ಏಶ್ಯನ್ ಗೇಮ್ಸ್ ಸವಾಲಿಗೆ ಕಠಿನ ಪ್ರಯತ್ನ: ಜೋತ್ಸ್ನಾ ಚಿನ್ನಪ್ಪ
Team Udayavani, Apr 18, 2018, 6:15 AM IST
ಚೆನ್ನೈ: ಕಾಮನ್ವೆಲ್ತ್ ಗೇಮ್ಸ್ನಲ್ಲಿ ಬೆಳ್ಳಿಯ ಪದಕ ಗೆದ್ದಿರುವ ಭಾರತದ ಯಶಸ್ವಿ ಸ್ಕ್ವಾಷ್ ಆಟಗಾರ್ತಿಯರಾದ ಜೋತ್ಸ್ನಾ ಚಿನ್ನಪ್ಪ ಮತ್ತು ದೀಪಿಕಾ ಪಳ್ಳಿಕಲ್ ಅವರು ಚೆನ್ನೈಗೆ ಆಗಮಿಸಿದಾಗ ಹಾರ್ದಿಕವಾಗಿ ಸ್ವಾಗತಿಸಲಾಯಿತು.
ವನಿತೆಯರ ಡಬಲ್ಸ್ ಸ್ಪರ್ಧೆಯಲ್ಲಿ ಜೋತ್ಸ್ನಾ ಮತ್ತು ದೀಪಿಕಾ ಬೆಳ್ಳಿಯ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದರು. ದೀಪಿಕಾ ಈ ಮೊದಲು ಮಿಕ್ಸೆಡ್ ಡಬಲ್ಸ್ನಲ್ಲಿ ಸೌರವ್ ಘೋಷಲ್ ಜತೆಗೂಡಿ ಬೆಳ್ಳಿಯ ಪದಕ ಜಯಿಸಿದ್ದರು.
ನಾಲ್ಕು ವರ್ಷಗಳ ಹಿಂದಿನ ಸಾಧನೆಯ ಆಲೋಚನೆ ಪಂದ್ಯದ ವೇಳೆ ಮನಸ್ಸಿಗೆ ಬಂದಿಲ್ಲ. ಕಳೆದ ನಾಲ್ಕು ವರ್ಷಗಳಲ್ಲಿ ಸ್ಕ್ವಾಷ್ ಆಟದಲ್ಲಿ ಗಮನಾರ್ಹ ಬದಲಾವಣೆಯಾಗಿವೆ. ಗ್ಲಾಸೊYàದಲ್ಲಿ ನಾವು ಚಿನ್ನ ಜಯಿಸಿದ್ದೆವು. ಅದನ್ನು ಈ ಬಾರಿ ಉಳಿಸಿಕೊಳ್ಳಲು ನಾವು ಪ್ರಯತ್ನಿಸಿದ್ದೆವು. ಆದರೆ ಯಶಸ್ಸು ಸಾಧಿಸಲು ಆಗಲಿಲ್ಲ ಎಂದು ಜೋತ್ಸ್ನಾ ತಿಳಿಸಿದರು.
ಆಗಸ್ಟ್ನಲ್ಲಿ ನಡೆಯುವ ಏಶ್ಯನ್ ಗೇಮ್ಸ್ನಲ್ಲಿ ಪದಕ ಗೆಲ್ಲಲು ಕಠಿನ ಪ್ರಯತ್ನ ನಡೆಸಲಿದ್ದೇವೆ. ಕಾಮನ್ವೆಲ್ತ್ ಗೇಮ್ಸ್ನ ಪದಕ ಗೆಲುವು ಇದಕ್ಕೆ ಸ್ಫೂರ್ತಿ ನೀಡಲಿದೆ ಎಂದವರು ಹೇಳಿದರು. ಬರಿಗೈಯಲ್ಲಿ ಬಾರದಿರುವುದು ನಮಗೆ ಸಮಾಧಾನವನ್ನುಂಟು ಮಾಡಿದೆ ಎಂದು ದೀಪಿಕಾ ಹೇಳಿದರು.
ಪದಕ ವಿಜೇತ ತಮಿಳುನಾಡಿನ ಆಟಗಾರರಿಗೆ ಮುಖ್ಯಮಂತ್ರಿ ಕೆ. ಪಲನಿಸ್ವಾಮಿ ನಗದು ಬಹುಮಾನ ಪ್ರಕಟಿಸಿದ್ದಾರೆ. ಜೋತ್ಸ್ನಾ ಚಿನ್ನಪ್ಪ (30 ಲಕ್ಷ ರೂ.), ದೀಪಿಕಾ ಪಳ್ಳಿಕಲ್ (60 ಲಕ್ಷ ರೂ.) ಮತ್ತು ಸೌರವ್ ಘೋಷಲ್ ಅವರಿಗೆ 30 ಲಕ್ಷ ರೂ. ನೀಡಲಾಗುತ್ತದೆ. ಟೇಬಲ್ ಟೆನಿಸ್ ಆಟಗಾರರಾದ ಶರತ್ ಕಮಲ್, ಜಿ. ಸತಿಯನ್ ಅವರಿಗೆ ನಗದು ಬಹುಮಾನ ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ
T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ
Paris Olympics: ಪ್ಯಾರಿಸ್ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ
IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ
IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್ಗಳ ಜಯ
MUST WATCH
ಹೊಸ ಸೇರ್ಪಡೆ
Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ…
Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್ ಅಂಡರ್ಪಾಸ್
Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?
Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ