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಊಟಕ್ಕೆ ವಿವಿಧ ವ್ಯಂಜನ
ಉಪ್ಪು, ಉಪ್ಪಿನಕಾಯಿ, ಮಾವಿನಕಾಯಿ ಚಟ್ನಿ, ಮುಳ್ಳು ಸೌತೆ ಪಚ್ಚೊಡಿ, ಹೆಸ್ರು ಬೇಳೆ ಕೋಸಂಬರಿ, ಅಲಸಂಡೆ ಪಲ್ಯ, ಗೇರುತೊಂಡೆ ಉಪ್ಪುಕರಿ, ಮೂಡೆ- ತೆಂಗಿನ ಹಾಲು, ಹೆಸರು- ಸೌತೆ ಗಸಿ, ಗುಜ್ಜೆ- ಕಡ್ಲೆ ಪಲ್ಯ, ಹುರುಳಿ ಸಾರು, ಹಪ್ಪಳ, ಮಾವಿನ ಹಣ್ಣು ಸಾಸಿವೆ, ಸೌತೆ ಸಾಂಬಾರು, ಬದನೆ ಗೊಜ್ಜು, ಬೆಂಡೆಕಾಯಿ ಮಜ್ಜಿಗೆ ಹುಳಿ, ಹಲಸಿನ ಹಣ್ಣು ಚಂಡುರ್ಲಿ, ಹೋಳಿಗೆ, ಹೆಸರು ಬೇಳೆ ಪಾಯಸ, ಬಾಳೆಹಣ್ಣು ಪೋಡಿ, ಗೆಣಸು ಪೋಡಿ, ಮಜ್ಜಿಗೆ, ಹಲಸಿನ ಹಣ್ಣಿನ ಅಪ್ಪವನ್ನು ಆಗಮಿಸಿದ ಅತಿಥಿಗಳಿಗೆ ಉಣ ಬಡಿಸಲಾಯಿತು.

ಕೃಷಿ ಪ್ರೇರಿತ ಬದುಕಿನ ಆಚರಣೆ
ಬಿಸುಪರ್ಬವು ತುಳುನಾಡಿನ ರೈತರ ಬದುಕು ಮತ್ತು ನೆಲದ ಸಂಬಂಧವನ್ನು ತಿಳಿಸುತ್ತದೆ. ಕೃಷಿ ಪ್ರೇರಿತ ಬದುಕಿನ ಆಚರಣೆಯೇ ಇದಾಗಿದೆ.
-ಡಾ| ಚಿನ್ನಪ್ಪ ಗೌಡ
  ಜಾನಪದ ವಿದ್ವಾಂಸ 

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.