ಪಾರುಪತ್ಯಕ್ಕೆ ಗೌಡರ ಛಾಯಾಕದನ


Team Udayavani, Apr 21, 2018, 6:40 AM IST

hassan.jpg

ಏನಾದರೂ ಮಾಡಿ ಹಾಸನದಲ್ಲಿ ಪ್ರಭಾವ ಬೆಳೆಸಿಕೊಳ್ಳುತ್ತಿರುವ ಸಚಿವ ಎ.ಮಂಜು ಅವರನ್ನು ಕಟ್ಟಿ ಹಾಕಬೇಕು ಎಂಬುದು ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಪಟ್ಟು… ಹೇಗಾದರೂ ಮಾಡಿ ಹಾಸನ ಜಿಲ್ಲೆಯಲ್ಲಿರುವ ದೇವೇಗೌಡರ ಪ್ರಭಾವ ಇಳಿಸಬೇಕು ಎಂಬುದು ಈಗಾಗಲೇ ಗೆದ್ದು ಸಚಿವ ಸ್ಥಾನವನ್ನೂ ಅಲಂಕರಿಸಿರುವ ಮತ್ತು ಒಕ್ಕಲಿಗ ಮುಖಂಡನೂ ಆಗಿರುವ ಎ.ಮಂಜು ಅವರ ಮಹಾಪಟ್ಟು… 

ಈ ಎರಡು ಕಾರಣಗಳಿಂದಾಗಿ ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ. ಮಂಜು ಎದುರಾಳಿಯಾಗಿ ಜೆಡಿಎಸ್‌ನಿಂದ ಎ.ಟಿ.ರಾಮಸ್ವಾಮಿ ಸ್ಪರ್ಧಿಸುತ್ತಿ ದ್ದಾರೆ. ಈ ಕ್ಷೇತ್ರದಲ್ಲಿಯೇ ಮೂರು ಬಾರಿ ಶಾಸಕರಾಗಿದ್ದ ಅವರು ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. 

ಈ ಬಾರಿ ಎ. ಮಂಜು ಗೆದ್ದರೆ ಅದು ಹ್ಯಾಟ್ರಿಕ್‌ ಗೆಲುವು. ಹಾಗೆಯೇ ಅವರ ಪ್ರತಿಸ್ಪರ್ಧಿ ರಾಮ ಸ್ವಾಮಿ ವಿಜಯಿಯಾದರೂ ಕ್ಷೇತ್ರದಲ್ಲಿ ನಾಲ್ಕನೇ ಬಾರಿ ಶಾಸಕರೆಂಬ ದಾಖಲೆಯಾಗಲಿದೆ.  ಮಂಜು ಹಾಗೂ ರಾಮಸ್ವಾಮಿ ಈಗಾಗಲೇ ಮೂರು ಬಾರಿ ಶಾಸಕರಾಗಿ ಪ್ರತಿನಿಧಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಯಾಗಿರುವ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್‌.ಯೋಗಾರಮೇಶ್‌ ಎರಡನೇ ಬಾರಿ ಕಣಕ್ಕಿಳಿಯುತ್ತಿದ್ದು ಚೊಚ್ಚಲ ಗೆಲುವು ಕಾಣುವ ನಿರೀಕ್ಷೆಯಲ್ಲಿದ್ದಾರೆ.  ಯೋಗಾರಮೇಶ್‌ ಸ್ಪರ್ಧೆ ಕಳೆದ ಬಾರಿಯ ಚುನಾವಣೆಯಲ್ಲಿ ರಾಮಸ್ವಾಮಿ ಗೆಲುವಿಗೆ ಅಡ್ಡಿಯಾಗಿತ್ತು ಎಂದು ವಿಶ್ಲೇಷಿಸಲಾಗಿತ್ತು. 

ಕುರುಬ ಹಾಗೂ ಲಿಂಗಾಯತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿರುವ ಹಳ್ಳಿಮೈಸೂರು ಹೋಬಳಿಯಲ್ಲಿ ಕಳೆದ ಬಾರಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುವರೆಂಬ ಕಾರಣಕ್ಕೆ ಮಂಜು ಅವರನ್ನು ಕುರುಬ ಸಮುದಾಯ ಬೆಂಬಲಿಸಿತ್ತು. 

ಈ ಬಾರಿ ಕುರುಬ ಮುಖಂಡರು ಮಂಜು ವಿರುದ್ಧ ತಿರುಗಿ ಬಿದ್ದಿದ್ದಾರೆ. ಸಮುದಾಯದ ಯುವ ಮುಖಂಡ ಹಳ್ಳಿಮೈಸೂರಿನ ಎಂ.ಕೆ.ಶೇಷೇಗೌಡ ಅವರನ್ನು ಎ.ಮಂಜು ಅವರ ವಿರುದ್ಧ  ಸ್ಪರ್ಧೆಗಿಳಿಸುತ್ತಿದ್ದಾರೆ. ಅನೇಕ ಪ್ರಭಾವಿ ಕುರುಬ ಮುಖಂಡರು ಜೆಡಿಎಸ್‌‌ ಸೇರಿರುವುದು ಅವರಿಗೆ ತಲೆನೋವು. ಜೆಡಿಎಸ್‌ನ ಹಿರಿಯ ಮುಖಂಡ ದೊಡ್ಡಮಗ್ಗೆ ರಂಗಸ್ವಾಮಿ ಅವರು ಕೆಲ ದಿನಗಳಿಂದ ಪಕ್ಷದ ವೇದಿಕೆಗಳಲ್ಲಿ ಕಾಣಿಸಿಕೊಳ್ಳದೆ ಪಕ್ಷ ಸಂಘಟನೆಯಿಂದ ದೂರ ಉಳಿದಿದ್ದರು. ಅವರ ಸಹೋದರ ನಿವೃತ್ತ ಐಎಎಸ್‌ ಅಧಿಕಾರಿ ರಾಮೇಗೌಡ  ಬಿಜೆಪಿಯಿಂದ ಸ್ಪರ್ಧಿಸುವ ಪ್ರಯತ್ನ ನಡೆಸಿದ್ದರು. ಆದರೆ ಅವರಿಗೆ ಬಿಜೆಪಿ ಟಿಕೆಟ್‌ ಸಿಗಲಿಲ್ಲ. ಯೋಗಾರಮೇಶ್‌ ಅವರಿಗೆ ಟಿಕೆಟ್‌ ಘೋಷಣೆಯಾಗಿದೆ. ದೊಡ್ಡಮಗ್ಗೆ ರಂಗಸ್ವಾಮಿ ಕುಟುಂಬದವರೂ ಈಗ ಜೆಡಿಎಸ್‌ ಪರ ಪ್ರಚಾರದಲ್ಲಿ ತೊಡಗಿದ್ದಾರೆ.

ಎ.ಮಂಜು ಅವರಿಗೆ ಹಿಡಿದ ಕೆಲಸ ಮಾಡಿಯೇ ತೀರುವ ಬದ್ಧತೆ ಇಲ್ಲ. ಎರಡೂವರೆ ವರ್ಷ ಅಧಿಕಾರದಲ್ಲಿದ್ದರೂ ಗುರುತಿಸುವಂಥ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದಲ್ಲಿ ಆಗಿಲ್ಲ ಎಂಬ ಆರೋಪವಿದೆ. ಎದುರಾಳಿ ಎ.ಟಿ.ರಾಮಸ್ವಾಮಿ ಅವರು ಪ್ರಾಮಾಣಿಕ, ಬದ್ಧತೆಯಿರುವ ರಾಜಕಾರಣಿ ಎಂಬ ಭಾವನೆಯಿದೆ. 

ಕ್ಷೇತ್ರದಲ್ಲಿ  ಬಿಜೆಪಿಗೆ ಭದ್ರ ನೆಲೆ ಇಲ್ಲ. ಯೋಗಾರಮೇಶ್‌ ಅವರು ಸ್ವಂತ ವರ್ಚಸ್ಸಿನಿಂದ ಮತ ಸೆಳೆಯಬೇಕಾಗಿದೆ. ಮತ ಸೆಳೆಯಬಹುದಾದ ವರ್ಚಸ್ವೀ ಬಿಜೆಪಿ ನಾಯಕರೂ ಈ ಕ್ಷೇತ್ರದಲ್ಲಿ ಯಾರೂ ಇಲ್ಲ. ಈ ಎಲ್ಲಾ ಬೆಳವಣಿಗೆಗಳಿಂದ ಎ.ಟಿ.ರಾಮಸ್ವಾಮಿ ಅವರು ಸದ್ಯದ ಮಟ್ಟಿಗೆ ಪ್ರಬಲರಾಗಿ ಕಾಣುತ್ತಿದ್ದಾರೆ. ಅವರ ವೇಗವನ್ನು ಎ.ಮಂಜು ಹಾಗೂ ಯೋಗಾರಮೇಶ್‌ ಯಾವ ಮಟ್ಟಿಗೆ ತಡೆಯುವರೆಂಬ ಕುತೂಹಲ ಕ್ಷೇತ್ರದಲ್ಲಿದೆ.

ಮಂಜು ಚಿಂತೆ
ಕ್ಷೇತ್ರದ ಪ್ರಮುಖ ಮುಖಂಡರ ಪಡೆ ಎ.ಟಿ.ರಾಮಸ್ವಾಮಿ  ಜೊತೆಗಿದೆ. ಎಚ್‌.ಡಿ.ದೇವೇಗೌಡ, ಎಚ್‌.ಡಿ.ರೇವಣ್ಣ ಪ್ರಭಾವ ದಟ್ಟವಾಗಿದೆ. ಈ ಬೆಳವಣಿಗೆಗಳಿಂದ ಎ.ಟಿ.ರಾಮಸ್ವಾಮಿ ದಿನೇ ಬಲ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಹಿರಿಯ ಕಾಂಗ್ರೆಸ್‌ ಮುಖಂಡ ಬಿ.ಶಿವರಾಂ ಸೇರಿ ಜಿಲ್ಲೆಯ ಯಾವ ಕಾಂಗ್ರೆಸ್‌ ಮುಖಂಡರೂ ಎ.ಮಂಜು ಪರವಾಗಿ ಪ್ರಚಾರ ಮಾಡಿ ಮತದಾರರನ್ನು ಸೆಳೆಯುವ ಪರಿಸ್ಥಿತಿ ಇಲ್ಲ. ಇದು ಎ.ಮಂಜು ಅವರನ್ನು ಚಿಂತೆಗೀಡು ಮಾಡಿವೆ.

2500 ಕೋಟಿ  ರೂ.ಗಳ ಅನುದಾನ ತಂದಿ ರುವೆ. ಇಲ್ಲಿ ಅಭಿವೃದ್ಧಿ ಶಕೆ ಆರಂಭವಾಗಿದೆ. ಇದು ಈ ಚುನಾವಣೆಯಲ್ಲಿ ನನಗೆ ಶ್ರೀರಕ್ಷೆ.
– ಎ.ಮಂಜು, ಸಚಿವ, ಕಾಂಗ್ರೆಸ್‌ ಅಭ್ಯರ್ಥಿ

ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಲೂಟಿ ಮಾಡಿದ್ದಾರೆ. ಹಣಬಲದ ಹಿಂದೆ ಮತದಾರರು ಹೋಗುವುದಿಲ್ಲ.
– ಎ.ಟಿ.ರಾಮಸ್ವಾಮಿ, ಜೆಡಿಎಸ್‌ ಅಭ್ಯರ್ಥಿ

ಕ್ಷೇತ್ರದ ಜನರು ಹೊಸ ಮುಖದ ಕಾತುರ ದಲ್ಲಿದ್ದಾರೆ. ನನ್ನ ಎದುರಾಳಿ ಗಳಾಗಿರುವವರು ಮೂರು ಬಾರಿ ಶಾಸಕರಾಗಿದ್ದಾರೆ. 
– ಎಚ್‌.ಯೋಗಾರಮೇಶ್‌, ಬಿಜೆಪಿ ಅಭ್ಯರ್ಥಿ

– ಎನ್‌.ನಂಜುಂಡೇಗೌಡ

ಟಾಪ್ ನ್ಯೂಸ್

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.