ಅಂಬೇಡ್ಕರರಲ್ಲಿಬುದ್ಧ-ಬಸವನ ಕಾಣಿ


Team Udayavani, Apr 15, 2018, 11:48 AM IST

bid-1.jpg

ಬೀದರ: ಭಗವಾನ್‌ ಬುದ್ಧ ಬಿತ್ತಿದ ಸಮಾನತೆ ಬೀಜವನ್ನು ಬಸವಣ್ಣ ಕಾರ್ಯ ರೂಪಕ್ಕೆ ತಂದಿದ್ದರೆ, ಡಾ| ಅಂಬೇಡ್ಕರ ಅವರು ಅದಕ್ಕೆ ಸಾಂವಿಧಾನಿಕ ಮಾನ್ಯತೆ ಕೊಟ್ಟಿದ್ದರು. ಹಾಗಾಗಿ ನಾವು ಬಸವಣ್ಣನಲ್ಲಿ ಬುದ್ಧನನ್ನ ಕಂಡರೆ, ಅಂಬೇಡ್ಕರರಲ್ಲಿ ಬಸವಣ್ಣನನ್ನು ಕಾಣಬೇಕು. ಆಗ ಸೌಹಾರ್ದ ಮತ್ತು ಸ್ವಸ್ಥ ಸಮಾಜ ಕಟ್ಟಡಲು ಸಾಧ್ಯ ಎಂದು ಬಸವ ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಶರಣಪ್ಪ ಮಿಠಾರೆ ಹೇಳಿದರು.

ನಗರದ ಅಂಬೇಡ್ಕರ ವೃತ್ತದಲ್ಲಿ ಡಾ| ಅಂಬೇಡ್ಕರ ಅವರ 127ನೇ ಜಯಂತ್ಯುತ್ಸವ ನಿಮಿತ್ತ ಶನಿವಾರ ಆಯೋಜಿಸದ್ದ ಬೃಹತ್‌ ಬಹಿರಂಗ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಜಾತಿ ಎಂಬುದು ಮಾನವ ನಿರ್ಮಿತವಾದದ್ದು. ಯಾರು ಯಾವುದೇ ಜಾತಿಯಲ್ಲಿ ಹುಟ್ಟಬೇಕು ಎಂಬ ಉದ್ದೇಶ ಹೊಂದಿರುವುದಿಲ್ಲ. ಆದರೆ, ನಾವು ಮಾಡುವ ಕಾಯಕವೇ ಜಾತಿಗಳಾಗಿರುವುದು ದೇಶದ ದೊಡ್ಡ ದುರಂತ ಎಂದು ಬೇಸರ ವ್ಯಕ್ತಪಡಿಸಿದರು. ಅಂಬೇಡ್ಕರರ ಚಿಂತನೆಗಳು ದೇಶದ ದಿನ ದಲಿತರ, ಬಡವರ ಪರವಾಗಿದ್ದವು. ಬಾಬಾ ಸಾಹೇಬರು ಮನುಕುಲದ ಏಳ್ಗೆಗಾಗಿ ಹೋರಾಟ ನಡೆಸಿದರೆ ಹೊರತು ಯಾವುದೇ ಜಾತಿಯ ವಿರುದ್ಧ ಅಲ್ಲ. ಸಮಾಜದಲ್ಲಿ ಹರಡಿರುವ ಜಾತಿಯ ವಿಷ ಬೀಜ ನಿರ್ನಾಮವಾಗಿ ಸಾತ್ವಿಕ ಬದುಕು ಬದುಕುವಂತಾಗಬೇಕು. ಮಹಾತ್ಮರ ಜಯಂತಿಗಳನ್ನು ವೇದಿಕೆಗೆ ಸೀಮಿತಗೊಳಿಸದೇ ಅವರ ತತ್ವಾದರ್ಶಗಳನ್ನು ದಿನ ನಿತ್ಯದ ಬದುಕಿನಲ್ಲಿ ಆಚರಣೆಯಲ್ಲಿ ತಂದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಗುಲಬರ್ಗಾ ವಿವಿ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ| ಎಚ್‌.ಟಿ. ಪೋತೆ ಮಾತನಾಡಿ, ಅಂಬೇಡ್ಕರ ಒಬ್ಬ ಶ್ರೇಷ್ಠ ಜ್ಞಾನಿಯಾಗಿದ್ದು, ವಿಶ್ವದಲ್ಲಿ ಪ್ರಖ್ಯಾತಿ‌ ಪಡೆದಿದ್ದರು. ನಾವೆಲ್ಲರೂ ನಮಗಾಗಿ, ಹೆಂಡತಿ ಮಕ್ಕಳಿಗಾಗಿ ಓದಿದ್ದರೆ ಅವರು ಶೋಷಿತ ಸಮುದಾಯವರ ಏಳ್ಗೆಗಾಗಿ ಓದಿದ್ದರು. ಬುದ್ಧ, ಬಸವ ನಾಡಿನಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ಯಾವೊಬ್ಬ ಮನುವಾದಿಗಳು ಮಾತನಾಡುವುದಿಲ್ಲ. ಅಸ್ಪೃಶ್ಯರ ನೋವು ಅಸ್ಪೃಶ್ಯರಿಗೆ ಮಾತ್ರ ಗೊತ್ತು. ಇದರಿಂದ ಮುಕ್ತಿ ಪಡೆಯಬೇಕಾದರೆ ಸಮಾನತೆಯ ಹಕ್ಕು ಉಳಿಸಿಕೊಳ್ಳಬೇಕಿದೆ ಎಂದು ಹೇಳಿದರು.

ಇದು ಅಂಬೇಡ್ಕರ ಭಾರತ ಎಂದು ಪ್ರಧಾನಿಗಳ ಹೇಳಿಕೆ ನಿಜವಾಗಿದ್ದರೆ ಧರ್ಮ ಸಂಸತ್ತಿನ ಮಠಾಧೀಶರು ಬಾಯಿ ಮುಚ್ಚಿಸಲಿ. ಮೀಸಲಾತಿ ಸೌಲಭ್ಯ ತೆಗೆಯಬೇಕು ಎಂದಾದರೆ ರಾಷ್ಟ್ರದ ಸಂಪತ್ತನ್ನು ಎಲ್ಲರಿಗೂ ಸಮಾನವಾಗಿ ಹಂಚಿಕೆ ಮಾಡಲಿ. 

ಕೇವಲ ಶೇ.15ರಷ್ಟು ಮೀಸಲಾತಿ ಸೌಲಭ್ಯ ಪಡೆಯುವ ಪರಿಶಿಷ್ಟ ಜಾತಿಯವರು ಅಂಬೇಡ್ಕರ ಜಯಂತಿ ಆಚರಣೆ ಮಾಡುತ್ತಿದ್ದರೆ, ಅತಿ ಹೆಚ್ಚು ಮೀಸಲಾತಿ ಪಡೆಯುವ ಹಿಂದುಳಿದ ವರ್ಗದವರು ಮನೆಯಲ್ಲಿ ಕುಳಿತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆಣದೂರ ಧಮ್ಮ ದರ್ಶನ ಭೂಮಿಯ ಶ್ರೀ ಭಂತೆ ವರಜ್ಯೋತಿ ಅವರ ಸಾನಿಧ್ಯ ಮತ್ತು ಜಯಂತಿ ಉತ್ಸವ ಸಮಿತಿ ಅಧ್ಯಕ್ಷ ಮಾರುತಿ ಬೌದ್ಧೆ ಅಧ್ಯಕ್ಷತೆ ವಹಿಸಿದ್ದರು. ಚಾಮರಾಜನಗರದ ಪ್ರಗತಿಪರ ಚಿಂತಕ ಅರಕಲವಾಡಿ ನಾಗೇಂದ್ರ ಮತ್ತು ಸಂಬಾಜಿ ಬ್ರಿಗೇಡ್‌ ಅಧ್ಯಕ್ಷ ಸುಭಾಷ ಶೆಡೋಳೆ ಉಪನ್ಯಾಸ ನೀಡಿದರು. ಸಮಿತಿಯ ಗೌರವಾಧ್ಯಕ್ಷ ಫರ್ನಾಂಡಿಸ್‌ ಹಿಪ್ಪಳಗಾಂವ್‌, ಉಪಾಧ್ಯಕ್ಷ ಬಾಬುರಾವ ಪಾಸ್ವಾನ್‌, ಮೆರವಣಿಗೆ ಸಮಿತಿ ಅಧ್ಯಕ್ಷ ವಿಜಯಕುಮಾರ ಸೋನಾರೆ, ಪ್ರಚಾರ ಸಮಿತಿ ಅಧ್ಯಕ್ಷ ಮಹೇಶ ಗೋರನಾಳಕರ್‌, ಪ್ರಮುಖರಾದ ಅರುಣ ಪಾಟೀಲ, ವಿಷ್ಣುವರ್ಧನ ವಾಲೊªಡ್ಡಿ ಮತ್ತಿತರರು ವೇದಿಕೆಯಲ್ಲಿದ್ದರು.

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.