ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ : ಚೌಹಾಣ್
Team Udayavani, Apr 24, 2018, 1:04 PM IST
ಮೂಡಬಿದಿರೆ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪ ನೇತೃತ್ವದದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬರುವುದು ಖಂಡಿತ ಎಂದು ಉತ್ತರ ಪ್ರದೇಶದ ಗ್ರಾಮೀಣ ಅಭಿವೃದ್ದಿ ಸಚಿವ ಮಹೇಂದ್ರ ಸಿಂಗ್ ಚೌಹಾಣ್ ಭರವಸೆ ವ್ಯಕ್ತಪಡಿಸಿದರು.
ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಉಮಾನಾಥ ಕೋಟ್ಯಾನ್ ನಾಮಪತ್ರ ಸಲ್ಲಿಸುವುದಕ್ಕಿಂತ ಮುಂಚಿತವಾಗಿ ಸ್ವರಾಜ್ಯ ಮೈದಾನದಲ್ಲಿ ನಡೆದ ಕಾರ್ಯಕರ್ತರ ಬೃಹತ್ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಸಂಸದ ನಳಿನ್ ಕುಮಾರ್ ಕಟೀಲು, ಬಿಜೆಪಿ ಕ್ಷೇತ್ರಾಧ್ಯಕ್ಷ ಈಶ್ವರ ಕಟೀಲು, ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ, ಕ್ಷೇತ್ರ ಮಾಧ್ಯಮ ಪ್ರಮುಖ್ ಕೆ. ಭುವನಾಭಿರಾಮ ಉಡುಪ, ಅಭ್ಯರ್ಥಿ ಉಮಾನಾಥ ಕೋಟ್ಯಾನ್, ಜಿಲ್ಲಾ ವಕ್ತಾರ ಕೆ. ಕೃಷ್ಣರಾಜ ಹೆಗ್ಡೆ, ಜಿಲ್ಲಾ ಪ್ರ. ಕಾರ್ಯದರ್ಶಿ ಸುದರ್ಶನ ಎಂ., ಜಿಲ್ಲಾ ಉಪಾಧ್ಯಕ್ಷ ಕೆ.ಪಿ. ಜಗದೀಶ ಅಧಿಕಾರಿ, ಜಿ.ಪಂ. ಸದಸ್ಯ ಸುಚರಿತ ಶೆಟ್ಟಿ, ಮೇಘನಾಥ್ ಶೆಟ್ಟಿ, ಕ್ಷೇತ್ರ ಪ್ರ. ಕಾರ್ಯದರ್ಶಿಗಳಾದ ಸುಕೇಶ್ ಶೆಟ್ಟಿ, ಜಯಾನಂದ ಮೂಲ್ಕಿ, ನಿಡ್ಡೋಡಿ ಚಾವಡಿಮನೆ ಜಗನ್ನಾಥ ಶೆಟ್ಟಿ, ಬೆಳುವಾಯಿ ಗ್ರಾ.ಪಂ.ಅಧ್ಯಕ್ಷ ಭಾಸ್ಕರ ಆಚಾರ್ಯ, ಲಕ್ಷ್ಮಣ ಪೂಜಾರಿ ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ವೆಂಕಟರಮಣ ದೇವಸ್ಥಾನದ ಬಳಿಯಿಂದ ಹೊರಟ ಮೆರವಣಿಗೆ ಪೇಟೆಯ ಮೂಲಕ ಹಾದು ಸ್ವರಾಜ್ಯ ಮೈದಾನ ತಲುಪಿತು.