ಹೋಟೆಲ್‌, ರೆಸಾರ್ಟ್‌ ಮೇಲೆ ಹದ್ದಿನ ಕಣ್ಣಿಡಲು ಸೂಚನೆ


Team Udayavani, Apr 21, 2018, 4:49 PM IST

21-April-16.jpg

ಧಾರವಾಡ: ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಹೋಟೆಲ್‌, ಕಲ್ಯಾಣ ಮಂಟಪ, ರೆಸಾರ್ಟ್‌ಗಳಲ್ಲಿ ಚುನಾವಣಾ ಅಕ್ರಮಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ| ಎಸ್‌.ಬಿ. ಬೊಮ್ಮನಹಳ್ಳಿ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಹೋಟೆಲ್‌, ಲಾಡ್ಜಿಂಗ್, ರೆಸಾರ್ಟ್‌, ಅತಿಥಿಗೃಹಗಳು ಹಾಗೂ ಕಲ್ಯಾಣ ಮಂಟಪಗಳ ಮಾಲೀಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳ ಕಾರ್ಯಕರ್ತರು ಹೋಟೆಲ್‌, ಲಾಡ್ಜಿಂಗ್, ರೆಸಾರ್ಟ್‌, ಅತಿಥಿಗೃಹಗಳು ಹಾಗೂ ಕಲ್ಯಾಣ ಮಂಟಪಗಳಲ್ಲಿ ತಂಗುವ ಹಾಗೂ ಸಭೆ-ಸಮಾರಂಭ ಏರ್ಪಡಿಸುವ ಸಂಭವವಿರುತ್ತದೆ. ಹೀಗಾಗಿ ಅವುಗಳಿಗೆ ಸೂಕ್ತ ಅನುಮತಿ ದೊರೆತಿದ್ದರೆ ಮಾತ್ರ ಕಾರ್ಯಕ್ರಮ ಆಯೋಜಿಸಲು ಸ್ಥಳಾವಕಾಶ ನೀಡಬೇಕು ಎಂದು ಸೂಚನೆ ನೀಡಿದರು.

ಚುನಾವಣಾ ನೀತಿ ಸಂಹಿತೆ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆಯ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯು ಹೋಟೆಲ್‌ ಮತ್ತು ಕಲ್ಯಾಣ ಮಂಟಪಗಳ ಮಾಲೀಕರ ಮೇಲೆಯೂ ಇರುತ್ತದೆ. ಮದುವೆ, ಹುಟ್ಟುಹಬ್ಬ ಮತ್ತಿತರ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆಗೆ ಯಾವುದೇ ಅಡೆತಡೆಗಳಿಲ್ಲ. ಆದರೆ ಅವುಗಳ ಹೆಸರಿನಲ್ಲಿ ರಾಜಕೀಯ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದರು.

ಯಾವುದೇ ರೀತಿಯ ಉಡುಗೊರೆ ವಿತರಣೆ, ಊಟ, ಉಪಹಾರ ವಿತರಣೆ ಕಾರ್ಯಕ್ರಮಗಳು ನಡೆಯುತ್ತಿದ್ದರೆ ಅಂತಹ ಚಟುವಟಿಕೆಗಳಿಗೆ ಅವಕಾಶ ನೀಡದೆ ಚುನಾವಣಾ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ರಾಜಕೀಯ ಪಕ್ಷಗಳ ತಾರಾ ಪ್ರಚಾರಕರು ಹೋಟೆಲ್‌ಗ‌ಳಲ್ಲಿ ವಸತಿ ಇದ್ದು, ಸಭೆ ನಡೆಸಿದರೆ ಅದಕ್ಕೆ ಸೂಕ್ತ ಅನುಮತಿ ಇದೆಯೇ ಎಂದು ಖಚಿತಪಡಿಸಿಕೊಳ್ಳಬೇಕು. ಒಂದೇ ಬಾರಿಗೆ ಹೆಚ್ಚು ಸಂಖ್ಯೆಯ (ಬಲ್ಕ್ ಬುಕಿಂಗ್‌) ಕೊಠಡಿಗಳನ್ನು ಕಾಯ್ದಿರಿಸಲು ಕೋರಿಕೆ ಬಂದರೆ ನಿರ್ದಾಕ್ಷಿಣ್ಯವಾಗಿ ನಿರಾಕರಿಸಬೇಕು ಎಂದು ಸೂಚಿಸಿದರು.

ವೈಯಕ್ತಿಕವಾಗಿ ಗುರುತಿನ ಚೀಟಿ ಪಡೆದೇ ಬುಕಿಂಗ್‌ ಮಾಡಿಕೊಳ್ಳಬೇಕು. ಮತದಾನಕ್ಕೆ 48 ಗಂಟೆಗಳ ಮುನ್ನ ಕ್ಷೇತ್ರದ ಮತದಾರರಲ್ಲದ ಜನರನ್ನು ಕಡ್ಡಾಯವಾಗಿ ತೆರವುಗೊಳಿಸಬೇಕು. ಕೂಪನ್‌ ಅಥವಾ ಟೋಕನ್‌ಗಳ ವ್ಯವಸ್ಥೆಯಡಿ ಕೆಲವರು ಭೋಜನಕೂಟ, ಕೊಠಡಿ ಕಾಯ್ದಿರಿಸುವುದನ್ನು ಮಾಡುವ ಸಾಧ್ಯತೆಗಳಿರುತ್ತವೆ. ಮಾಲೀಕರು ಇವುಗಳಿಗೆ ಆಸ್ಪದ ನೀಡದೇ ನಗದು ಇಲ್ಲವೇ ಅಧಿಕೃತ ಇ-ವ್ಯವಹಾರಗಳ ಮೂಲಕ ದಾಖಲೆಗಳನ್ನು
ನಿರ್ವಹಿಸಬೇಕು. ಈ ನಿಯಮಗಳನ್ನು ಉಲ್ಲಂಘಿಸಿದರೆ 2 ವರ್ಷಗಳ ಸಜೆ ಮತ್ತು ದಂಡ ವಿಧಿಸಲಾಗುವುದು. ಹೋಟೆಲ್‌ ಮಾಲೀಕರಿಗೆ ಯಾರಾದರೂ ಸಮಾಜ ಘಾತುಕ ಶಕ್ತಿಗಳು ಬೆದರಿಕೆ ಒಡ್ಡಿದರೆ ಸಮೀಪದ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದರೆ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದು ತಿಳಿಸಿದರು.

ಎಂಸಿಸಿ ನೋಡಲ್‌ ಅಧಿಕಾರಿ ಉಪ ಅರಣ್ಯ ಸಂರಕ್ಷಣಾ ಧಿಕಾರಿ ಮಹೇಶ ಕುಮಾರ ಮಾತನಾಡಿ, ಹೋಟೆಲ್‌, ಕಲ್ಯಾಣ ಮಂಟಪಗಳಲ್ಲಿ ಬಾಡಿಗೆ ನೀಡುವಾಗ ಧ್ವನಿ ವರ್ಧಕಗಳು ಹಾಗೂ ವಿದ್ಯುತ್‌ ಪೂರೈಕೆಯು ರಾಜಕೀಯ ಚಟುವಟಿಕೆಗಳಿಗೆ ಬಳಕೆಯಾಗದಂತೆ ಎಚ್ಚರ ವಹಿಸಬೇಕು. ರಾತ್ರಿ 10ರಿಂದ ಬೆಳಗಿನ 6 ಗಂಟೆವರೆಗೆ ಯಾವುದೇ ಸಭೆ ಸಮಾರಂಭಗಳಿಗೆ ಅವಕಾಶ ಒದಗಿಸಬಾರದು ಎಂದು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ರಮೇಶ ಕಳಸದ, ವೆಚ್ಚ ನೋಡಲ್‌ ಅಧಿ ಕಾರಿಯಾಗಿರುವ ವಾಣಿಜ್ಯ ತೆರಿಗೆ ಜಂಟಿ ಆಯುಕ್ತ ಎಸ್‌. ಉದಯಶಂಕರ, ಉಪ ಆಯುಕ್ತ ಎಸ್‌.ಬಿ. ಘಂಟಿ, ವಿವಿಧ ಹೋಟೆಲ್‌ ಮತ್ತು ಕಲ್ಯಾಣ ಮಂಟಪಗಳ ಮಾಲೀಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.