ದೇಶದ ಅಭಿವೃದ್ಧಿ ದೃಷ್ಟಿಯಿಂದ ಮತ ಹಾಕಿ
Team Udayavani, Apr 24, 2018, 5:10 PM IST
ಧಾರವಾಡ: ಕೇವಲ ಊರು, ವೈಯಕ್ತಿಕ ಬೆಳವಣಿಗೆ ನೋಡದೇ ದೇಶದ ಅಭಿವೃದ್ಧಿ ದೃಷ್ಟಿಯಿಂದ ಪ್ರತಿಯೊಬ್ಬರೂ ಮತ ಚಲಾಯಿಸಬೇಕು ಎಂದು ಯುವಾ ಬ್ರಿಗೇಡ್ ಮಾರ್ಗದರ್ಶಕ, ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ಹೇಳಿದರು. ನಗರದ ಕಲಾಭವನದಲ್ಲಿ ಯುವಾ ಬ್ರಿಗೇಡ್ ವತಿಯಿಂದ ಸೋಮವಾರ ಸಂಜೆ ಹಮ್ಮಿಕೊಂಡಿದ್ದ ‘ಮತದಾನ ನಮ್ಮ ಹಕ್ಕು, ಸಮರ್ಥ ಆಯ್ಕೆ ನಮ್ಮ ಕರ್ತವ್ಯ’ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶವು ಜಾಗತಿಕ ಮಟ್ಟದಲ್ಲಿ ಉತ್ತಮ ಬೆಳವಣಿಗೆ ಹೊಂದುತ್ತಿದೆ. ಆ ನಿಟ್ಟಿನಲ್ಲಿ ಕರ್ನಾಟಕದ ಬೆಳವಣಿಗೆಗೆ ಶ್ರಮಿಸುವ ಪಕ್ಷಕ್ಕೆ ಮತ ಚಲಾಯಿಸಬೇಕು ಎಂದು ಸಲಹೆ ನೀಡಿದರು.
ಪ್ರಣಾಳಿಕೆ ಒಂದು ಪಕ್ಷದ ಗುರಿ, ಉದ್ದೇಶ ತಿಳಿಸುತ್ತದೆ. ಆದರೆ ಚುನಾವಣೆಯ ಕಣ ರಂಗೇರಿರುವ ಈ ಸಮಯದಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ತೊಡಗಿರುವ ರಾಜಕೀಯ ಪಕ್ಷಗಳು ಪ್ರಣಾಳಿಕೆ ಬಿಡುಗಡೆ ಬಗ್ಗೆ ಚಿಂತಿಸುತ್ತಿಲ್ಲ. ಪ್ರಣಾಳಿಕೆ ಬಗ್ಗೆ ಹೇಳದ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ತಲ್ಲೀನರಾಗಿರುವುದು ನಿಜಕ್ಕೂ ವಿಷಾದನೀಯ ಸಂಗತಿಯೇ ಸರಿ ಎಂದರು.
ಮತ ಚಲಾಯಿಸಿದಾಗ ಪ್ರಶ್ನಿಸುವ ಅಧಿಕಾರ ಬರುತ್ತದೆ. ಹೀಗಾಗಿ ಇಂತಹ ಅಮೂಲ್ಯ ಮತ ಚಲಾವಣೆಯನ್ನು ಮಾರಿಕೊಳ್ಳಬೇಡಿ. ಯಾವುದೇ ಆಮಿಷಗಳಿಗೆ ಬಲಿಯಾಗದೇ ಅರ್ಹ ಅಭ್ಯರ್ಥಿಗಳಿಗೆ ಮತ ಚಲಾಯಿಸುವ ಮೂಲಕ ಅಭಿವೃದ್ಧಿಗೆ ಕೈ ಜೋಡಿಸಬೇಕು. ಈಗಂತೂ ಮತ ಕೇಳಲು ಬಂದ ಜನಪ್ರತಿನಿಧಿಗಳಿಗೆ ಕೆಲವೆಡೆ ತೀವ್ರ ತರಾಟೆ ತೆಗೆದುಕೊಳ್ಳುವ ಪ್ರಸಂಗಗಳು ಜರುಗುತ್ತಿದ್ದು, ಇದೊಂದು ಉತ್ತಮ ಬೆಳವಣಿಗೆ ಎಂದರು.
ಚುನಾವಣೆ ಸಮಯದಲ್ಲಿ ಸಾಲ ಮನ್ನಾ ಹಾಗೂ ರೈತರ ಆತ್ಮಹತ್ಯೆ ಬಗ್ಗೆ ಪಕ್ಷಗಳು ತಂಬಾ ಗಮನ ಹರಿಸುತ್ತವೆ. ಆದರೆ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳು ದೊರಕುವುದಿಲ್ಲ. ಹೀಗಾಗಿ ಮತಕ್ಕೆ ದುಡ್ಡಿನ ಮೌಲ್ಯ ಕಟ್ಟುವ ಪಕ್ಷ, ವ್ಯಕ್ತಿಗೆ ಬುದ್ಧಿ ಕಲಿಸಲೇ ಬೇಕು. ಇಲ್ಲವಾದರೆ ಅಂತಹವರಿಂದ ಸಮಾಜ ಹಾಳಾಗುವುದರಲ್ಲಿ ಎರಡು ಮಾತಿಲ್ಲ ಎಂದು ಎಚ್ಚರಿಸಿದರು. ಪಿ.ವಿ. ಹಿರೇಮಠ, ವರ್ಧಮಾನ್ ಸೇರಿದಂತೆ ಹಲವರಿದ್ದರು.
ಕಳೆದ ಎರಡು ವರ್ಷಗಳಿಂದ ಮಹದಾಯಿ ಹೋರಾಟ ನಡೆಯುತ್ತಿದ್ದರೂ ಯಾವುದೇ ಪಕ್ಷದ ಬೆಂಬಲ ದೊರಕಿಲ್ಲ. ಇನ್ನು 7 ವರ್ಷ ಕಳೆದರೆ ಅಲ್ಲಿನ ಒಂದು ಹನಿ ನೀರು ಕರ್ನಾಟಕಕ್ಕೆ ಲಭಿಸದು. ಹೀಗಾಗಿ ಆ ಬಗ್ಗೆ ಎಚ್ಚೆತ್ತುಕೊಂಡು ಮತ ಚಲಾಯಿಸುವುದು ಅಗತ್ಯವಿದೆ.
ಚಕ್ರವರ್ತಿ ಸೂಲಿಬೆಲೆ, ಅಂಕಣಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
MUST WATCH
ಹೊಸ ಸೇರ್ಪಡೆ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ