ಚಾರ್ಲ್ಸ್‌ ಕಾಮನ್ವೆಲ್ತ್‌ ಮುಖ್ಯಸ್ಥ?


Team Udayavani, Apr 20, 2018, 9:24 AM IST

Commonwealth-19-4.jpg

ಲಂಡನ್‌: ಭಾರತ ಪರ ಮತ್ತು ವಿರೋಧಿ ಘೋಷಣೆಗಳ ನಡುವೆಯೇ ಇಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್‌ ದೇಶಗಳ ಮುಖ್ಯಸ್ಥರ ಸಭೆಯಲ್ಲಿ ಮಹತ್ವದ ನಿರ್ಣಯವೊಂದು ಹೊರಬೀಳುವ ಸಮಯ ಸನ್ನಿಹಿತವಾಗಿದೆ. ಇದುವರೆಗೆ 53 ಸದಸ್ಯ ದೇಶಗಳ ಮುಖ್ಯಸ್ಥೆ ಸ್ಥಾನ ಅಲಂಕರಿಸಿದ್ದ ರಾಣಿ 2ನೇ ಎಲಿಜಬೆತ್‌ ಅವರು ಹುದ್ದೆಯಿಂದ ನಿರ್ಗಮಿಸುವ ಸುಳಿವು ನೀಡಿದ್ದು, ಈ ಸ್ಥಾನಕ್ಕೆ ಪುತ್ರ ಚಾರ್ಲ್ಸ್‌ ಹೆಸರನ್ನು ಪ್ರಸ್ತಾಪಿಸಿದ್ದಾರೆ. ತಮ್ಮ ತಂದೆ ಕಟ್ಟಿದ್ದ ಕಾಮನ್ವೆಲ್ತ್‌ ದೇಶಗಳ ಒಕ್ಕೂಟ ಇಂದು ಹೆಮ್ಮರವಾಗಿ ಬೆಳೆದಿದೆ. ಅವರು ಹಾಕಿಕೊಟ್ಟ ದಾರಿಯಲ್ಲಿ ನಾನು ನಡೆದಿದ್ದು, ಮುಂದೆ ಈ ಸ್ಥಾನದಲ್ಲಿ ಪುತ್ರ ಪ್ರಿನ್ಸ್‌ ಚಾರ್ಲ್ಸ್‌ ಅವರನ್ನು ನೋಡುವಾಸೆ ಇದೆ ಎಂದು ಕಾಮನ್ವೆಲ್ತ್‌ ಸರಕಾರಗಳ ಮುಖ್ಯಸ್ಥರ ಸಭೆಯಲ್ಲಿ ಹೇಳಿದ್ದಾರೆ.

ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 53 ಕಾಮನ್ವೆಲ್ತ್‌ ದೇಶಗಳ ಮುಖ್ಯಸ್ಥರು ಭಾಗವಹಿಸಿದ್ದಾರೆ. ರಾಣಿ 2ನೇ ಎಲಿಜಬೆತ್‌ ಪ್ರಸ್ತಾಪಿಸಿರುವ ವಿಚಾರ ಶುಕ್ರವಾರದ ಸಭೆಯಲ್ಲಿ ಚರ್ಚೆಯಾಗಲಿದ್ದು, ಪ್ರಧಾನ ಕಾರ್ಯದರ್ಶಿಯಾಗಿರುವ ಸ್ಕಾಟ್‌ಲೆಂಡ್‌ನ‌ ಪ್ರಧಾನಿ ಅಧಿಕೃತವಾಗಿ ಅಂದೇ ಮುಂದಿನ ಮುಖ್ಯಸ್ಥರು ಯಾರು ಎಂದು ಘೋಷಿಸುವರು. ಮುಖ್ಯಸ್ಥರ ಸ್ಥಾನ ವಂಶಪಾರಂಪರ್ಯವಾಗಿರದೆ ಪ್ರಜಾಪ್ರಭುತ್ವದ ಮಾದರಿಯಲ್ಲೇ ನೇಮಕವಾಗಲಿ ಎಂಬ ಆಶಯವೂ ಇದೆ. ಆದರೂ ರಾಜಮನೆತನದವರೇ ಈ ಹುದ್ದೆಯಲ್ಲಿ ಮುಂದುವರಿಯಲಿ ಎಂದು ಕೆಲವು ದೇಶಗಳ ಅಭಿಪ್ರಾಯ. ಭಾರತ ಮಾತ್ರ ತನ್ನ ನಿಲುವನ್ನು ಇದುವರೆಗೆ ಸ್ಪಷ್ಟಪಡಿಸಿಲ್ಲ.

ಭಾರತ ಧ್ವಜ ಹರಿದ ದೇಶದ್ರೋಹಿಗಳು
ಮೋದಿ ಗೋ ಬ್ಯಾಕ್‌ ಪ್ರತಿಭಟನೆ ವೇಳೆ ಕಾಣಿಸಿಕೊಂಡಿದ್ದ ಖಲಿಸ್ತಾನ್‌ ಉಗ್ರರ ಬೆಂಬಲಿಗರು ಮತ್ತು ಕಾಶ್ಮೀರ ಪ್ರತ್ಯೇಕತಾವಾದಿ ಬೆಂಬಲಿಗರು ಬ್ರಿಟನ್‌ ಪಾರ್ಲಿಮೆಂಟ್‌ ಸ್ಕ್ವೇರ್‌ನಲ್ಲಿ ಇದ್ದ ಭಾರತ ಧ್ವಜವನ್ನು ಹರಿದು ಹಾಕಿದ್ದರು. ಇದಷ್ಟೇ ಅಲ್ಲ, ಪ್ರತಿಭಟನೆ ಸಂಬಂಧ ವರದಿ ಮಾಡುತ್ತಿದ್ದ ಭಾರತದ ಆಂಗ್ಲ ಸುದ್ದಿವಾಹಿನಿಯೊಂದರ ವರದಿಗಾರ್ತಿಯನ್ನು ನಿಂದಿಸಿ ಅವಮಾನಿಸಿದ್ದರು. ಕೊನೆಗೆ ಸ್ಕಾಟ್ಲಂಡ್‌ಯಾರ್ಡ್‌ ಪೊಲೀಸರು ಇವರನ್ನು ರಕ್ಷಿಸಿದ್ದರು. ಈ ಬಗ್ಗೆ ಭಾರತ ದೂರು ನೀಡಿದ ಮೇಲೆ ಅಲ್ಲಿನ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದುವರೆಗೂ ಯಾರನ್ನೂ ಬಂಧಿಸಿಲ್ಲ. ಈ ಬಗ್ಗೆ ಬ್ರಿಟನ್‌ ಆಡಳಿತದ ಮುಂದೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಘಟನೆಗೆ ಬಗ್ಗೆ ಅಲ್ಲಿನ ಪೊಲೀಸರು ಕ್ಷಮೆ ಕೇಳಿದ್ದಾರೆ.

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.