ಮೀಸಲು ಕ್ಷೇತ್ರದ ಕಾಂಗ್ರೆಸ್‌ನಲ್ಲಿ ಬಂಡಾಯ


Team Udayavani, Apr 17, 2018, 4:08 PM IST

bid-1.jpg

ಔರಾದ: ವಿಧಾನಸಭೆ ಮೀಸಲು ಕ್ಷೇತ್ರದ ಕಾಂಗ್ರೆಸ್‌ ಟಿಕೆಟ್‌ ವಿಚಾರದಲ್ಲಿ ಸ್ಥಳೀಯ ಮುಖಂಡರು ಹಾಗೂ ಪಕ್ಷದ ಹಿರಿಯ ನಾಗರಿಕರ ಲೆಕ್ಕ ಉಲ್ಟಾ ಆಗಿದೆ. ಪಕ್ಷಕ್ಕಾಗಿ ನಿಷ್ಠೆಯಿಂದ ದುಡಿದ ಸ್ಥಳೀಯರಿಗೆ ಅವಕಾಶ ನೀಡುವಂತೆ ಹಿರಿಯ ಮುಖಂಡರು ದಿಲ್ಲಿಯಲ್ಲಿ ಠಿಕಾಣಿ ಹೂಡಿ ಬೇಡಿಕೆ ಇಟ್ಟಿದ್ದರೂ ಪ್ರಯೋಜನವಾಗಿಲ್ಲ.

ಈ ಹಿನ್ನೆಲೆಯಲ್ಲಿ ಸ್ಥಳೀಯ ನಾಲ್ವರು ಟಿಕೆಟ್‌ ವಂಚಿತರು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ಮುಂದಾಗಿದ್ದು, ತಾಲೂಕು ಕಾಗ್ರೆಸ್‌ ಪಕ್ಷದಲ್ಲಿ ಭಿನ್ನಮತದ ಸುನಾಮಿ ಆರಂಭವಾಗಿದೆ. ಮಾಜಿ ಶಾಸಕ ಗುಂಡಪ್ಪ ವಕೀಲ ನೇತೃತ್ವದಲ್ಲಿ ಬೀದರ ಮಾಜಿ ಸಂಸದ ನರಸಿಂಗರಾವ್‌ ಸೂರ್ಯವಂಶಿ ಸಾರಥ್ಯದಲ್ಲಿ ಸಂಜಯ ಸೂರ್ಯವಂಶಿ, ಡಾ|ಲಕ್ಷ್ಮಣ ಸೋರಳ್ಳಿಕರ್‌, ಸುಧಾಕರ್‌ ಕೊಳ್ಳುರ್‌, ಶಂಕರ ದೋಡ್ಡಿ, ರಾಮಣ್ಣ ವಡೇಯರ್‌ ಸೇರಿದಂತೆ 10 ಜನ ಸ್ಥಳೀಯ ಟಿಕೆಟ್‌ ಆಕಾಂಕ್ಷಿಗಳು ಈ ಭಾರಿ ಸ್ಥಳೀಯರಿಗೆ ಅವಕಾಶ ಕೋಡಿ ಎಂದು ವಾರದಿಂದ ಅಂಗಲಾಚಿ ಬೇಡಿಕೊಂಡರೂ ಸ್ಥಳಿಯ ಮುಖಂಡರ ಮಾತಿಗೆ ಪಕ್ಷದ ವರಿಷ್ಠರು ಬೆಲೆ ನೀಡಿಲ್ಲ. ಅದರಂತೆ ಸಿಎಂ ಆಪ್ತ ಕಾರ್ಯದರ್ಶಿ ನಿವೃತ್ತ ಅಧಿಕಾರಿ ಡಾ| ಭೀಮಸೇನರಾವ್‌ ಸಿಂದೆಗೆ ಟಿಕೆಟ್‌ ಸಿಗುವುದು ಬಹುತೇಕ ಖಚಿತವಾಗಿದೆ ಎಂದು ತಾಲೂಕಿನ ಪಕ್ಷದ ಮುಖಂಡರು ಜನ ಸಾಮಾನ್ಯರು ಅಂದುಕೊಂಡಿದ್ದರು. ಹಾಗಾಗಿ ಸಿಂದೆ ಈಗಾಗಲೇ ಆರೂ ತಿಂಗಳಿಂದ ತಾಲೂಕಿನ ಶೇ.80 ಗ್ರಾಮಗಳಿಗೆ ತೆರಳಿ ಜನರೊಂದಿಗೆ ಬೆರೆತು ಜನರ ಸಮಸ್ಯೆ ಬಗೆ ಹರಿಸುವ ಪ್ರಯತ್ನ ಮಾಡುತ್ತಿದ್ದರು. ಕೊನೆ ಕ್ಷಣದಲ್ಲಿ ಹೊಸ ರಾಜಕೀಯ ಸಂಚಲನ ನಡೆದು ಸಿಎಂ ಆಪ್ತಗೆ ಟಿಕೇಟ್‌ ಕೈ ತಪ್ಪಿ ತಾಲೂಕಿ ರಾಜಕೀಯ ಆಟ ಉಲ್ಟಾ ಆಗಿದೆ.

ಮೂಲತಃ ಕಾಂಗ್ರೆಸ್‌ ಅಭ್ಯರ್ಥಿ ವಿಜಯಕುಮಾರ ಕೌಡ್ಯಾಳ ಬಸವಕಲ್ಯಾಣ ತಾಲೂಕಿನ ರಾಯಿಬಾಗ್‌ ಗ್ರಾಮದವರಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಭೂಮಾಪನ ಇಲಾಖೆಯಲ್ಲಿ 11 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ವಿಜಯಕುಮಾರ ಕೌಡ್ಯಾಳ ತಾಯಿ ಸಂತೋಷಮ್ಮ ಕೌಡ್ಯಾಳ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಜಿಪಂ ಕ್ಷೇತ್ರದಿಂದ ಸ್ಪರ್ಧಿಸಿ ಬೀದರ ಜಿಲ್ಲಾ ಪಂಚಾಯತ ಅಧ್ಯಕ್ಷರಾಗಿ ಉತ್ತಮ ಆಡಳಿತ ನೀಡಿ, ಕಳೆದ ಜಿಪಂ ಚುನಾವಣೆಯಲ್ಲಿ ಔರಾದ ತಾಲೂಕಿನ ವಡಗಾಂವ ಜಿಪಂ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದಿಂದ ಸ್ಪರ್ಧಿಸಿ ಹಿನಾಯವಾಗಿ ಸೋಲು ಅನುಭವಿಸಿದ್ದರು. 

ಸಿಂದೆ ಟಿಕೆಟ್‌ ಕೈ ತಪ್ಪಿದೆಲ್ಲಿ : ಬೀದರ ದಕ್ಷಿಣ ಕ್ಷೇತ್ರದ ಅಭ್ಯರ್ಥಿ, ಮಾಜಿ ಶಾಸಕ ಅಶೋಕ ಖೇಣಿ ಪಕ್ಷ ಹಾಗೂ ನಮ್ಮನ್ನು ನಂಬಿಕೊಂಡು ಬಂದಿದ್ದಾರೆ. ಅದರಂತೆ ಔರಾದ ಕ್ಷೇತ್ರದಿಂದ ಸಿಂದೆಗೆ ಟಿಕೇಟ್‌ ನೀಡಲಾಗುತ್ತದೆ ಎಂದು ಅಭ್ಯರ್ಥಿಗಳ ಆಯ್ಕೆ ಸಮಿತಿಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದರು. ಇದಕ್ಕೆ ಮಲ್ಲಿಕಾರ್ಜುನ ಖರ್ಗೆ ವಿರೋಧ ಮಾಡಿದ್ದರು. ಬೀದರ ದಕ್ಷಿಣ ಕ್ಷೇತ್ರದಲ್ಲಿ ಧರ್ಮಸಿಂಗ್‌ ಅಳಿಯ ಚಂದ್ರಾಸಿಂಗ್‌ ಗೆ ಟಿಕೆಟ್‌ ನೀಡಿ ಎಂದು ಸಭೆಯಲ್ಲಿ ಖರ್ಗೆ ಸಿಎಂಗೆ ಮನವಿ ಮಾಡಿದಾಗ, ಬೀದರ ದಕ್ಷೀಣ ಕ್ಷೇತ್ರದಿಂದ ಅಶೋಕ ಖೇಣಿಯನ್ನು ಬಿಟ್ಟು ಬೇರೆ ಯಾರಿಗೂ ಟಿಕೇಟ್‌ ನೀಡಲು ಸಾಧ್ಯವಿಲ್ಲ ಎಂದು ಸಿಎಂ ಪಟ್ಟು ಹಿಡಿದು, ಔರಾದ ಮೀಸಲು ಕ್ಷೇತ್ರದಲ್ಲಿ ಖರ್ಗೆ ಬೆಂಬಲಿಗ ವಿಜಯಕುಮಾರ ಕೌಡ್ಯಾಳಗೆ ಟಿಕೆಟ್‌ ನೀಡಲಾಗಿದೆ ಎಂದು ಪಕ್ಷದ ಆಂತರಿಕ ಮೂಲಗಳಿಂದ ತಿಳಿದು ಬಂದಿದೆ.

ಭಿನ್ನಮತ ಶುರು: ತಾಲೂಕಿನಲ್ಲಿರುವ 10 ಜನ ಟಿಕೆಟ್‌ ಆಕಾಂಕ್ಷಿಗಳಲ್ಲಿ ಒಬ್ಬರಿಗಾದರೂ ಟಿಕೆಟ್‌ ನೀಡಿ ಎಂದು ಮಾಜಿ ಶಾಸಕ ಹಾಗೂ ಮಾಜಿ ಸಂಸದರು ನಡೆಸಿದ ಪ್ರಯತ್ನಗಳು ವಿಫಲವಾಗಿವೆ. ಇದರಿಂದ ತಾಲೂಕು ಕೈ ಪಾಳಯದಲ್ಲಿ 4 ಜನ ಟಿಕೆಟ್‌ ವಂಚಿತರು ಬಂಡಾಯ ಅಭ್ಯರ್ಥಿಯಾಗಿ ಚುನಾವಣಾ ಕಣ ಪ್ರವೇಶ ಮಾಡಲಿದ್ದಾರೆ. ಇದರಿಂದ ತಾಲೂಕು ಕಾಂಗ್ರೆಸ್‌ ಪಕ್ಷ ಐದು ಹೋಳಾಗುವುದು ಬಹುತೇಕ ಖಚಿತವಾಗಿದೆ. 

ಉತ್ಸಾಹ ಕಮ್ಮಿ: ಮೀಸಲು ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ವಿಜಯಕುಮಾರ ಕೌಡ್ಯಾಳ ಎಂದು ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ನಿರಾಶೆಯಾಗಿರುವುದು ಒಂದಡೆಯಾಗಿದ್ದರೆ, ಇನ್ನೂಂದೆಡೆ ಸ್ಥಳೀಯರಿಗೆ ಈ ಬಾರಿಯೂ ಟಿಕೇಟ್‌ ಸಿಕ್ಕಿಲ್ಲ ಎನ್ನುವ ಕೊರಗು ಹೆಚ್ಚಾಗಿ, ಜನರಲ್ಲಿ ಹಾಗೂ ಪಕ್ಷದ ಮುಖಂಡರಲ್ಲಿಯೂ ಉತ್ಸಾಹ ಕಡಿಮೆಯಾಗಿದೆ.

ತಾಲೂಕು ಕಾಂಗ್ರೆಸ್‌ ಪಕ್ಷದಲ್ಲಿ ಉಂಟಾದ ಭಿನ್ನಮತ ಸರಿ ಪಡಿಸಿಕೊಳ್ಳಲು ಮುಂದಾಗದೇ ಇದ್ದಲ್ಲಿ ಪಕ್ಷಕ್ಕೆ ತಾಲೂಕಿನಲ್ಲಿ ವಿಧಾನಸಭೆ ಚುನಾವಣೆ ಮೂಲಕವೇ ದೊಡ್ಡ ಹೊಡೆತ ಬೀಳುವುದು ಬಹುತೇಕ ಖಚಿತವಾಗಿದೆ.

ಸ್ಪರ್ಧೆಗೆ ಸಿದ್ದ: ಸ್ಥಳೀಯರಿಗೆ ಟಿಕೆಟ್‌ ನೀಡದೆ ಇರುವ ಹಿನ್ನೆಲೆಯಲ್ಲಿ ಗುಂಡಪ್ಪ ವಕೀಲರ ಆಪ್ತ ಬೆಂಬಲಿಗ ಹಾಗೂ ಪಟ್ಟಣದ ನಿವಾಸಿ ರಾಮಣ್ಣ ವಡೆಯರ್‌ ಹಾಗೂ ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಟಿಕೆಟ್‌ ಕೈ ತಪ್ಪಿ ಈ ಸಲವಾದರೂ ಸಿಗುತ್ತದೆ ಎನ್ನುವ ತವಕದಲ್ಲಿದ್ದ ಕಾಂಗ್ರೆಸ್‌ ಮುಖಂಡ ಡಾ| ಲಕ್ಷ್ಮಣ ಸೋರಳಿಕರ್‌, ಯುವ ಕಾಂಗ್ರೆಸ್‌ ಜಿಲ್ಲಾ ಉಪಾಧ್ಯಕ್ಷ ಸುಧಾಕರ ಕೊಳ್ಳುರ್‌, ಬಂಡಾಯ ಅಭ್ಯರ್ಥಿಯಾಗಿ ಚುನಾವಣೆ ಕಣಕ್ಕೆ ಇಳಿಯಲ್ಲಿದ್ದಾರೆ. ಇನ್ನೂ ಸಿಎಂ ಆಪ್ತ ಡಾ| ಭೀಮಸೇನರಾವ್‌ ಸಿಂದೆ ತಾಲೂಕಿನ
ಜನರೊಂದಿಗೆ ಹಾಗೂ ಪಕ್ಷದ ಮುಖಂಡರೊಂದಿಗೆ ಎರಡು ದಿನಗಳಲ್ಲಿ ಸಭೆ ನಡೆಸಿ ಅಂತಿಮ ನಿಲುವು ತಿಳಿಸುವುದಾಗಿ ಹೇಳಿದ್ದಾರೆ.

„ರವೀಂದ್ರ ಮುಕ್ತೇದಾರ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.