ಬಿಎಸ್ವೈಗೆ ಭ್ರಷ್ಟಾಚಾರದ ಬಗ್ಗೆ ಮಾತಾಡೋ ಹಕ್ಕಿಲ್ಲ
Team Udayavani, Apr 29, 2018, 7:45 AM IST
ಚಿಕ್ಕೋಡಿ: ಕಾಂಗ್ರೆಸ್ ಸರಕಾರದ ಮೇಲೆ ಇಲ್ಲ ಸಲ್ಲದ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಪ್ರಧಾನಿ ಮೋದಿ ಮತ್ತು ಅಮಿತ್ ಶಾ, ಜೈಲಿಗೆ ಹೋಗಿ ಬಂದ ಭ್ರಷ್ಟ ಮುಖ್ಯಮಂತ್ರಿ ಯಡಿಯೂರಪ್ಪ ಪಕ್ಕದಲ್ಲಿಯೇ ಇರುವುದನ್ನು ಮರೆತಿದ್ದಾರೆ. ಬಿಜೆಪಿ ಸರಕಾರದ ಅವ ಧಿಯಲ್ಲಿ ಸಾಲು ಸಾಲಾಗಿ ಜೈಲಿಗೆ ಹೋಗಿ ಬಂದವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕು ಉಳಿಸಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ನಿಪ್ಪಾಣಿಯ ಬೇಡಕಿಹಾಳದಲ್ಲಿ ಮಾತನಾಡಿ, 5 ವರ್ಷಗಳ ಕಾಲ ರಾಜ್ಯದಲ್ಲಿ ಆಡಳಿತ ನಡೆಸಿರುವ ಕಾಂಗ್ರೆಸ್ ಸರಕಾರದ ಅಭಿವೃದ್ಧಿ ಕಾರ್ಯಗಳು ಹಾಗೂ ಕೇಂದ್ರದ ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚೆ ಮಾಡೋಣ. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಇಬ್ಬರೂ ಒಂದೇ ವೇದಿಕೆಗೆ ಬರಲಿ ಎಂದು ಸವಾಲು ಹಾಕಿದರು.