ಸಿಎಂ ಭೇಟಿಯಾಗಿ ಮೊಳಕಾಲ್ಮೂರು ಕೈ ಟಿಕೆಟ್ ಕೇಳಿದ ತಿಪ್ಪೇಸ್ವಾಮಿ
Team Udayavani, Apr 17, 2018, 1:35 PM IST
ಮೈಸೂರು: ಟಿಕೆಟ್ ಕೈತಪ್ಪಿದುದರಿಂದ ಸಂಸದ ಶ್ರೀರಾಮುಲು ವಿರುದ್ಧ ಬಂಡೆದ್ದಿರುವ ಮೊಳಕಾಲ್ಮೂರು ಶಾಸಕ ತಿಪ್ಪೇಸ್ವಾಮಿ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಟಿಕೆಟ್ ಪಡೆಯುವ ವಿಫಲ ಯತ್ನ ನಡೆಸಿದರು.
ಟಿ.ಕೆ.ಬಡಾವಣೆಯಲ್ಲಿರುವ ಸಿಎಂ ನಿವಾಸಕ್ಕೆ ಆಗಮಿಸಿದ ತಿಪ್ಪೇಸ್ವಾಮಿ ಅವರು ಕೆಲ ಕಾಲ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದರು.
ಮಾತುಕತೆಯ ಕುರಿ ತಾಗಿ ಪತ್ರಕರ್ತರು ಸಿಎಂ ಬಳಿ ಪ್ರಶ್ನಿಸಿದಾಗ ‘ತಿಪ್ಪೇಸ್ವಾಮಿ ಅವರು ಕಾಂಗ್ರೆಸ್ ಟಿಕೆಟ್ ಕೇಳಿದ್ದಾರೆ. ಕಾಲ ಮಿಂಚಿ ಹೋಗಿದೆ. ಟಿಕೆಟ್ ಕೊಡುವುದು ಸಾಧ್ಯವಿಲ್ಲ ಎಂದಿದ್ದೇನೆ. ನಾವು ಗೆಲ್ಲುವ ಅಭ್ಯರ್ಥಿಗೆ ಟಿಕೆಟ್ ನೀಡಿದ್ದೇವೆ’ ಎಂದರು.
ಮೊಳಕಾಲ್ಮೂರಿನಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ಬಿ.ಶ್ರೀರಾಮುಲು ಅವರನ್ನು ಸೋಲಿಸಲು ತಿಪ್ಪೇಸ್ವಾಮಿ ಇನ್ನಿಲ್ಲದ ಕಸರತ್ತುಗಳನ್ನು ಮಾಡುತ್ತಿದ್ದಾರೆ.
ಮೊಳಕಾಲ್ಮೂರಿನಲ್ಲಿ ಕಾಂಗ್ರೆಸ್ ಈಗಾಗಲೆ ಡಾ. ಬಿ. ಯೋಗೇಶ್ ಬಾಬು ಅವರಿಗೆ ಟಿಕೆಟ್ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ