ಹಳೆ ಟೈಟಲ್‌ ಹೊಸ ಸಿನಿಮಾ: ಎಡಕಲ್ಲು ಮೇಲೊಂದು ಸಂದೇಶ


Team Udayavani, Apr 16, 2018, 11:51 AM IST

Edakallu-Guddada-Mele.jpg

“ಎಡಕಲ್ಲು ಗುಡ್ಡದ ಮೇಲೆ’ – ಈ ಸಿನಿಮಾ ಹೆಸರು ಕೇಳಿದಾಗ ನಿಮಗೆ ಪುಟ್ಟಣ್ಣ ಕಣಗಾಣಲ್‌ ಅವರ ಹೆಸರು ನೆನಪಿಗೆ ಬರುತ್ತದೆ. ಏಕೆಂದರೆ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರವನ್ನು ನಿರ್ದೇಶಿಸಿದವರು ಪುಟ್ಟಣ್ಣ. ಚಂದ್ರಶೇಖರ್‌, ಜಯಂತಿ, ಆರತಿ ಮುಖ್ಯಯಲ್ಲಿ ನಟಿಸಿದ್ದ ಈ ಚಿತ್ರ ಅಂದು ದೊಡ್ಡ ಯಶಸ್ಸು ಕಂಡಿತ್ತು. ಈಗ ಮತ್ತೆ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರ ಸುದ್ದಿ ಮಾಡುತ್ತಿದೆ.

ಆದರೆ, ಇದು ಪುಟ್ಟಣ್ಣ ಕಣಗಾಲ್‌ ನಿರ್ದೇಶನದ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರವಲ್ಲ, ಸಂಪೂರ್ಣ ಹೊಸಬರೇ ಸೇರಿಕೊಂಡು ಮಾಡಿರುವ ಚಿತ್ರ. ಹೌದು, ಹಳೆಯ ಯಶಸ್ವಿ ಸಿನಿಮಾಗಳ ಶೀರ್ಷಿಕೆಗಳನ್ನಿಟ್ಟುಕೊಂಡು ಸಿನಿಮಾ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆ ಸಾಲಿಗೆ “ಎಡಕಲ್ಲು ಗುಡ್ಡದ ಮೇಲೆ’ ತಂಡ ಕೂಡಾ ಸೇರುತ್ತದೆ. ವಿವಿನ್‌ ಸೂರ್ಯ ಎನ್ನುವವರು ಹೊಸ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರದ ನಿರ್ದೇಶಕರು.

ಈಗಾಗಲೇ ಚಿತ್ರೀಕರಣ ಮುಗಿದಿದ್ದು, ಇತ್ತೀಚೆಗೆ ಚಿತ್ರದ ಆಡಿಯೋ ಬಿಡುಗಡೆಯಾಗಿದೆ. ನಿರ್ದೇಶಕ ವಿವಿನ್‌ ಹೇಳುವಂತೆ, ಪುಟ್ಟಣ್ಣ ಅವರ “ಎಡಕಲ್ಲು ಗುಡ್ಡದ ಮೇಲೆ’ ಚಿತ್ರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲವಂತೆ. “ನನಗೆ ಪುಟ್ಟಣ್ಣ ಅವರ ಚಿತ್ರದ ಟೈಟಲ್‌ ಮರುಬಳಕೆ ಮಾಡಿದರ ಕುರಿತು ಹೆಮ್ಮೆಯೂ ಇದೆ ಜೊತೆಗೆ ಎಚ್ಚರಿಕೆಯೂ ಇದೆ. ಆ ಟೈಟಲ್‌ನಡಿ ಸಿನಿಮಾದಲ್ಲಿ ಒಳ್ಳೆಯ ಅಂಶಗಳನ್ನೇ ಹೇಳಿದ್ದೇನೆ’ ಎನ್ನುವುದು ವಿವಿನ್‌ ಮಾತು.

ಚಿತ್ರದಲ್ಲಿ ತಂದೆ-ತಾಯಿಯ, ಸಂಬಂಧಗಳ ಮೇಲೆ ಪ್ರೀತಿ ತೋರಿಸದೇ, ಹಣ, ಆಸ್ತಿ ಹಿಂದೆ ಬಿದ್ದಾಗ ಏನೇನಾಗುತ್ತದೆ ಎಂಬ ಅಂಶವನ್ನಿಟ್ಟುಕೊಂಡು ಈ ಸಿನಿಮಾ ಮಾಡಿದ್ದಾರಂತೆ. ನಿರ್ದೇಶಕರಿಗೆ “ಎಡಕಲ್ಲು ಗುಡªದ ಮೇಲೆ’ ಚಿತ್ರದಲ್ಲಿ ನಟಿಸಿದ ಹಿರಿಯ ಕಲಾವಿದರಾದ ಚಂದ್ರಶೇಖರ್‌, ಜಯಂತಿ ಹಾಗೂ ಆರತಿಯವರನ್ನು ಈ ಚಿತ್ರದಲ್ಲೂ ಬಳಸಿಕೊಳ್ಳಬೇಕೆಂಬ ಆಸೆ ಇತ್ತಂತೆ. ಆದರೆ, ಜಯಂತಿ ಅವರ ಅನಾರೋಗ್ಯ ಹಾಗೂ ಆರತಿಯವರು ಸಂಪರ್ಕಕ್ಕೆ ಸಿಗದ ಕಾರಣ ಅವರಿಬ್ಬರನ್ನು ಬಳಸಿಕೊಳ್ಳಲಾಗಲಿಲ್ಲವಂತೆ.

ಚಂದ್ರಶೇಖರ್‌ ಅವರು ಇಲ್ಲಿ ನಾಯಕನ ಪಾತ್ರ ಮಾಡಿದ್ದಾಗಿ ಹೇಳಿಕೊಂಡರು ವಿವಿನ್‌. ಚಿತ್ರದಲ್ಲಿ ನಕುಲ್‌ ನಾಯಕರಾಗಿ ನಟಿಸಿದ್ದಾರೆ. ಸ್ವಾತಿ ಶರ್ಮಾ ನಾಯಕಿ. “ಇದೊಂದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಮೊದಲ ಚಿತ್ರದಲ್ಲೇ ನಟನೆಗೆ ಅವಕಾಶವಿರುವ ಪಾತ್ರ ಸಿಕ್ಕಿದ್ದು ನನ್ನ ಅದೃಷ್ಟ’ ಎನ್ನುವುದು ಸ್ವಾತಿ ಮಾತು. ಚಿತ್ರದಲ್ಲಿ ಹಿರಿಯ ನಟರಾದ ದತ್ತಣ್ಣ, ಮನ್‌ದೀಪ್‌ರಾಯ್‌, ರವಿಭಟ್‌, ಮೂಗು ಸುರೇಶ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. ಆಶಿಕ್‌ ಕಿರಣ್‌ ಸಂಗೀತ ಚಿತ್ರಕ್ಕಿದೆ. ಚಿತ್ರವನ್ನು ಜಿ.ಪಿ.ಪ್ರಕಾಶ್‌ ನಿರ್ಮಿಸಿದ್ದಾರೆ. 

ಟಾಪ್ ನ್ಯೂಸ್

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

PM Modi: ಕೊರೊನಾ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಫೋಟೋ ಕಣ್ಮರೆಯಾಗಿದ್ದೇಕೆ?

IMD

IMD; ರಾಜ್ಯದ 19 ಜಿಲ್ಲೆಗಳಿಗೆ ಬಿಸಿ ಗಾಳಿ ಮುನ್ಸೂಚನೆ : ಬೆಂಗಳೂರಿನಲ್ಲಿ ಮಳೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

jasti preethi kannada movie

Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

Mumbai: 45 ದಿನದಲ್ಲಿ 300 ಐಸ್‌ಕ್ರೀಂ ಆರ್ಡರ್‌ ಮಾಡಿದ!

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

Kolar: ಬಿಸಿಲಿನ ಝಳಕ್ಕೆ 2 ಸಾವಿರಕ್ಕೂ ಹೆಚ್ಚು ಕೋಳಿ ಸಾವು

19

Fraud: ಬೆಳಪು; ಹಣ ಪಡೆದು ಕಾಯಿಲ್‌ ನೀಡದೆ ವಂಚನೆ; ದೂರು ದಾಖಲು

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.