ರವಿಕಾಂತ-ನಡಹಳ್ಳಿ ಪತ್ನಿಗೆ ಒಲಿಯದ ಕಮಲ


Team Udayavani, Apr 17, 2018, 4:56 PM IST

vij-1.jpg

ವಿಜಯಪುರ: ರಾಜ್ಯ ವಿಧಾಸನಸಭೆ ಚುನಾವಣೆಗಾಗಿ ಬಿಜೆಪಿ ಪ್ರಕಟಿಸಿರುವ ಎರಡನೇ ಪಟ್ಟಿಯಲ್ಲಿ ಮತ್ತೆ ಎರಡು ಕ್ಷೇತ್ರಗಳಿಗೆ ಟಿಕೆಟ್‌ ಘೋಷಿಸಿದ್ದು, ಮಾಜಿ ಶಾಸಕ ರವಿಕಾಂತ ಪಾಟೀಲ ಹಾಗೂ ಶಾಸಕ ನಡಹಳ್ಳಿ ಪತ್ನಿ ಮಹಾದೇವಿ ಅವರಿಗೆ ಕಮಲದ ಟಿಕೆಟ್‌ ಕೈ ತಪ್ಪಿದೆ.

ಬಿಜೆಪಿ ಪ್ರಕಟಿಸಿರುವ ಎರಡನೇ ಪಟ್ಟಿಯಲ್ಲಿ ಇಂಡಿ ಕ್ಷೇತ್ರದಿಂದ ಕಿಸಾನ್‌ ಮೋರ್ಚಾ ಜಿಲ್ಲಾಧ್ಯಕ್ಷ ದಯಾಸಾಗರ ಪಾಟೀಲ ಅವರಿಗೆ ಮಣೆ ಹಾಕಿದ್ದು, ದೇವರಹಿಪ್ಪರಗಿ ಕ್ಷೇತ್ರದಲ್ಲಿ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಸೋಮನಗೌಡ ಪಾಟೀಲ ಸಾಸನೂರ ಅವರ ಹೆಸರುಗಳನ್ನು ಪ್ರಟಿಸಲಾಗಿದೆ. 

ಇದರಿಂದ ಇಂಡಿ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಸತತ ಮೂರು ಬಾರಿ ಪಕ್ಷೇತರರಾಗಿ ಗೆದ್ದಿದ್ದ ಮಾಜಿ ಶಾಸಕ ರವಿಕಾಂತ ಪಾಟೀಲ ಟಿಕೆಟ್‌ ಕೈ ತಪ್ಪಿರುವುದು ನಿರಾಸೆಗೆ ದೂಡಿದೆ. ಕಳೆದ ಬಾರಿ ಕೆಜೆಪಿ ಅಭ್ಯರ್ಥಿಯಾಗಿದ್ದ ರವಿಕಾಂತ ಪಾಟೀಲ ಈ ಬಾರಿ ಯಡಿಯೂರಪ್ಪ ಅವರು ತಮಗೆ ಟಿಕೆಟ್‌ ಕೊಡಿಸುತ್ತಾರೆ ಎಂಬ ವಿಶ್ವಾಸದಲ್ಲಿದ್ದರು. ಇಂಡಿ ಪಟ್ಟಣದಲ್ಲಿ ನಡೆದ ಪಕ್ಷದ ಸಮಾರಂಭದಲ್ಲಿ ರವಿಕಾಂತ ಪಾಟೀಲ ಹಾಗೂ ವಿರೋಧಿ ಬಣ ಪರಸ್ಪರ ಕೈ ಕೈ ಮಿಲಾಯಿಸಿಕೊಳ್ಳುವ ಮೂಲಕ ಪ್ರತಿಷ್ಠೆಗೆ ಬಿದ್ದಿದ್ದವು. ಆದರೆ ಪಕ್ಷ ಕಟ್ಟಿರುವ ಆಕಾಂಕ್ಷಿಗಳಲ್ಲೇ ಯಾರಿಗಾದರೂ ಒಬ್ಬರಿಗೆ ಟಿಕೆಟ್‌ ಕೊಡಬೇಕು.

ಹೊರಗಿನಿಂದ ಬಂದಿರುವ ರವಿಕಾಂತ ಪಾಟೀಲ ಅವರಿಗೆ ಟಿಕೆಟ್‌ ನೀಡಿದಲ್ಲಿ ಟಿಕೆಟ್‌ ಆಕಾಂಕ್ಷಿಗಳಾಗಿರುವ ಎಲ್ಲರೂ ಸೇರಿ ಒಮ್ಮತದಿಂದ ಬಂಡಾಯ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದಾಗಿ ಪ್ರಕಟಿಸಿದ್ದರು. ಇದರ ಬೆನ್ನ ಹಿಂದೆಯೇ ಕೇಂದ್ರ ಸಚಿವ ರಮೇಶ ಜಿಗಜಿಣಗಿ ಅವರ ಬೆಂಬಲಿಗ ದಯಾಸಾಗರ ಅವರಿಗೆ ಕಮಲ ಒಲಿದಿದೆ. ಹೀಗಾಗಿ ಪ್ರಬಲ ಟಿಕೆಟ್‌ ಆಕಾಂಕ್ಷಿ ಮಾಜಿ ಶಾಸಕ ರವಿಕಾಂತ ಪಾಟೀಲ ನಡೆ ಕುತೂಹಲ ಮೂಡಿಸಿದೆ. 

ರೌಡಿಶೀಟ್‌ ಓಪನ್‌?: ಈ ಮಧ್ಯೆ ಇಂಡಿ ಕ್ಷೇತ್ರದಿಂದ ಕಾಂಗ್ರೆಸ್‌ ಬಂಡಾಯ ಸ್ಪರ್ಧೆ ಘೋಷಿಸಿದ್ದ ಮಹಾದೇವ ಭೈರಗೊಂಡ ವಿರುದ್ಧ ರೌಡಿಶೀಟರ್‌ ಓಪನ್‌ ಮಾಡಿ ಬಂಧಿಸಲಾಗಿದೆ. ಮರಳು ಮಾಫೀಯಾ ಮೂಲಕ ಅಕ್ರಮ ಹಣ ಸಂಪಾದಿಸಿ ಚುನಾವಣೆಗೆ ಸ್ಪರ್ಧಿಸಲು ಮುಂದಾಗಿದ್ದಾರೆ ಎಂದು ಐಜಿಪಿ ಅಲೋಕಕುಮಾರ ಹೇಳಿದ್ದರು. ಇದರ ಬೆನ್ನ ಹಿಂದೆಯೇ ಮರಳು ಮಾಫಿಯಾ ವಿಷಯವಾಗಿಯೇ ವ್ಯಕ್ತಿಯೊಬ್ಬರ ವಿರುದ್ಧ ಕೊಲೆಯತ್ನದ ಆರೋಪದಲ್ಲಿ ಜೈಲು ಸೇರಿ, ಜಾಮೀನಿನ ಮೇಲೆ ಹೊರ ಬಂದಿರುವ ರವಿಕಾಂತ ಪಾಟೀಲ ವಿರುದ್ಧವೂ ಪೊಲೀಸರು ರೌಡಿಶೀಟರ್‌ ತೆರೆದಿದ್ದಾರೆ. ಬಿಜೆಪಿ ಟಿಕೆಟ್‌ ವಂಚಿತ ರವಿಕಾಂತ ಪಾಟೀಲ ಪಕ್ಷೇತರರಾಗಿ ಸ್ಪರ್ಧೆಗೆ ಮುಂದಾದರೆ ಅವರ ಬಂಧನಕ್ಕೆ ಪೊಲೀಸರು ಸಿದ್ಧತೆ ಮಾಡಿಕೊಂಡಿರುವ ಸುದ್ದಿ ಹರಡಿದೆ. ಇದೇ ಕಾರಣಕ್ಕೆ ಬಿಜೆಪಿ ಟಿಕೆಟ್‌ ಕೈ ತಪ್ಪಿದ್ದು ಒಂದೊಮ್ಮೆ ಪಕ್ಷೇತರ ಸ್ಪರ್ಧೆಗೆ ಮುಂದಾದಲ್ಲಿ ರವಿಕಾಂತ ಅವರನ್ನು ಪೊಲೀಸರು ಬೆನ್ನು ಬೀಳುವ ಸಾಧ್ಯತೆ ಇಲ್ಲದಿಲ್ಲ. ನಡಹಳ್ಳಿ ಪತ್ನಿಗಿಲ್ಲ ಟಿಕೆಟ್‌: ಇತ್ತ ನಿರೀಕ್ಷೆಯಂತೆ ದೇವರಹಿಪ್ಪರಗಿ ಕ್ಷೇತ್ರದಲ್ಲಿ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಸೋಮನಗೌಡ ಪಾಟೀಲ ಸಾಸನೂರ ಅವರಿಗೆ ಬಿಜೆಪಿ ಮತ್ತೂಂದು ಅವಕಾಶ ಕಲ್ಪಿಸಿದೆ.

ಇದರೊಂದಿಗೆ ತಮ್ಮ ಪತ್ನಿ ಮಹಾದೇವಿ ಅವರಿಗೆ ಟಿಕೆಟ್‌ ಕೊಡದ ಕಾರಣ ಬಿಜೆಪಿ ಸಹ ಶಾಸಕ ನಡಹಳ್ಳಿಗೆ ಅವರಿಗೆ ನಿರಾಶೆ ಮೂಡಿಸಿದೆ. ಕಾಂಗ್ರೆಸ್‌ ಉಚ್ಚಾಟಿತ ಶಾಸಕ ಎ.ಎಸ್‌. ಪಾಟೀಲ ನಡಹಳ್ಳಿ ಮುದ್ದೇಬಿಹಾಳ ಕ್ಷೇತ್ರದಿಂದ ಜೆಡಿಎಸ್‌ ಟಿಕೆಟ್‌ ಘೋಷಿಸಿದ್ದರೂ ತಮ್ಮ ಪತ್ನಿಗೆ ದೇವರಹಿಪ್ಪರಗಿ ಕ್ಷೇತ್ರದಲ್ಲಿ ಟಿಕೆಟ್‌ ನೀಡಲಿಲ್ಲ ಎಂಬ ಕಾರಣಕ್ಕೆ ಜೆಡಿಎಸ್‌ ತೊರೆದು ಬಿಜೆಪಿ ಸೇರಿದ್ದರು. ಇದೀಗ ಬಿಜೆಪಿಯಲ್ಲೂ ಅವರ ಪತ್ನಿಗೆ ದೇವರಹಿಪ್ಪರಗಿ ಕ್ಷೇತ್ರದಲ್ಲಿ ಟಿಕೆಟ್‌ ಕೈ ತಪ್ಪಿ ಮತ್ತದೇ ಹಿನ್ನಡೆ ಆಗಿದೆ. ಹೀಗಾಗಿ ನಡಹಳ್ಳಿ ನಡೆ ಈಗ ಹೇಗಿರುತ್ತದೆ ಎಂದು ಕುತೂಹಲ ಮೂಡಿಸಿದೆ.

ಇತ್ತ ವಿಜಯಪುರ ನಗರ ಕ್ಷೇತ್ರದಿಂದ ಮೊದಲ ಪಟ್ಟಿಯಲ್ಲಿ ಮೇಲ್ಮನೆ ಸದಸ್ಯ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಟಿಕೆಟ್‌ ನೀಡಿದ್ದು, ಬಿಜೆಪಿ ಟಿಕೆಟ್‌ ವಂಚಿತರಾಗಿ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ ಅತೃಪ್ತಿ ಹೊರ ಹಾಕಿದ್ದಾರೆ. ಈಗಾಗಲೇ
ಬೆಂಬಲಿಗರ ಸಭೆ ನಡೆಸಿರುವ ಅವರು, ಎರಡನೇ ಪಟ್ಟಿ ಬಿಡುಗಡೆ ಬಳಿಕ ನಿರ್ಧಾರ ಪ್ರಕಟಿಸುವ ಹೇಳಿಕೆ ನೀಡಿದ್ದರು. ಇದೀಗ ಅವರ ನಿರೀಕ್ಷೆ ಹುಸಿಯಾಗಿದ್ದು ಪಟ್ಟಣಶೆಟ್ಟಿ ಬಂಡಾಯದ ಬಾವುಟ ಹಾರಿಸುವುದು ಖಚಿತವಾಗಿದೆ.

„ಜಿ.ಎಸ್‌. ಕಮತರ

ಟಾಪ್ ನ್ಯೂಸ್

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Vijayapura; ಚುನಾವಣೆ ಕರ್ತವ್ಯ ನಿರ್ಲಕ್ಷ: ಇಬ್ಬರು ಶಿಕ್ಷಕರು ಸಸ್ಪೆಂಡ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.