ವಯಸ್ಸು ಚಿಕ್ಕದು, ಸಾಧನೆ ದೊಡ್ಡದು


Team Udayavani, Apr 28, 2018, 11:49 AM IST

5411.jpg

15ರ ವಯಸ್ಸು ಅಂದರೆ, ಆದು ಆಟ ಆಡುತ್ತಾ, ಸ್ನೇಹಿತರ ಜತೆ ಸುತ್ತಾಡುತ್ತಾ, ಒಂದಷ್ಟು ತುಂಟತನ, ತರಲೆ ಮಾಡುತ್ತಾ ಕಾಲ ಕಳೆಯುವ ವಯಸ್ಸು. ಆದರೆ, ಹರ್ಯಾಣದ ಶೂಟರ್‌ ಅನೀಶ್‌ ಭನ್ವಾಲ್‌ ಎಂಬ ಬಾಲಕ ಈ ವಯಸ್ಸಿನಲ್ಲಿ ಜಗತ್ತೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾನೆ. ಇಡೀ ಭಾರತವೇ ಹೆಮ್ಮೆ ಪಡುವಂಥ ಸಾಧನೆ ಮಾಡಿದ್ದಾನೆ.

ಅನೀಶ್‌ ಇತ್ತೀಚೆಗೆ ಗೋಲ್ಡ್‌ಕೋಸ್ಟ್‌ನಲ್ಲಿ ನಡೆದ ಕಾಮನ್‌ವೆಲ್ತ್‌ ಗೇಮ್ಸ್‌ನ 25 ಮೀ. ರ್ಯಾಪಿಡ್‌ ಫೈಯರ್‌ ಪಿಸ್ತೂಲ್‌ ವಿಭಾಗದಲ್ಲಿ ಜಗತ್ತಿನ ಘಟಾನುಘಟಿಗಳನ್ನು ಮಣಿಸಿ ಚಿನ್ನದ ಪದಕ ಗೆದ್ದಿದ್ದಾನೆ. ಆ ಮೂಲಕ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಅತೀ ಕಿರಿಯ ಕ್ರೀಡಾಪಟು ಎಂಬ ದಾಖಲೆ ನಿರ್ಮಿಸಿದ್ದಾನೆ. ಕೇವಲ 15ನೇ ವಯಸ್ಸಿನಲ್ಲಿಯೇ ಈ ಸಾಧನೆ ಮಾಡುವ ಮೂಲಕ ಮುಂದೆ ತಾನೊಬ್ಬ ವಿಶ್ವ ವಿಖ್ಯಾತ ಶೂಟರ್‌ ಆಗಿ ಹೊರಹೊಮ್ಮುವ ಸೂಚನೆ ನೀಡಿದ್ದಾನೆ.

ಕ್ರೀಡಾ ಕುಟುಂಬದ ಹಿನ್ನೆಲೆ
 ಕ್ರೀಡಾ ಕುಟುಂಬದಲ್ಲಿ ಜನಿಸಿದ ಅನೀಶ್‌ಗೆ  ಸಹಜವಾಗಿ ರಕ್ತದಲ್ಲಿಯೇ ಕ್ರೀಡೆಯ ಅಂಶ ಸೇರ್ಪಡೆಯಾಗಿದೆ. ಪ್ರಾಥಮಿಕ ಶಾಲೆಯಲ್ಲಿಯೇ ವಿವಿಧ ಕ್ರೀಡೆಯಲ್ಲಿ ಪಾಲ್ಗೊಳ್ಳುತ್ತಿದ್ದ ಅನೀಶ್‌, ನಂತರದಲ್ಲಿ ಶೂಟಿಂಗ್‌ ಅಭ್ಯಾಸ ಆರಂಭಿಸಿದ ಆತನಿಗೆ ಕುಟುಂಬದ ಸಂಪೂರ್ಣ ಬೆಂಬಲವಿತ್ತು. ಹೀಗಾಗಿಯೇ 12ನೇ ವಯಸ್ಸಿನಿಂದಲೇ ರಾಷ್ಟ್ರೀಯ, ಅಂತಾರಾಷ್ಟ್ರೀಯ ಕೂಟಗಳಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿತು. ಸಿಕ್ಕಿರುವ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಅನೀಶ್‌ ಯಶಸ್ವಿಯಾದ.

2017ರಲ್ಲಿ ವಿಶೇಷ ಸಾಧನೆ
ಅನೀಶ್‌ ಕ್ರೀಡಾ ಬದುಕಿನಲ್ಲಿ 2017 ವಿಶೇಷವಾದ ವರ್ಷವಾಗಿದೆ. ಜೂನಿಯರ್‌ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ 2 ಚಿನ್ನ, 2 ಬೆಳ್ಳಿ, 1 ಕಂಚಿನ ಪದಕ ಗೆದ್ದಿದ್ದಾರೆ. ಬ್ರಿಸ್ಬೇನ್‌ನಲ್ಲಿ ನಡೆದ ಕಾಮನ್‌ವೆಲ್ತ್‌ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಹೀಗೆ ಜೂನಿಯರ್‌ ವಿಭಾಗದಲ್ಲಿ ಮಾಡಿದ ಸಾಧನೆಯಿಂದಲೇ ಕಾಮನ್‌ವೆಲ್ತ್‌ ಗೇಮ್ಸ್‌ಗೆ ಅವಕಾಶ ಸಿಕ್ಕಿತು. ಪದಾರ್ಪಣೆಯ ಗೇಮ್ಸ್‌ನಲ್ಲಿಯೇ ಚಿನ್ನವನ್ನು ಗೆಲ್ಲುವ ಮೂಲಕ ಈತ ದಾಖಲೆ ನಿರ್ಮಿಸಿದ್ದಾನೆ.

ಯುವ ಪ್ರತಿಭೆಗಳಿಗೆ ಸ್ಫೂರ್ತಿ
ವಯಸ್ಸು ಚಿಕ್ಕದಾದರೂ ಆಟದೆಡೆಗೆ ಪ್ರೀತಿ ಹಾಗೂ ಸಾಧಿಸುವೆನೆಂಬ ಛಲವಿದ್ದರೆ ದೊಡ್ಡ ಸಾಧನೆ ಮಾಡಲು ಸಾಧ್ಯ. ಸಾಧನೆಗೆ ವಯಸ್ಸು ನಿರ್ಣಾಯಕವಲ್ಲ. ಸಾಧಿಸುವ ಛಲ, ಗುರಿ, ಸತತ ಅಭ್ಯಾಸವಿದ್ದರೆ ಸಾಧನೆ ಸಾಧ್ಯ ಅನ್ನುವುದನ್ನು ಅನೀಶ್‌ ತೋರಿಸಿದ್ದಾರೆ. ಇದು ಸಹಜವಾಗಿ ಕ್ರೀಡಾ ಕ್ಷೇತ್ರದಲ್ಲಿರುವ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿದೆ.

    

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.