ನೀರು ಸಿಗದ ಹಿನ್ನೆಲೆ: ಕೋಲಾರದಲ್ಲಿ ನೋಟಾ ಪರ ಪ್ರಚಾರ


Team Udayavani, Apr 18, 2018, 6:35 AM IST

NOTA-Kolar.jpg

ಕೋಲಾರ: ಜಿಲ್ಲಾ ಕೇಂದ್ರವನ್ನೊಳಗೊಂಡ ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಮುಳುಗಿರುವಾಗಲೇ ನೋಟಾ ಪರ ಪ್ರಚಾರ ಭರ್ಜರಿಯಾಗಿಯೇ ಸಾಗಿದೆ.

ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಮೂರೂ ರಾಜಕೀಯ ಪಕ್ಷಗಳಿಂದ ಇದುವರೆಗೂ ಅಭ್ಯರ್ಥಿಗಳ ಆಯ್ಕೆ ನಡೆಯದ ಕಾರಣ ಯಾವ ಪಕ್ಷದಿಂದಲೂ ತಮಗೆ ಮತ ಹಾಕಿ ಎಂದು ಮತದಾರರನ್ನು ಕೇಳುವವರಿಲ್ಲದಂತಾಗಿದೆ. ಈ ನಡುವೆ, ಶಾಶ್ವತ ನೀರಾವರಿ ಹೋರಾಟ ಸಮಿತಿ ಮುಖಂಡರು ಮಾತ್ರ ನೋಟಾಗೆ ಮತ ಚಲಾಯಿಸಿ ಎಂದು ಪ್ರಚಾರ ನಡೆಸುತ್ತಿದ್ದಾರೆ. ಕೋಲಾರ ವಿಧಾನಸಭಾ ಕ್ಷೇತ್ರದ ಮತದಾರರು ನೋಟಾಗೆ ಮತ ಚಲಾಯಿಸುವ ಮೂಲಕ ಶಾಶ್ವತ ನೀರಾವರಿ ಬೇಡಿಕೆಯ ವಿಚಾರದಲ್ಲಿ ಸರಕಾರ ಹಾಗೂ ದೇಶದ ಗಮನ ಸೆಳೆಯ ಬಹುದು ಎಂಬ ಉದ್ದೇಶವನ್ನಿಟ್ಟುಕೊಂಡು ಸಾಮಾ ಜಿಕ ಜಾಲತಾಣಗಳಲ್ಲೂ ನೋಟಾ ಪರ ಪ್ರಚಾರ ನಡೆಸಲಾಗುತ್ತಿದೆ.

ಕೋಲಾರ ಜಿಲ್ಲೆಯಲ್ಲಿ ಶಾಶ್ವತ ನೀರಾವರಿ ಹೋರಾಟ ಆರಂಭವಾಗಿ ಹದಿನೆಂಟು ವರ್ಷಗಳೇ ಕಳೆದಿವೆ.ಹೋರಾಟದ ಆರಂಭದಿಂದಲೂ ಶಾಶ್ವತ ನೀರಾವರಿ ಹೋರಾಟಕ್ಕೆ ಹಲವಾರು ರಾಜಕಾರಣಿಗಳು ಧುಮುಕುವುದು, ಚುನಾವಣೆಯಲ್ಲಿ ಅವರಿಗೆ ಅಧಿಕಾರ ಸಿಕ್ಕ ನಂತರ ಹೋರಾಟವನ್ನು ಮರೆಯುವುದು ಹಿಂದಿನ ಅನೇಕ ಚುನಾವಣೆಗಳಿಂದ ರೂಢಿಯಾಗಿಬಿಟ್ಟಿದೆ.

ನೀರಾವರಿ ಹೋರಾಟಕ್ಕೆ 18 ವರ್ಷದ ಇತಿಹಾಸ: ಇತ್ತೀಚಿನ ದಿನಗಳಲ್ಲಿ ಅಧಿಕಾರಕ್ಕೆ ಬರುವ ಮುನ್ನ ಎಲ್ಲಾ ರಾಜಕೀಯ ಪಕ್ಷಗಳು ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸುವ ಕುರಿತು ಭರವಸೆಗಳನ್ನು ನೀಡುತ್ತಲೇ ಭಾಷಣ ಆರಂಭಿಸುತ್ತಾರೆ. ಆದರೆ, ಅಧಿಕಾರದಲ್ಲಿ ಇರುವಾಗ ಶಾಶ್ವತ ನೀರಾವರಿ ವಿಚಾರವನ್ನು ಪೂರ್ಣವಾಗಿ ಕಡೆಗಣಿಸಿರುವುದಕ್ಕೆ 18 ವರ್ಷಗಳ ಇತಿಹಾಸವೇ ಇದೆ. ಇದನ್ನು ಗಮನಿಸಿದ ಯುವಕರ ಪಡೆ ರಾಜಕೀಯ ರಹಿತವಾಗಿ 2016ರ ಜೂ.12ರಂದು ನಟ ಶಿವರಾಜ್‌ ಕುಮಾರ್‌ ನೇತೃತ್ವದಲ್ಲಿ ಶಾಶ್ವತ ನೀರಾವರಿ ಹೋರಾಟದ ನಿತ್ಯ ಧರಣಿ ಆರಂಭಿಸಿದ್ದರು.

ಕೋಲಾರಕ್ಕೆ ಅಧಿಕೃತ ಪ್ರವಾಸ ನಿಮಿತ್ತ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಂತರ ಧರಣಿ ಸ್ಥಳಕ್ಕೆ ಭೇಟಿ ಕೊಟ್ಟರಾದರೂ, ಶಾಶ್ವತ ನೀರಾವರಿ ವಿಚಾರದಲ್ಲಿ ಸ್ಪಷ್ಟ ಭರವಸೆ ನೀಡುವುದರ ಬದಲು, ಧರಣಿಯನ್ನು ಕೊನೆಗಾಣಿಸುವಂತೆ ಮನವಿ ಮಾಡಿದ್ದರು. ಆದರೆ, ಇದಕ್ಕೆ ಸಮ್ಮತಿಸದ ನೀರಾವರಿ ಹೋರಾಟಗಾರರು 1 ವರ್ಷ ಹೋರಾಟ ಜೀವಂತವಾಗಿಟ್ಟಿದ್ದರು.

ಧರಣಿ ಸ್ಥಳಕ್ಕೆ ಭೇಟಿ ನೀಡದ ಮುಖಂಡರು ಶುದಟಛಿ ಕುಡಿಯುವ ನೀರು ಹಾಗೂ ಶಾಶ್ವತ ನೀರಾವರಿ ಯೋಜನೆಗಳ ಬೇಡಿಕೆಯನ್ನಿಟ್ಟು ಕೊಂಡು ನೀರಾವರಿ ಹೋರಾಟ ಸಮಿತಿ ಧರಣಿ ನಡೆಸುತ್ತಿರುವ ಕುರಿತು ಸಮಿತಿ ಮುಖಂಡರು ಖುದ್ದು ಮಾಹಿತಿ ನೀಡಿದರೂ, ಕಾಂಗ್ರೆಸ್‌ ಪಕ್ಷದ ರಾಜ್ಯಾಧ್ಯಕ್ಷ ಪರಮೇಶ್ವರ್‌ ಆಗಲಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಆಗಲಿ, ಬಿಜೆಪಿ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಆಗಲಿ ಒಂದು ದಿನವೂ ಧರಣಿ ಸ್ಥಳಕ್ಕೆ ಭೇಟಿ ನೀಡಿ, ಸಮಸ್ಯೆ ಬಗ್ಗೆ ವಿಚಾರಿಸಲಿಲ್ಲ ಎಂಬುದು ಶಾಶ್ವತ ನೀರಾವರಿ ಹೋರಾಟಗಾರರ ಆಕ್ರೋಶ. 

ನೀರಾವರಿ ಹೋರಾಟಕ್ಕೆ ಯಾವುದೇ ಪಕ್ಷದ ಮುಖಂಡರು ಸ್ಪಂದಿಸಲಿಲ್ಲ. ನಮ್ಮ ಬೇಡಿಕೆ ಕೇಳಲಿಲ್ಲ. ಆದ್ದರಿಂದ, ನೋಟಾಗೆ 10,000ಕ್ಕಿಂತ ಹೆಚ್ಚು ಮತಗಳು ಚಲಾವಣೆಯಾಗುವಂತೆ ಮಾಡಿ ದೇಶದ ಗಮನ ಸೆಳೆಯಲು ಕ್ಷೇತ್ರದ ಮತದಾರರಲಿ ಮನವಿ ಮಾಡಲಾಗುತ್ತಿದೆ.
– ಕುರುಬರಪೇಟೆ ವೆಂಕಟೇಶ್‌, ನೀರಾವರಿ
ಹೋರಾಟ ಸಮಿತಿ ಮುಖಂಡ

– ಕೆ ಎಸ್‌ ಗಣೇಶ್‌

ಟಾಪ್ ನ್ಯೂಸ್

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ

Kasaragod ಜಿಲ್ಲೆಯಾದ್ಯಂತ ಮಳೆ; ಹೆದ್ದಾರಿಯಲ್ಲಿ ಸಂಚಾರ ದುಸ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

ಅಧಿಕಾರ ಸಿಗದಕ್ಕೆ ಎಚ್‌ಡಿಕೆ ಹತಾಶರಾಗಿ ಮಾತನಾಡುತ್ತಿದ್ದಾರೆ: ಡಿಕೆಶಿ ಲೇವಡಿ

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

“Phone Tapping’ ಮಾಡಿಲ್ಲ; ಮಾಹಿತಿ ಕೊಟ್ಟರೆ ತನಿಖೆ: ಪರಮೇಶ್ವರ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Slander about Malabar group: Mumbai High Court harsh verdict

Malabar group ಬಗ್ಗೆ ಅಪಪ್ರಚಾರ:  ಮುಂಬಯಿ ಹೈಕೋರ್ಟ್‌ ಕಠಿನ ತೀರ್ಪು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.