ನಾಯಕರ ಚುನಾವಣೆ ಪ್ರಚಾರಕ್ಕೆ ಸರಕಾದ ಅನ್ನದಾತರ ಆತ್ಮಹತ್ಯೆ!


Team Udayavani, Apr 20, 2018, 7:00 AM IST

Farmers-Suicide-Election.jpg

ಬೆಳಗಾವಿ: ರೈತರ ಆತ್ಮಹತ್ಯೆಯನ್ನೇ ಅಸ್ತ್ರವಾಗಿಟ್ಟುಕೊಂಡು ರಾಜಕಾರಣಿಗಳು ಚುನಾವಣೆಯಲ್ಲಿ ಹಣಾಹಣಿ ನಡೆಸುತ್ತಿದ್ದಾರೆ. 
ಸಾಮಾನ್ಯವಾಗಿ ರೈತರ ಸಮಸ್ಯೆಗಳು ಚುನಾವಣೆಗೆ ಮಾತ್ರ ಸೀಮಿತವಾಗಿರುತ್ತವೆ ಎಂಬುದಕ್ಕೆ ಪೂರಕವಾಗಿಯೇ ಈಗ ರೈತರ ಆತ್ಮಹತ್ಯೆಗಳನ್ನೇ ಬತ್ತಳಿಕೆಯ ಬಾಣ ತೆಗೆದಂತೆ ಪ್ರಚಾರ ನಡೆಸುತ್ತಿದ್ದಾರೆ.

ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಅಭ್ಯರ್ಥಿಗಳು ಗ್ರಾಮೀಣ ಭಾಗದಲ್ಲಿ ಸಮಾವೇಶ ನಡೆಸುವಾಗ ರೈತರ ಆತ್ಮಹತ್ಯೆಗಳ ಬಗ್ಗೆ ಧ್ವನಿ ಎತ್ತುತ್ತಿದ್ದಾರೆ. ರಾಜ್ಯದಲ್ಲಿ ಐದು ವರ್ಷಗಳ ಅವಧಿಯಲ್ಲಿ ಹೆಚ್ಚು ಆತ್ಮಹತ್ಯೆಗಳು ನಡೆದಿವೆ ಎಂದು ಬಿಜೆಪಿಯವರು ಪ್ರಚಾರ ನಡೆಸುತ್ತಿದ್ದಾರೆ. ದೇಶದಲ್ಲಿ ನಾಲ್ಕು ವರ್ಷಗಳ ಅವಧಿಯಲ್ಲಿ ರೈತರ ಆತ್ಮಹತ್ಯೆಗಳ ಪ್ರಮಾಣ ಹೆಚ್ಚಾಗಿದೆ ಎಂದು ಕಾಂಗ್ರೆಸ್‌ನವರು ಅಂಕಿ- ಅಂಶಗಳ ಸಮೇತ ಹೇಳುತ್ತಿದ್ದಾರೆ. ಇನ್ನೊಂದೆಡೆ ಜೆಡಿಎಸ್‌ ಅಭ್ಯರ್ಥಿಗಳು ಈ ಎರಡೂ ಪಕ್ಷಗಳ ಸರಕಾರ ಬಂದರೆ ಆತ್ಮಹತ್ಯೆಯೇ ಗತಿ ಎಂಬ ಪ್ರಚಾರಕ್ಕೆ ಬಿದ್ದಿದ್ದಾರೆ.

ಆತ್ಮಹತ್ಯೆ ಪ್ರಮಾಣ ಹೆಚ್ಚಳ: ಸಾಲ ಮಾಡಿ ಆತ್ಮಹತ್ಯೆ ಒಂದೇ ದಾರಿ ಎಂದು ರೈತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸಾಲ ಮನ್ನಾ ಮಾಡಿಲ್ಲ ಎಂದು ಸರಕಾರಗಳತ್ತ ಬೆರಳು ಮಾಡಿ ಅನ್ನದಾತ ನೇಣಿಗೆ ಕೊರಳೊಡ್ಡುವುದು ಸಾಮಾನ್ಯವಾಗಿದೆ. ಏಪ್ರಿಲ್‌ 2013ರಿಂದ 2017ರ ನವೆಂಬರ್‌ವರೆಗೆ ರಾಜ್ಯದಲ್ಲಿ ಒಟ್ಟು 2,515 ರೈತರು ಆತ್ಮಹತ್ಯೆ ಮಾಡಿಕೊಂಡರೆ, 2018 ಮಾರ್ಚ್‌ವರೆಗೆ 15 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. 2017-18ನೇ ಸಾಲಿನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 85 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಈವರೆಗೆ 3.05 ಕೋಟಿ ರೂ. ವಿತರಿಸಲಾಗಿದೆ. ಸವದತ್ತಿ ತಾಲೂಕಿನಲ್ಲಿ 18 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಜಿಲ್ಲೆಯಲ್ಲಿ ಮೊದಲನೇ ಸ್ಥಾನದಲ್ಲಿದೆ.

ರೈತರ ಮತಗಳನ್ನು ಸೆಳೆಯಲು 
ವಿವಿಧ ಕಸರತ್ತುಗಳನ್ನು ಮಾಡಲು ಹೊರಟಿರುವ ಅಭ್ಯರ್ಥಿಗಳು ತಮ್ಮ ಭಾಷಣದುದ್ದಕ್ಕೂ ರೈತರ ಬಗ್ಗೆ ಅಪಾರ ಕಾಳಜಿ ಎಂಬಂತೆ ಬಿಂಬಿಸಲು ಹೊರಟಿದ್ದಾರೆ. ಚುನಾವಣೆ ಬಂದಾಗ ಎಲ್ಲರೂ ರೈತರ ಸಂಪೂರ್ಣ ಸಾಲ ಮನ್ನಾ, ಬೆಳೆಗೆ ಬೆಂಬಲ ಬೆಲೆ, ಬಡ್ಡಿ ರಹಿತ ಸಾಲ ಎಂಬ ಅನೇಕ ಭರವಸೆಗಳನ್ನೇ ಕೊಡುತ್ತಾರೆ ಹೊರತು ಇಲ್ಲಿಯವರೆಗೆ ಯಾರೊಬ್ಬರೂ ಈ ಭರವಸೆ ಈಡೇರಿಸಲು ಮುಂದಾಗುತ್ತಿಲ್ಲ.

ಹಸಿರು ಶಾಲುಗಳ ಸರದಾರರು: ಅಭ್ಯರ್ಥಿಗಳು ಚುನಾವಣೆ ಪ್ರಚಾರಕ್ಕಾಗಿ ಹಸಿರು ಶಾಲುಗಳನ್ನೇ ಹೆಗಲಿಗೆ ಹಾಕಿಕೊಳ್ಳುತ್ತಿದ್ದಾರೆ. ಗಂಟೆಗಟ್ಟಲೇ ಭಾಷಣ ಕೊಡುತ್ತ ರೈತರೇ ದೇಶದ ಬೆನ್ನೆಲುಬು ಅಂತ ಪ್ರಚಾರಕ್ಕೆ ನಿಂತಿದ್ದಾರೆ. ಈ ಬಾರಿ ರೈತರಿಗೆ ಆಶಾಕಿರಣವಾಗಿ ನಮ್ಮ ಪಕ್ಷ ನಿಲ್ಲಲಿದೆ. ರೈತರ ಕಣ್ಣೊರೆಸುವ ಕೆಲಸ ಮಾಡಲಾಗುವುದು ಎಂದು ಉದ್ದುದ್ದ ಭಾಷಣ ಮಾಡುತ್ತಿದ್ದಾರೆ. ರೈತರನ್ನೇ ಗುರಿಯಾಗಿಸಿಕೊಂಡು ಹಸಿರು ಶಾಲುಗಳೇ ಚುನಾವಣೆಯ ಅಜೆಂಡಾವಾಗಿ ಮಾಡಿಕೊಂಡಿರುವುದು ಕಂಡು ಬರುತ್ತಿದೆ.

ಹಳ್ಳಿಗಳಲ್ಲಿ ರೈತ ಪರ ಪ್ರಚಾರ
ಜಿಲ್ಲೆಯಲ್ಲಿ ಅತಿ ಹೆಚ್ಚು ರೈತರು ಇರುವ ಹಳ್ಳಿಗಳಲ್ಲಿ ಅಭ್ಯರ್ಥಿಗಳು ರೈತ ಪರ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಅಥಣಿ, ಚಿಕ್ಕೋಡಿ, ರಾಯಬಾಗ, ಕಿತ್ತೂರ, ಬೈಲಹೊಂಗಲ, ಹುಕ್ಕೇರಿ, ರಾಮದುರ್ಗ ಸಹಿತ ವಿವಿಧ ತಾಲೂಕಿನಲ್ಲಿ ಈಗಾಗಲೇ ಹಸಿರು ಶಾಲು ಹಾಕಿಕೊಂಡು ರೈತರು ಚುನಾವಣಾ ಪ್ರಚಾರಕ್ಕೆ ಧುಮುಕಿದ್ದಾರೆ. ರೈತರು ಯಾವ ಅಭ್ಯರ್ಥಿಗಳ ಕೈ ಹಿಡಿಯುತ್ತಾರೆ ಎಂಬುದು ನೋಡಬೇಕಾಗಿದೆ.

ಸುಳ್ಳು ಭರವಸೆ ನೀಡಿ ಮತದಾರರನ್ನು ಸೆಳೆಯುತ್ತಿರುವ ರಾಜಕೀಯ ಪಕ್ಷಗಳ ವಿರುದ್ಧ ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗುವುದು. ಜನರನ್ನು ಯಾಮಾರಿಸಿ ಗೆದ್ದ ಬಳಿಕ ಮತ್ತೆ ಮುಂದಿನ ಚುನಾವಣೆಗೆ ಇವರು ಬರುತ್ತಾರೆ. ಇಂಥ ಖೊಟ್ಟಿ ಭರವಸೆಗಳಿಗೆ ಆಯೋಗ ಕಡಿವಾಣ ಹಾಕಬೇಕು.
– ಕುರಬೂರು ಶಾಂತಕುಮಾರ, ರೈತ ಹೋರಾಟಗಾರರು

– ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.