ನೋಟಕ್ಕುಂಟು ಓಟಕ್ಕಿಲ್ಲ ಬೆಳ್ತಂಗಡಿ ತಾಲೂಕು ಕ್ರೀಡಾಂಗಣ


Team Udayavani, Apr 20, 2018, 8:50 AM IST

Ground-19-4.jpg

ಬೆಳ್ತಂಗಡಿ : ಪಕ್ಕದಲ್ಲೇ ಹರಿಯುತ್ತಿರುವ ಹೊಳೆ, ಬದಿಯಲ್ಲಿದೆ ಹಿಂದೂ ರುದ್ರಭೂಮಿ, ಇರುವ ಅಂಗಣ ಅಂಕುಡೊಂಕು, ಗಲ್ಲಿ ಕ್ರಿಕೆಟ್‌ ಆಡಲಷ್ಟೇ ಬಳಕೆ. ಇದು ಯಾವುದೋ ಗ್ರಾಮೀಣ ಹೊಲ, ಗದ್ದೆಗಳ ಕಥೆಯಲ್ಲ. ತಾಲೂಕಿನಲ್ಲಿ ನೂರಾರು ಕ್ರೀಡಾಪಟುಗಳಿಗೆ ಪ್ರೇರಣೆಯಾಗಬೇಕಿದ್ದ ಬೆಳ್ತಂಗಡಿ ತಾ| ಕ್ರೀಡಾಂಗಣದ ಕಥೆ, ವ್ಯಥೆ. ಕ್ರೀಡಾಂಗಣದಲ್ಲಿ 200 ಮೀ. ಟ್ರ್ಯಾಕ್‌ ನ ಕ್ರೀಡಾಂಗಣವಿದೆ. ವಿಶಾಲವಾಗಿದ್ದರೂ ನೋಟಕ್ಕಷ್ಟೇ ಇದೆ. ನಿಜವಾದ ಕ್ರೀಡಾ ಚಟುವಟಿಕೆಗಳಿಗೆ, ಕ್ರೀಡಾಪಟುಗಳನ್ನು ರೂಪಿಸುವ ಕಾರ್ಯಕ್ಕೆ ಬಳಕೆಯಾಗುತ್ತಿಲ್ಲ. 400 ಮೀ.ನ ಕ್ರೀಡಾಂಗಣವಾಗಿ ಪರಿವರ್ತಿಸಲು ಸ್ಥಳಾವಕಾಶ ಕೊರತೆ ಕಾಡುತ್ತಿದೆ.

ನಡೆಯಲೂ ಕಷ್ಟ
ಕ್ರೀಡಾಂಗಣ ಸಂಪೂರ್ಣ ಹದಗೆಟ್ಟಿದ್ದು, ನಡೆದಾಡಲೂ ಕಷ್ಟ ಎಂಬಂತಿದೆ. ಕನಿಷ್ಠ ಕಬಡ್ಡಿ ಆಡಲು ಬೇಕಾದಷ್ಟು ಜಾಗವೂ ಸಮರ್ಪಕವಾಗಿಲ್ಲ. ಸಂಜೆ ವೇಳೆಗೆ ಸ್ಥಳೀಯರು ಆಟವಾಡಲು ಬಳಸುತ್ತಿದ್ದಾರೆ. ಆದರೆ ಸುವ್ಯವಸ್ಥಿತ ಕ್ರೀಡೆಗೆ ಕ್ರೀಡಾಂಗಣದ ಯಾವುದೇ ಭಾಗವೂ ಸಮರ್ಪಕವಾಗಿಲ್ಲ. 200 ಮೀ. ಟ್ರ್ಯಾಕ್‌ ಮಾಡಲಾಗಿದ್ದು, ಇದೂ ಸಮರ್ಪಕವಾಗಿಲ್ಲ. ಮಣ್ಣು ಹಾಕಿ, ಅಭಿವೃದ್ಧಿಗೊಳಿಸಲು ಪ್ರಯತ್ನಿಸಿದ್ದರೂ ತಾಲೂಕು ಕ್ರೀಡಾಂಗಣಕ್ಕಿರುವ ಕಳೆ ಇಲ್ಲಿಲ್ಲ.

ಅಂಗಣ ಕೆಲವು ಖಾಸಗಿ ಕಾರ್ಯಕ್ರಮಗಳಿಗಷ್ಟೇ ಸೀಮಿತವಾಗಿದೆ. ಅದು ನಡೆಯುವುದೂ ಅಪರೂಪ ಎಂಬಂತಾಗಿದೆ. ತಿಂಗಳುಗಳ ಹಿಂದೆ ರಾಜ್ಯಮಟ್ಟದ ಕಬಡ್ಡಿ ನಡೆದಿದ್ದರೂ ಸ್ಥಳಾವಕಾಶಕ್ಕಾಗಿ ಅಷ್ಟೇ ಕ್ರೀಡಾಂಗಣ ಬಳಸಲಾಗಿದೆ. ಉಳಿದಂತೆ ಒಳಾಂಗಣ ಕ್ರೀಡಾಂಗಣದಂತೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿತ್ತು. ಮ್ಯಾಟ್‌ ಕಬಡ್ಡಿ ಆಯೋಜಿಸಿದ್ದರಿಂದ ನೆಲವನ್ನೂ ಬಳಸಿಲ್ಲ. ಉಳಿದಂತೆ ಸಂಘ- ಸಂಸ್ಥೆಗಳು ಸಣ್ಣ ಮಟ್ಟದ ಕ್ರೀಡಾಕೂಟಕ್ಕೆ ಕ್ರೀಡಾಂಗಣ ಬಳಸಿಕೊಂಡಿವೆ ಬಿಟ್ಟರೆ ದೊಡ್ಡ ಮಟ್ಟದಲ್ಲಿ ಕೂಟ ನಡೆದಿಲ್ಲ. ದಸರಾ ಕ್ರೀಡಾಕೂಟಕ್ಕೆ ಇತರ ಕ್ರೀಡಾಂಗಣಗಳನ್ನು ಅವಲಂಬಿಸಬೇಕಾಗಿದೆ. ಕನಿಷ್ಠ ಗ್ರಾಮೀಣ ಕ್ರೀಡಾಕೂಟಗಳಿಗಾದರೂ ಕ್ರೀಡಾಂಗಣ ಲಭ್ಯವಾಗುವಂತೆ ಮಾಡಬೇಕು ಎನ್ನುವುದು ಸ್ಥಳೀಯರ ಒತ್ತಾಯ. ಇಲ್ಲವಾದಲ್ಲಿ ತಾಲೂಕಿನಲ್ಲೇ ಕ್ರೀಡಾಂಗಣವಿದ್ದರೂ ಯುವಕರು ಕ್ರೀಡಾಕೂಟಕ್ಕಾಗಿ ಹಾಗೂ ತರಬೇತಿಗಾಗಿ ಇತರೆಡೆಗಳಿಗೆ ತೆರಳಬೇಕಾದ ಪರಿಸ್ಥಿತಿ ಉಂಟಾಗಿದೆ.

ಪ್ರಸ್ತಾವನೆ ಸಲ್ಲಿಸಿದರೂ ಪರಿಹಾರವಿಲ್ಲ
ಕ್ರೀಡಾಂಗಣವನ್ನು ಜಿಲ್ಲಾ ಯುವ ಸಬಲೀಕರಣ ಇಲಾಖೆ ನಿರ್ವಹಣೆ ಮಾಡುತ್ತಿದೆ. ಸಮರ್ಪಕವಾಗಿ ಕ್ರೀಡಾಂಗಣ ಸಜ್ಜುಗೊಳಿಸಲು 7-8 ಬಾರಿ ಪ್ರಸ್ತಾವನೆ ಸಲ್ಲಿಸಿದ್ದರೂ  ಫಲ ನೀಡಿಲ್ಲ. 2007ರಲ್ಲಿ ಗ್ಯಾಲರಿ ನಿರ್ಮಾಣವಾಗಿದ್ದರೂ ಉಪಯೋಗಕ್ಕಿಲ್ಲ ಎಂಬಂತಾಗಿದೆ. 2018-2019ನೇ ಸಾಲಿಗೂ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಸೌಲಭ್ಯ ಲಭಿಸುವ ನಿರೀಕ್ಷೆಯಲ್ಲಿದ್ದಾರೆ.

ಅಧಿಕಾರಿಗಳಿಲ್ಲ
2001ರಿಂದ  ತಾಲೂಕಿನಲ್ಲಿ ಯುವ ಸಬಲೀಕರಣ ಪೂರ್ಣಕಾಲಿಕ ಅಧಿಕಾರಿ ಇಲ್ಲದಿರುವುದು ಕ್ರೀಡಾಂಗಣದ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂಬ ಮಾತುಗಳಿವೆ. ಪೂರ್ಣಕಾಲಿಕ ಅಧಿಕಾರಿಗಳು ಆಗಮಿಸಿ ಇಚ್ಛಾಶಕ್ತಿ ಪ್ರದರ್ಶಿಸಿದರೆ ಕ್ರೀಡಾಂಗಣ ಸಜ್ಜಾಗಬಹುದೆಂಬ ನಿರೀಕ್ಷೆಯಿದೆ.

ಒಳಾಂಗಣ ಕ್ರೀಡಾಂಗಣ
ಕಬಡ್ಡಿಗೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ತಾಲೂಕಿನಲ್ಲೂ ಉತ್ತಮ ಕಬಡ್ಡಿ ಪಟುಗಳಿದ್ದಾರೆ. ತಾಲೂಕು ಕ್ರೀಡಾಂಗಣದಲ್ಲಿ  ಸುಸಜ್ಜಿತ ಒಳಾಂಗಣ ಕ್ರೀಡಾಂಗಣ ರಚಿಸಿ, ಕಬಡ್ಡಿ ತರಬೇತಿ, ಕೂಟಗಳಿಗೆ ಅನುವು ಮಾಡಿಕೊಡಬೇಕಿದೆ. 
– ಮಹಮದ್‌ ಅಕ್ರಮ್‌, ರಾಷ್ಟ್ರಮಟ್ಟದ ಕಬಡ್ಡಿ ಪಟು

ಪೂರ್ಣಕಾಲಿಕ ಅಧಿಕಾರಿ
ದೈಹಿಕ ಶಿಕ್ಷಣ ಶಿಕ್ಷಕರನ್ನು ಯುವ ಸಬಲೀಕರಣ ಇಲಾಖೆಗೆ ನಿಯೋಜಿಸಲಾಗುತ್ತಿದೆ. ಪೂರ್ಣಕಾಲಿಕ ಅಧಿಕಾರಿಗಳು ಆಗಮಿಸಿದರೆ ಅಭಿವೃದ್ಧಿ ಸಾಧ್ಯತೆಯಿದೆ. ಗ್ರಾಮೀಣ ಕ್ರೀಡಾಕೂಟಗಳನ್ನು ನಡೆಸುವ ನಿಟ್ಟಿನಲ್ಲಾದರೂ ಕ್ರೀಡಾಂಗಣ ಸಜ್ಜುಗೊಳಿಸಲು ಆದ್ಯತೆ ನೀಡಬೇಕಿದೆ.
– ರಾಜೀವ್‌ ಸಾಲ್ಯಾನ್‌, ಜಿಲ್ಲಾ ಯುವಜನ ಒಕ್ಕೂಟದ ಗೌರವಾಧ್ಯಕ್ಷರು

ದುರುಪಯೋಗ
ಹಿಂದೆ ಸಾರ್ವಜನಿಕರಿಂದ ಕ್ರೀಡಾಂಗಣ ದುರುಪಯೋಗವಾಗುತ್ತಿದೆ ಎಂಬ ಮಾತುಗಳೂ ಕೇಳಿ ಬಂದಿದ್ದವು. ಕ್ರೀಡಾಂಗಣದಲ್ಲಿ ಮದ್ಯಸೇವನೆಯಂತಹ ಕೃತ್ಯಗಳು ನಡೆಯುತ್ತಿರುವ ಬಗ್ಗೆ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಕಮಟ್ಟಿಗೆ ನಿಯಂತ್ರಣಕ್ಕೆ ಬಂದಿದ್ದರೂ ಕ್ರೀಡಾಂಗಣದ ರಕ್ಷಣೆಗೂ ಶಾಶ್ವತ ಪರಿಹಾರ ರೂಪಿಸಬೇಕಾದ ಅಗತ್ಯವಿದೆ.

ಅಭಿವೃದ್ಧಿ ನಿರೀಕ್ಷೆ
ಕ್ರೀಡಾಂಗಣದಲ್ಲಿ ಗ್ಯಾಲರಿ ನಿರ್ಮಿಸುವ ವೇಳೆ ಶೌಚಾಲಯ, ನೀರಿನ ವ್ಯವಸ್ಥೆ ಮತ್ತಿತರ ಸೌಲಭ್ಯ ಕಲ್ಪಿಸಲಾಗಿದೆ. ಈ ಬಾರಿಯೂ ಪ್ರಸ್ತಾವನೆ ಸಲ್ಲಿಸಿದ್ದು, ಕ್ರೀಡಾಂಗಣದ ಅಭಿವೃದ್ಧಿ ನಡೆಯುವ ಸಾಧ್ಯತೆಯಿದೆ. ಸ್ಥಳೀಯ ಸಂಘ-ಸಂಸ್ಥೆಗಳು ಜೂನಿಯರ್‌ ಕಾಲೇಜು ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಹಮ್ಮಿಕೊಳ್ಳುತ್ತಿವೆ. ಇಲ್ಲಿಯೂ 2007ರಲ್ಲಿ ಹಾಗೂ ತಿಂಗಳ ಹಿಂದೆ ರಾಜ್ಯಮಟ್ಟದ ಕೂಟಕ್ಕೆ ಅವಕಾಶ ಮಾಡಿಕೊಡಲಾಗಿತ್ತು. 400 ಮೀ.ನ ಓಟದ ಟ್ರ್ಯಾಕ್‌ ಇಲ್ಲದಿರುವುದರಿಂದ ಪ್ರಮುಖ ಕ್ರೀಡಾಕೂಟ ಹಮ್ಮಿಕೊಳ್ಳಲು ಸಾಧ್ಯವಾಗುತ್ತಿಲ್ಲ.
– ಪ್ರಭಾಕರ ನಾರಾವಿ, ಯುವ ಸಬಲೀಕರಣ ಸಹಾಯಕ ಕ್ರೀಡಾಧಿಕಾರಿ, ಬೆಳ್ತಂಗಡಿ

— ಹರ್ಷಿತ್‌ ಪಿಂಡಿವನ

ಟಾಪ್ ನ್ಯೂಸ್

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

Puttur: ಚೆಂಡೆವಾದಕ ನೇಣು ಬಿಗಿದುಕೊಂಡು ಆತ್ಮಹತ್ಯೆ

11

Puttur: ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವು ವೈದ್ಯರ ವಿರುದ್ಧ ದೂರು ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bike theft: ಬಿ.ಸಿ.ರೋಡಿನಲ್ಲಿ ಬೈಕ್‌ ಕಳವು; ಪ್ರಕರಣ ದಾಖಲು

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Bantwal: ಗಾಂಜಾ ಸೇವನೆ, ಸಾಗಾಟ; ಓರ್ವ ವಶಕ್ಕೆ

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

Priyanka Kharge: ಬಿಜೆಪಿ ನಾಯಕರು ಹಾಸನಕ್ಕೆ ಏಕೆ ಕಾಲಿಡುತ್ತಿಲ್ಲ; ಪ್ರಿಯಾಂಕ್‌ ಪ್ರಶ್ನೆ

arrest-lady

Goa; ಡ್ರಗ್ಸ್ ಜಾಲ ಭೇದಿಸಿದ ಪೊಲೀಸರು: ವಿದೇಶಿ ಯುವತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.