ಪ್ರೇಕ್ಷಕ ಅಳ್ಳೋದು ಗ್ಯಾರಂಟಿ


Team Udayavani, Apr 20, 2018, 6:15 AM IST

Krishna-Tulasi_(101).jpg

ನಿರ್ಮಾಪಕ ನಾರಾಯಣಸ್ವಾಮಿಯವರು ಡಬಲ್‌ ಮೀನಿಂಗ್‌ ಇರದ, ಕುಟುಂಬ ಸಮೇತ ಕುಳಿತು ನೋಡುವಂತಹ ಸಿನಿಮಾ ಮಾಡಿಕೊಡಬೇಕು ಎಂದು ನಿರ್ದೇಶಕ ಸುಖೇಶ್‌ ಅವರಲ್ಲಿ ಮೊದಲೇ ಹೇಳಿದ್ದರಂತೆ. ಅದರಂತೆ ಈಗ “ಕೃಷ್ಣ ತುಳಸಿ’ ಚಿತ್ರ ಸಿದ್ಧವಾಗಿದೆ.

ಈ ಚಿತ್ರ ಇಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಚಿತ್ರದ ಬಗ್ಗೆ ಒಂದಿಷ್ಟು ಮಾತನಾಡುವುದಕ್ಕೆ ಚಿತ್ರತಂಡದವರು ಜಮಾಯಿಸಿದ್ದರು. ಎಲ್ಲರೂ ಖುಷಿಯಾಗಿದ್ದರು. ಅದರಲ್ಲೂ ನಿರ್ಮಾಪಕ ನಾರಾಯಣಸ್ವಾಮಿ ಸ್ವಲ್ಪ ಜಾಸ್ತಿಯೇ ಖುಷಿಯಾಗಿದ್ದರು. “ಇತ್ತೀಚೆಗೆ ಸಿನಿಮಾ ನೋಡಿದೆ. ತುಂಬಾ ಖುಷಿಯಾಯಿತು. ಬಜೆಟ್‌ ಸ್ವಲ್ಪ ಜಾಸ್ತಿಯಾಯಿತು ಅನ್ನೋದು ಬಿಟ್ಟರೆ ಉಳಿದಂತೆ ನಿರ್ದೇಶಕರು ಕಥೆ ಹೇಳಿದಂತೆ ಸಿನಿಮಾ ಮಾಡಿದ್ದಾರೆ. ಸಿನಿಮಾ ತುಂಬಾ ಸೆಂಟಿಮೆಂಟ್‌ನಿಂದ ಕೂಡಿದ್ದು, ಪ್ರೇಕ್ಷಕರಿಗೆ ಒಂದೊಂದು ಕರ್ಚಿಫ್ ಬೇಕಾಗಬಹುದು. ಸಿನಿಮಾ ನೋಡಿ ಅತ್ತುಕೊಂಡೆ ಬರುತ್ತಾರೆ. ಈಗಾಗಲೇ ಸಿನಿಮಾ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ತೆಲುಗಿನಿಂದಲೂ ಚಿತ್ರದ ರೀಮೇಕ್‌ ರೈಟ್ಸ್‌ ಕೇಳುತ್ತಿದ್ದಾರೆ. ಜೊತೆಗೆ ಟಿವಿ ರೈಟ್ಸ್‌ಗೂ ಬೇಡಿಕೆ ಇದೆ’ ಎಂದು ಸಿನಿಮಾ ಬಗ್ಗೆ ಮಾತನಾಡಿದರು.

ಚಿತ್ರದ ನಿರ್ದೇಶಕ ಸುಕೇಶ್‌ಗೆ “ಕೃಷ್ಣ ತುಳಸಿ’ ಕನ್ನಡಕ್ಕೊಂದು ಒಳ್ಳೆಯ ಸಿನಿಮಾವಾಗುವ ವಿಶ್ವಾಸವಿದೆ. “ದೃಷ್ಟಿವಿಕಲಚೇತನ ಬದುಕಿನ ಸುತ್ತ ಈ ಕಥೆ ಮಾಡಿದ್ದು, ಚಿತ್ರದಲ್ಲಿ ಸಾಕಷ್ಟು ಸೂಕ್ಷ್ಮ ಅಂಶಗಳನ್ನು ಹೇಳಿದ್ದೇವೆ. ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಕೂಡಾ ಮಾಡಿಕೊಂಡಿದ್ದು, ಅದು ಚಿತ್ರೀಕರಣ ಸಮಯದಲ್ಲಿ ಸಹಾಯಕ್ಕೆ ಬಂತು. ಚಿತ್ರದಲ್ಲಿ ಬಸ್‌ ಕೂಡಾ ಪ್ರಮುಖವಾಗಿದ್ದು, ಬಸ್‌ ಒಳಗಡೆ ಟ್ರಾಲಿ ಹಾಕಿ ಚಿತ್ರೀಕರಣ ಮಾಡಿದ್ದೇವೆ’ ಎಂದ ಅವರು ನಿರ್ಮಾಪಕರ ಸಿನಿಮಾ ಪ್ರೀತಿಯ ಬಗ್ಗೆಯೂ ಮಾತನಾಡಿದರು. 

ನಾಯಕ ಸಂಚಾರಿ ವಿಜಯ್‌ ಮೊದಲಿಗೆ ನಿರ್ಮಾಪಕರಿಗೆ ಥ್ಯಾಂಕ್ಸ್‌ ಹೇಳಿದರು. ಅದಕ್ಕೆ ಕಾರಣ ಚಿತ್ರದ ಬಜೆಟ್‌. “ನಾನು ಯಾವುದೇ ಕಮರ್ಷಿಯಲ್‌ ಹಿಟ್‌ ಕೊಡದಿದ್ದರೂ ನನ್ನನ್ನು ನಂಬಿ ಈ ಸಿನಿಮಾ ಮಾಡಿದ್ದೀರಿ. ನಾನು ಯಾವತ್ತೂ ನಿಮ್ಮನ್ನು ಮರೆಯೋದಿಲ್ಲ’ ಎಂದರು. ಈ ಚಿತ್ರದಲ್ಲಿ ವಿಜಯ್‌, ಅಂಧನಾಗಿ ಕಾಣಿಸಿಕೊಂಡಿದ್ದಾರೆ. “ತುಂಬಾ ಸೂಕ್ಷ್ಮ ಅಂಶಗಳನ್ನೊಳಗೊಂಡಿರುವ ಕಥೆ. ಈ ಚಿತ್ರಕ್ಕಾಗಿ ದೃಷ್ಟಿವಿಕಲಚೇತನರ ದಿನಚರಿ, ಅವರ ಹಾವಭಾವ ಸೇರಿದಂತೆ ಅನೇಕ ವಿಷಯಗಳನ್ನು ನಾನು ನೋಡಿಕೊಂಡೆ. ನಿರ್ದೇಶಕರಿಗೆ ಈ ಪಾತ್ರದ ಬಗ್ಗೆ ಸ್ಪಷ್ಟತೆ ಇತ್ತು. ಹಾಗಾಗಿ, ನಾನು ಒಂಚೂರು ಎಡವಿದರೂ ಅವರೇ ನಟಿಸಿ ತೋರಿಸುತ್ತಿದ್ದರು’ ಎಂದು ಸಿನಿಮಾ ಬಗ್ಗೆ ಹೇಳಿದರು. 

ನಾಯಕಿ ಮೇಘಶ್ರೀ ಕೂಡಾ ತಮ್ಮ ಪಾತ್ರದ ಬಗ್ಗೆ ಮಾತನಾಡಿದರು. ಚಿತ್ರಕ್ಕೆ ಕಿರಣ್‌ ರವೀಂದ್ರನಾಥ್‌ ಸಂಗೀತ, ನವೀನ್‌ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.