ನ್ಯಾ| ಜೋಸೆಫ್ ನೇಮಕ ತಡೆಗೆ ಆಕ್ಷೇಪ
Team Udayavani, Apr 27, 2018, 6:00 AM IST
ಹೊಸದಿಲ್ಲಿ: ನ್ಯಾಯಾಂಗ ನೇಮಕ ವಿಚಾರ ಮತ್ತೂಮ್ಮೆ ಬಹಿರಂಗ ರಂಪಾಟಕ್ಕೆ ಕಾರಣವಾಗಿದೆ. ಸುಪ್ರೀಂ ನ್ಯಾಯಮೂರ್ತಿ ಹುದ್ದೆಗೆ ಉತ್ತರಾಖಂಡ ಹೈಕೋರ್ಟ್ ಮುಖ್ಯ ನ್ಯಾ| ಕೆ.ಎಂ. ಜೋಸೆಫ್ ಹೆಸರನ್ನು ತಿರಸ್ಕರಿಸಿರುವ ಕೇಂದ್ರ ಸರಕಾರವು ಪುನರ್ಪರಿಶೀಲನೆ ಮಾಡುವಂತೆ ಕೊಲೀಜಿಯಂಗೆ ಮನವಿ ಮಾಡಿದೆ.
ಈ ಬಗ್ಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯ ಮೂರ್ತಿ ದೀಪಕ್ ಮಿಶ್ರಾ ಪ್ರತಿಕ್ರಿಯೆ ನೀಡಿದ್ದು, ಸರಕಾರವು ನಿಯಮಕ್ಕೆ ಅನುಗುಣವಾಗಿಯೇ ನ್ಯಾ|ಜೋಸೆಫ್ ಹೆಸರನ್ನು ಮರು ಪರಿಶೀಲಿಸುವಂತೆ ಕೋರಿದೆ. ಅದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ, ವಿವಾದ ಇತ್ಯರ್ಥ ಆಗುವವರೆಗೆ ನ್ಯಾ| ಇಂದು ಮಲ್ಹೋತ್ರಾ ನೇಮಕಕ್ಕೆ ತಡೆ ತರಬೇಕು ಎಂಬ ಕೆಲವರ ಕೋರಿಕೆಯನ್ನು ಒಪ್ಪಲಾಗದು ಎಂದೂ ಸಿಜೆಐ ಹೇಳಿದ್ದಾರೆ.
ಈ ಬೆಳವಣಿಗೆ ಕೇಂದ್ರ ಹಾಗೂ ವಿಪಕ್ಷಗಳ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ಸುಪ್ರೀಂ ನ್ಯಾಯಮೂರ್ತಿಯಾಗಿ ನ್ಯಾ| ಇಂದು ಮಲ್ಹೋತ್ರಾ ಹೆಸರನ್ನು ಅಂತಿಮಗೊಳಿಸಿದ್ದ ಕೇಂದ್ರ ಸರಕಾರ, ನ್ಯಾ| ಕೆ.ಎಂ. ಜೋಸೆಫ್ ಹೆಸರನ್ನು ಅಂತಿಮಗೊಳಿಸದೆ ವಾಪಸ್ ಕಳುಹಿಸಿದೆ. ಈ ಕುರಿತಂತೆ ಕೇಂದ್ರ ಕಾನೂನು ಸಚಿವ ರವಿಶಂಕರ ಪ್ರಸಾದ್ ಅವರು ಸಿಜೆಐಗೆ ಗುರುವಾರ 6
ಪುಟಗಳ ಪತ್ರ ಬರೆದಿದ್ದಾರೆ. ಅವರಿಗಿಂತ ಹಿರಿಯ ನ್ಯಾಯಮೂರ್ತಿಗಳು ಇರುವಾಗ ಕೊಲೀಜಿಯಂ ಶಿಫಾರಸು ಸಮಂಜಸ ವಲ್ಲ. ಈ ಬಗ್ಗೆ ಕಾರಣ ಕೊಡಬೇಕು ಎಂದಿದೆ.
ಕಾಂಗ್ರೆಸ್ ಆಕ್ಷೇಪ
ಕಾಂಗ್ರೆಸ್ ನಾಯಕ, ಹಿರಿಯ ವಕೀಲ ಕಪಿಲ್ ಸಿಬಲ್ ಮಾತನಾಡಿ, ನ್ಯಾಯಾಂಗದ ಸ್ವಾತಂತ್ರ್ಯವೇ ಅಪಾಯದಲ್ಲಿದೆ ಎಂದು ಟೀಕಿಸಿದ್ದಾರೆ. ನಮ್ಮ ನ್ಯಾಯಾಂಗ ಒಟ್ಟಾಗಿ ನಿಲ್ಲದೇ ಇದ್ದರೆ ಪ್ರಜಾ ಪ್ರಭುತ್ವಕ್ಕೇ ಅಪಾಯ ಬಂದೀತು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ
Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ