ತೊಡಿಕಾನ: ಮೀನಿಗೆ ಖುಷಿ ತಂದ ಮಳೆ


Team Udayavani, Apr 19, 2018, 6:20 AM IST

Fish-888.jpg

ಬೆಳ್ಳಾರೆ: ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದಲ್ಲಿ ನಾಲ್ಕೈದು ದಿನಗಳಿಂದ ಮಳೆ ಸುರಿದಿದ್ದು, ಈ ಬಾರಿ ತೊಡಿಕಾನ ಜಾತ್ರೆ ಸಂಭ್ರಮದಲ್ಲಿ ಭಕ್ತರಿಗೆ ದೇವರ ಮೀನುಗಳನ್ನು ನೋಡಿ, ಅವುಗಳಿಗೆ ಅಹಾರ ಹಾಕುವ ಅವಕಾಶ ಲಭ್ಯವಾಗಲಿದೆ.

ಸುಳ್ಯದ ಸೀಮೆ ದೇವಾಲಯವಾದ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲ ಯಕ್ಕೆ ಒಳಪಟ್ಟ ಮತ್ಸ್ಯತೀರ್ಥ ಹೊಳೆಯಲ್ಲಿ ಸಾವಿರಾರು ದೇವರ ಮೀನುಗಳಿವೆ. ಮಹಾವಿಷ್ಣು ಮತ್ಸ್ಯರೂಪ ತಾಳಿದ ಸ್ಥಳ ಇದಾಗಿದ್ದು, ಹರಕೆ ಹೇಳಿಕೊಂಡು ಮೀನುಗಳಿಗೆ ಆಹಾರ ಹಾಕಿದರೆ ಚರ್ಮ ರೋಗ ವಾಸಿಯಾಗುತ್ತದೆ ಎಂದು ನಂಬಿಕೆ ಸೀಮೆಯ ಭಕ್ತರ ಲ್ಲಿದೆ. ಇದರಿಂದ ನೂರಾರು ಭಕ್ತರು ಹರಕೆ ಹೊತ್ತು ಮೀನು ಗಳಿಗೆ ಆಹಾರ ಹಾಕುತ್ತಾರೆ.

ತೊಡಿಕಾನ ಮಲ್ಲಿಕಾರ್ಜುನ ದೇವರ ಜಾತ್ರೆ ಎ. 13ರಿಂದ ಆರಂಭಗೊಂಡಿದ್ದು, ಎ. 20ರ ತನಕ ವಿವಿಧ ಸಾಂಸ್ಕೃತಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜಾತ್ರೆ ಸಮಯದಲ್ಲಿ ಮತ್ಸ್ಯತೀರ್ಥ ಹೊಳೆಯಲ್ಲಿ ನೀರಿನ ಕೊರತೆಯಾಗಿ ದೇವರ ಮೀನುಗಳು ಸಂಕಷ್ಟ ಪರಿಸ್ಥಿತಿಯನ್ನು ಎದುರಿಸುತ್ತಿದ್ದವು. ಮೀನುಗಳಿಗೆ ಆಹಾರ ಹಾಕಲು ಭಕ್ತರಿಗೂ ಅವಕಾಶ ನೀಡುತ್ತಿರಲಿಲ್ಲ. ಹರಕೆ ರೂಪದಲ್ಲಿ ಬಂದ ಆಹಾರವನ್ನು ದೇವಸ್ಥಾನದಲ್ಲೇ ಸಂಗ್ರಹ ಮಾಡಿಕೊಂಡು, ಹೊಳೆಯಲ್ಲಿ ನೀರಿನ ಪ್ರಮಾಣ ಜಾಸ್ತಿಯಾದ ಮೇಲೆ ಸಿಬಂದಿಯೇ ನಿಗದಿತ ಪ್ರಮಾಣದಲ್ಲಿ ನೀಡುತ್ತಿದ್ದರು. ಈ ಬಾರಿ ಜಾತ್ರೆ ಸಂದರ್ಭ ಭಕ್ತರೇ ಮೀನುಗಳಿಗೆ ಆಹಾರ ಹಾಕುವ ಅವಕಾಶ ಸಿಗಲಿದೆ.

ಮೀನುಗಳಿಗೆ ನೀರಿನ ಕೊರತೆಯಾದಾಗ ಸುಮಾರು ಎರಡು ಕಿ.ಮೀ.ಗೂ ದೂರದಿಂದ ಪೈಪ್‌ ಅಳವಡಿಸಿ ನೀರು ಸಂಗ್ರಹ ಮಾಡಿ ದೇವರ ಮೀನಿನ ಹೊಳೆಗೆ ಹಾಯಿಸಲಾಗುತ್ತಿದೆ. ಇದರಿಂದ ಮೀನುಗಳು ಒಂದಷ್ಟು ಖುಷಿಯಿಂದ ನೀರಿನ ಮೇಲೆ ಚೆಲ್ಲಾಟವಾಡುತ್ತ ಇರುತ್ತವೆ. ತಾಪ ಮಾನ ಜಾಸ್ತಿಯಿದ್ದಾಗ ಈ ನೀರಿನ ಪ್ರಮಾಣ ಸಾಕಾವುದಿಲ್ಲ. ಇಂತಹ ಸಂದರ್ಭದಲ್ಲಿ ಮೀನುಗಳಿಗೆ ಅಪಾಯ ಎದುರಾಗುತ್ತದೆ. ಈ ಬಾರೀ ಹಾಗಿಲ್ಲ. ನಾಲ್ಕೆçದು ಮಳೆ ಬಂದ ಹಿನ್ನೆಲೆಯಲ್ಲಿ ಮೀನುಗಳು ಹಾಯಾಗಿ ಅತ್ತಿತ್ತ ಓಡಾಡುತ್ತಿವೆ.

ಸಾಕಷ್ಟು ನೀರಿದೆ
ಮೀನುಗಳಿಗೆ ಈ ಬಾರಿ ನೀರಿನ ಕೊರತೆಯಾಗಿಲ್ಲ. ನಾಲ್ಕು ಇಂಚು ನೀರನ್ನು ದೂರದ ದೇವರ ಗುಂಡಿ ಸಮೀಪದಿಂದ ಪೈಪ್‌ ಮೂಲಕ ತಂದು ಮೀನ ಗುಂಡಿಗೆ ಬಿಡಲಾಗುತ್ತಿದೆ. ಮಳೆ ಸುರಿದ ಹಿನ್ನೆಲೆಯಲ್ಲಿ ಮೀನಗುಂಡಿಯಲ್ಲಿ ಸಾಕಷ್ಟು ನೀರು ತುಂಬಿ ಹರಿದು ಹೋಗುತ್ತಿದೆ.

 - ಆನಂದ ಕಲ್ಲಗದ್ದೆ, 
ದೇವಸ್ಥಾನದ ವ್ಯವಸ್ಥಾಪಕರು

ಮೀನು ನೋಡುವುದೇ ಖುಷಿ
ತೊಡಿಕಾನ ದೇವರ ಮೀನುಗಳನ್ನು ನೋಡುವಾಗ ತುಂಬಾ ಖುಷಿಯಾಗುತ್ತದೆ.ಇವುಗಳು ತುಂಬಾ ಸುಂದರವಾಗಿವೆ. 
ಮೀನುಗಳಿಗೆ ನೀರಿನ ಕೊರತೆಯಾಗದ ಹಾಗೆ ಶಾಶ್ವತ ವ್ಯವಸ್ಥೆ ಮಾಡಬೇಕಾಗಿದೆ. 

– ಚರಣ್‌  ಕ್ಷೇತ್ರದ ಭಕ್ತ

ವಿಶೇಷ ವರದಿ-

ಟಾಪ್ ನ್ಯೂಸ್

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

hemanth-soren

Arrest ಪ್ರಶ್ನಿಸಿ ಹೇಮಂತ್‌ ಸೊರೇನ್‌ ಸುಪ್ರೀಂ ಮೊರೆ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.